AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OYO ರೂಮ್ ಮುಚ್ಚಿಸಿದ್ದೀರಾ, ಈಗ ನಮಗೆ ನೀವೇ ರೂಮ್​​​ ನೀಡಿ ಶಾಸಕರ ಮುಂದೆ ಬೇಡಿಕೆಯಿಟ್ಟ ಲವರ್ಸ್​​

ಪಾರ್ಕ್​​​ ಮೇಲೆ ದಾಳಿ ಮಾಡಿ ಅಲ್ಲಿದ್ದ ಲವರ್ಸ್​​ಗಳನ್ನು ಪಾರ್ಕ್​​ನಿಂದ ಹೊರಗೆ ಹೋಗುವಂತೆ ಹೇಳಿದ ಶಾಸಕರಿಗೆ ಲವರ್ಸ್​​​​ಗಳು ವಿಶೇಷ ಬೇಡಿಕೆಯನ್ನು ಇಟ್ಟಿದ್ದಾರೆ. ಪಾರ್ಕ್​​ನ ಅಕ್ಕಪಕ್ಕದ ನಿವಾಸಿಗಳು ನೀಡಿದ ದೂರಿನ ಆಧಾರದ ಮೇಲೆ ಶಾಸಕರು ಈ ದಾಳಿಯನ್ನು ನಡೆಸಿದ್ದಾರೆ. ಶಾಸಕರ ಈ ಕ್ರಮಕ್ಕೆ ಜೋಡಿ ಹಕ್ಕಿಗಳು ಕೋಪಗೊಂಡಿದ್ದಾರೆ. ನಮಗೆ OYO ರೂಮ್​​ ನೀಡಿ. ಈಗಾಗಲೇ ಅವುಗಳನ್ನು ಮುಚ್ಚಿಸಿದ್ದೀರಾ ಎಂದು ಶಾಸಕರಿಗೆ ಮುಂದೆ ಪ್ರಶ್ನೆ ಮಾಡಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on: Apr 23, 2024 | 3:54 PM

Share

ಪಾರ್ಕ್​ನಲ್ಲಿ ಲವರ್ಸ್​​​​​​ ಏಕಾಂತದಲ್ಲಿರಬೇಕಾದರೆ ಶಾಸಕರೊಬ್ಬರು ಈ ಪಾರ್ಕ್​​ಗೆ ದಾಳಿ ಮಾಡಿದ್ದಾರೆ, ಅಲ್ಲಿದ್ದ ಜೋಡಿಗಳನ್ನು ಪಾರ್ಕ್​​ನಿಂದ ಹೊರಗೆ ಹೋಗುವಂತೆ ಹೇಳಿದ್ದಾರೆ. ಇವರ ಈ ಕ್ರಮಕ್ಕೆ ರೋಚಿಗೆದ್ದು ಪ್ರೇಮಿಯೊಬ್ಬ OYO ರೂಮ್​ಗಳನ್ನು  ಮುಚ್ಚಿದೆ. ನೀವೇ ನಮಗೆ OYO ರೂಮ್​​​​​​​ ವ್ವವಸ್ಥೆ ಮಾಡಿ ಎಂದು ಹೇಳಿದ್ದಾರೆ, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಛತ್ತೀಸ್​​​ಗಢದ ಶಾಸಕ ರಿಕೇಶ್​ ಸೇನ್​​​ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಈ ವಿಡಿಯೋದಲ್ಲಿ ಶಾಸಕರು ಕಾರಿನಲ್ಲಿ ಬಂದು ಪಾರ್ಕ್​​ ಬಳಿ ಇಳಿಯುತ್ತಾರೆ. ತಮ್ಮ ಸಹಾಯಕರಲ್ಲಿ ಎಲ್ಲವನ್ನು ವಿಡಿಯೋ ಮಾಡಿಕೊಳ್ಳುವಂತೆ ಹೇಳುತ್ತಾರೆ. ಶಾಸಕರು ಪ್ರೇಮಿಗಳ ಬಳಿ ಹೋಗಿ, ಪಾರ್ಕ್​​​ನಿಂದ ಹೊರಗೆ ಹೋಗುವಂತೆ ಹೇಳುತ್ತಾರೆ. ಆದರೆ ಇವರ ಈ ಕ್ರಮವನ್ನು ಯುವಕನೊಬ್ಬ ಪ್ರಶ್ನೆ ಮಾಡುತ್ತಾರೆ. ನಾವು ಏಲ್ಲಿಗೆ ? ಹೋಗಬೇಕು. ಈಗಾಗಲೇ ನೀವು OYO ಮುಚ್ಚಿಸಿದ್ದೀರಾ? ನಮಗೆ OYO ವ್ಯವಸ್ಥೆ ಮಾಡಿ ಎಂದು ಕೇಳಿದ್ದಾರೆ. ಇದಕ್ಕೆ ಕೋಪಗೊಂಡ ಶಾಸಕರು, OYO ಬದಲು ನಿಮ್ಮ ಮನೆಯಲ್ಲೇ ಟೈಮ್​​ ಪಾಸ್​​ ಮಾಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಂಥಾ ಕಾಲ ಬಂತು ಗುರು ಫೋನ್ ಕಾಲಿಂಗ್ ಮೂಲಕ ದೇವರಿಗೆ ಪ್ರಾರ್ಥನೆ

ಶಾಸಕರು ಭಿಲಾಯಿ ನಗರದಲ್ಲಿರುವ ಈ ಪಾರ್ಕ್​​ನ ಅಕ್ಕಪಕ್ಕದ ಜನರು ಲವರ್ಸ್​​​ಗಳು ಈ ಪಾರ್ಕ್​​ಗೆ ಭೇಟಿ ನೀಡುವ ಕಾರಣ ನಮಗೆ ತೊಂದರೆ ಆಗುತ್ತಿದೆ ಎಂದು ಶಾಸಕರಿಗೆ ದೂರು ನೀಡಿದ್ದಾರೆ. ಹಾಗಾಗಿ ಶಾಸಕರು ಈ ಪಾರ್ಕ್​​ಗೆ ಭೇಟಿ ನೀಡಿದ್ದಾರೆ. ಈ ಹಿಂದೆ ಇದೆ ಶಾಸಕರು OYO ಹೋಟೆಲ್​​​ ಮೇಲೆ ದಾಳಿ ಮಾಡಿದ್ದರು. ನಂತರ ಎರಡು ಹೋಟೆಲ್​​ಗಳನ್ನು ಮುಚ್ಚಲಾಗಿತ್ತು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು