AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನಾನು ಹಣ ನೀಡಲ್ಲ ಅಷ್ಟೆ… ಬಸ್‌ ಟಿಕೆಟ್‌ ದರ ಪಾವತಿಸಲು ನಿರಾಕರಿಸಿದ ಮಹಿಳಾ ಪೊಲೀಸ್

ಪೊಲೀಸರು ತೋರುವ ದರ್ಪಗಳಿಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ರಾಜಸ್ಥಾನದ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹರಿಯಾಣದ ಮಹಿಳಾ ಕಾನ್‌ಸ್ಟೇಬಲ್‌ ಟಿಕೆಟ್‌ ಹಣವನ್ನು ನೀಡಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಕಂಡಕ್ಟರ್‌ ಲೇಡಿ ಕಾನ್‌ಸ್ಟೇಬಲ್‌ಗೆ ದಂಡ ವಿಧಿಸಿದ್ದು, ಈ ಘಟನೆ ಇದೀಗ ಎರಡೂ ರಾಜ್ಯಗಳ ನಡುವೆ ಚಲನ್‌ ವಾರ್‌ಗೆ ನಾಂದಿಯಾಗಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 28, 2024 | 11:19 AM

Share

ಕೆಲ ಪೊಲೀಸರು ಟಿಕೆಟ್‌ ಹಣ ನೀಡದೆ ಬಸ್ಸಿನಲ್ಲಿ ಪ್ರಯಾಣಿಸುವುದನ್ನು ನೀವು ಕೂಡಾ ಗಮನಿಸಿರುತ್ತೀರಿ ಅಲ್ವಾ. ಹೀಗೆ ಕೆಲ ಅಧಿಕಾರಿಗಳು ತಮ್ಮ ಗುರುತಿನ ಚೀಟಿ ತೋರಿಸಿ ಹಣ ಕೊಡದೆ ಹೋಗ್ತಾರೆ. ಬಸ್‌ ಕಂಡಕ್ಟರ್‌ಗಳೂ ಕೂಡಾ ಅಷ್ಟೇ ಪೊಲೀಸರಿಗೆ ಟಿಕೆಟ್‌ ನೀಡಲ್ಲ. ಆದ್ರೆ ಇದೀಗ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಬಸ್‌ ನಿರ್ವಾಹಕನೇ ಟಿಕೆಟ್‌ ಹಣ ಕೊಡಿ ಎಂದು ಬಾಯ್ಬಿಟ್ಟು ಕೇಳಿದರೂ ಲೇಡಿ ಕಾನ್‌ಸ್ಟೇಬಲ್‌ ಒಬ್ಬರು ಟಿಕೆಟ್‌ ದರ ನೀಡಲು ನಿರಾಕರಿಸಿದ್ದಾರೆ. ಹೌದು ನಾನು ಪೊಲೀಸ್‌ ನಾನ್ಯಾಕೆ ಹಣ ನೀಡ್ಬೇಕು ಎಂದು ಕಂಡಕ್ಟರ್‌ ಬಳಿ ದರ್ಪ ತೋರಿದ್ದಾರೆ. ಇದರಿಂದ ಕೋಪಗೊಂಡ ಕಂಡಕ್ಟರ್‌ ಲೇಡಿ ಕಾನ್‌ಸ್ಟೇಬಲ್‌ಗೆ ದಂಡ ವಿಧಿಸಿದ್ದು, ಈ ಘಟನೆ ಇದೀಗ ಎರಡೂ ರಾಜ್ಯಗಳ ನಡುವೆ ಚಲನ್‌ ವಾರ್‌ಗೆ ನಾಂದಿಯಾಗಿದೆ. ಈ ಕುರಿತ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಹರಿಯಾಣದ ರೇವಾರಿಯ ಧುರುಹೇರಾ ಸುತ್ತಮುತ್ತಲಿನಲ್ಲಿ ನಡೆದಿದ್ದು ಎನ್ನಲಾಗುತ್ತಿದೆ. ಇಲ್ಲಿ ರಾಜಸ್ಥಾನ ರೋಡ್‌ವೇಸ್‌ ಬಸ್ಸಿನಲ್ಲಿ ಧರುಹೇರಾವರೆಗೆ ಪ್ರಯಾಣಿಸುತ್ತಿದ್ದ ಹರಿಯಾಣದ ಮಹಿಳಾ ಕಾನ್‌ಸ್ಟೇಬಲ್‌ 50 ರೂ. ಟಿಕೆಟ್‌ ಹಣವನ್ನು ನೀಡಲು ನಿರಾಕರಿಸಿದ್ದಾರೆ. ಕಂಡಕ್ಟರ್‌ ಪದೇ ಪದೇ ಟಿಕೆಟ್‌ ಹಣ ಕೇಳಿದರೂ ಇದಕ್ಕೆ ಪೊಲೀಸ್‌ ಒಲ್ಲೆ ಎಂದಿದ್ದಾರೆ. ಇದರಿಂದ ಕೋಪಗೊಂಡ ಕಂಡಕ್ಟರ್‌ ಲೇಡಿ ಕಾನ್‌ಸ್ಟೇಬಲ್‌ಗೆ ದಂಡ ವಿಧಿಸಿದ್ದಾರೆ. ಪೊಲೀಸ್‌ ಪೇದೆಗೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಹರಿಯಾಣದ ಪೊಲೀಸರು ಪ್ರಮಾಣ ಪತ್ರ ಇಲ್ಲ, ಕಂಡಕ್ಟರ್‌, ಡ್ರೈವರ್‌ ಸರಿಯಾಗಿ ಸಮವಸ್ತ್ರ ಧರಿಸಿಲ್ಲ, ಟೈರ್‌ಗಳಲ್ಲಿ ಗಾಳಿಯಿಲ್ಲ ಎಂಬಿತ್ಯಾದಿ ಕಾರಣಗಳನ್ನು ಹುಡುಕಿ ಆ ರಾಜ್ಯದ ಮಾರ್ಗದಲ್ಲಿ ಚಲಿಸುವ ರಾಜಸ್ಥಾನದ 90 ಬಸ್‌ಗಳಿಗೆ ದಂಡ ವಿಧಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜಸ್ಥಾನದಲ್ಲೂ ಕೂಡಾ ಹರಿಯಾಣದ 26 ಬಸ್‌ಗಳಿಗೆ ದಂಡ ವಿಧಿಸಲಾಗಿದೆ. ಈ ಗಲಾಟೆ ರಾಜಸ್ಥಾನ ಮತ್ತು ಹರಿಯಾಣದಲ್ಲಿ ಭಾರೀ ಕೋಲಾಹಲವನ್ನು ಉಂಟು ಮಾಡಿದ್ದು, ಇದೀಗ ರಾಜಸ್ಥಾನದ ಸಾರಿಗೆ ಇಲಾಖೆಯ ಅಧಿಕಾರಿಗಳು ಹರಿಯಾಣದ ಪೊಲೀಸ್‌ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಯನ್ನು ತಿಳಿಗೊಳಿಸುವ ಕ್ರಮ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕಂಡಕ್ಟರ್‌ ಟಿಕೆಟ್‌ ಹಣ ಕೊಡಿ ಎಂದು ಕೇಳಿದರೂ ಲೇಡಿ ಕಾನ್‌ಸ್ಟೇಬಲ್‌ ನಾನು ಟಿಕೆಟ್‌ ದರ ಪಾವತಿಸಲ್ಲ ಎಂದು ಹೇಳುವ ದೃಶ್ಯವನ್ನು ಕಾಣಬಹುದು. ನಾನು ಹರಿಯಾಣದ ಪೊಲೀಸ್‌ ನಾನ್ಯಾಕೆ ಹಣ ಕೊಡ್ಬೇಕು ಎಂದು ಬಸ್‌ ಕಂಡಕ್ಟರನ್ನೇ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೇಂಟ್‌ ವೀಲ್ಹ್‌ನಲ್ಲಿ ಕುಳಿತು ಲಿಪ್‌ ಲಾಕ್‌ ಮಾಡಿದ ಜೋಡಿ; ವೈರಲ್‌ ಆಯ್ತು ವಿಡಿಯೋ

ShoneeKapoor ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ 15 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇಂತಹವರನ್ನು ಸೇವೆಯಿಂದ ಮೊದಲು ವಜಾಗೊಳಿಸಬೇಕುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಕಂಡಕ್ಟರ್‌ ಟಿಕೆಟ್‌ ಹಣ ಕೇಳಿದ್ದು ಸರಿ, ಆದ್ರೆ ಆತನಿಗೆ ದಂಡ ವಿಧಿಸುವ ಅಧಿಕಾರ ಇಲ್ಲʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ
ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
ಇದು ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿ ಮಾಡಿದ ಅಪಘಾತ
ಇದು ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿ ಮಾಡಿದ ಅಪಘಾತ