AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಭರ್ಜರಿ ಹಣ ಸಂಪಾದಿಸಿ; ಜಾಹೀರಾತು ವೈರಲ್

ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಲಕ್ಷ ಲಕ್ಷ ಹಣ ಸಂಪಾದಿಸಿ ಎಂದು ಜಾಬ್‌ ಆಫರ್‌ ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ವಿವಾದಾತ್ಮಕ ಜಾಹಿರಾತು ನೀಡಿ ಜನರಿಂದ ಹಣ ಪೀಕುತ್ತಿದ್ದ ಇಬ್ಬರು ಆರೋಪಿಗಳನ್ನು ‌ ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ವೈರಲ್‌ ಆಗುತ್ತಿದೆ.

Viral: ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಭರ್ಜರಿ ಹಣ ಸಂಪಾದಿಸಿ; ಜಾಹೀರಾತು ವೈರಲ್
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jul 08, 2024 | 5:26 PM

Share

ಆಧುನಿಕ ತಂತ್ರಜ್ಞಾನ ಬೆಳೆದಂತೆ ಮೋಸ, ವಂಚನೆಗಳ ಪ್ರಕರಣಗಳೂ ಹೆಚ್ಚಾಗುತ್ತಿದೆ. ಒಂದೆಡೆ ಮೊಬೈಲ್‌ ನಂಬರ್‌, ಬ್ಯಾಂಕ್‌ ಖಾತೆ ನಂಬರ್‌ಗಳಿಂದ ಹಲವು ರೀತಿಯಲ್ಲಿ ಹಣವನ್ನು ಖದೀಮರು ದೋಚಿದರೆ, ಇನ್ನೊಂದೆಡೆ ಸೋಷಿಯಲ್‌ ಮೀಡಿಯಾದಲ್ಲಿ ಮನೆಯಲ್ಲಿಯೇ ಕುಳಿತು ದಿನಕ್ಕೆ ಐದರಿಂದ ಹತ್ತು ಸಾವಿರ ರೂಪಾಯಿ ಗಳಿಸಬಹುದು ಎಂಬ ಫೇಕ್‌ ಜಾಬ್‌ ಆಫರ್‌ಗಳನ್ನು ನೀಡುವ ಮೂಲಕ ಜನರಿಗೆ ವಂಚನೆ ಮಾಡುತ್ತಿರುತ್ತಾರೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು ವಂಚಕರಿಬ್ಬರು ಸಾಮಾಜಿಕ ಜಾಲತಾಣದಲ್ಲಿ “ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಲಕ್ಷಗಟ್ಟಲೆ ಹಣ ಸಂಪಾದಿಸಿ” ಎಂಬ ನಕಲಿ ಜಾಹಿರಾತುಗಳನ್ನು ನೀಡಿ ಜನರಿಂದ ಹಣ ದೋಚುವ ಕೆಲಸಕ್ಕೆ ಇಳಿದಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ಆಘಾತಕಾರಿ ಘಟನೆ ಹರಿಯಾಣದ ಸುಹ್‌ ಜಿಲ್ಲೆಯಲ್ಲಿ ನಡೆದಿದ್ದು, ವಂಚಕರಿಬ್ಬರು ಆನ್‌ಲೈನ್‌ನಲ್ಲಿ “ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಭರ್ಜರಿ ಹಣ ಸಂಪಾದಿಸಿ” ಎಂಬ ಜನರ ದಿಕ್ಕು ತಪ್ಪಿಸುವಂತ ಜಾಹೀರಾತುಗಳನ್ನು ಪೋಸ್ಟ್‌ ಮಾಡಿ, ಜನರಿಂದ ಹಣ ದೋಚುವಂತಹ ಕೆಲಸಕ್ಕೆ ಇಳಿದಿದ್ದರು. ವಂಚಕರು ನಕಲಿ ಜಾಹಿರಾತುಗಳನ್ನು ಪೋಸ್ಟ್‌ ಮಾಡುತ್ತಿದ್ದರು. ಮತ್ತು ಜನರನ್ನು ಬಲೆಗೆ ಬೀಳಿಸಿ ಮಹಿಳೆಯರ ನಕಲಿ ಫೋಟೋಗಳನ್ನು ಸೆಂಡ್‌ ಮಾಡಿ ನಂತರ ನೋಂದಣಿ ಮತ್ತು ಫೈಲಿಂಗ್‌ ಶುಲ್ಕವನ್ನು ವಿಧಿಸಿ ಮೂಲಕ ಹಣ ದೋಚುತ್ತಿದ್ದರು.

ಇದನ್ನೂ ಓದಿ: ಹಾಯ್‌ ಫ್ರೆಂಡ್ಸ್‌ ಇವತ್ತು ನಮ್ಮ ಫಸ್ಟ್‌ ನೈಟ್‌, ಮೊದಲ ರಾತ್ರಿಯ ವಿಡಿಯೋ ಹಂಚಿಕೊಂಡ ನವ ಜೋಡಿ

ಈ ವಿಚಾರ ಪೊಲೀಸರ ಗಮನಕ್ಕೆ ಬಂದಿದ್ದು, ಈ ವಿವಾದಾತ್ಮಕ ಜಾಹಿರಾತನ್ನು ಕಂಡು ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ನಂತರ ಸೂಕ್ತ ತನಿಖೆ ನಡೆಸಿದ್ದು, ತನಿಖೆಯ ವೇಳೆ ನಾಲ್ಕು ನಕಲಿ ಫೇಸ್‌ಬುಕ್‌ ಖಾತೆಗಳು ಮತ್ತು ಜಾಹಿರಾತುಗಳು ಪತ್ತೆಯಾಗಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಐದು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳಾದ ಎಜಾಜ್‌ ಮತ್ತು ಇರ್ಷಾದ್‌ ನನ್ನು ಬಂಧಿಸಲಾಗಿದೆ. ಬಳಿಕ ಶನಿವಾರ (ಜುಲೈ 7) ಆರೋಪಿಗಳನ್ನು ನುಹ್‌ನಲ್ಲಿರುವ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ