AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಮಧ್ಯೆ ಸ್ಕೂಟಿಯಲ್ಲಿ ವಿಶ್ರಾಂತಿ ಪಡೆಯುವುದನ್ನು ನೀವು ಎಂದಾದರೂ ನೋಡಿದ್ದೀರಾ? ಇಲ್ಲಿದೆ ವೈರಲ್ ವಿಡಿಯೋ

ಟ್ರಾಫಿಕ್ ಮಧ್ಯೆ ಯಾರಾದರೂ ಸ್ಕೂಟಿಯಲ್ಲಿ ವಿಶ್ರಾಂತಿ ಪಡೆಯುವುದನ್ನು ನೀವು ಎಂದಾದರೂ ನೋಡಿದ್ದೀರಾ? ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ವಿಡಿಯೋವೊಂದು ವೈರಲ್ ಆಗಿದೆ.

ಟ್ರಾಫಿಕ್ ಮಧ್ಯೆ ಸ್ಕೂಟಿಯಲ್ಲಿ ವಿಶ್ರಾಂತಿ ಪಡೆಯುವುದನ್ನು ನೀವು ಎಂದಾದರೂ ನೋಡಿದ್ದೀರಾ? ಇಲ್ಲಿದೆ ವೈರಲ್ ವಿಡಿಯೋ
ಟ್ರಾಫಿಕ್ ಮಧ್ಯೆ ಸ್ಕೂಟಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ವ್ಯಕ್ತಿ
TV9 Web
| Edited By: |

Updated on: Jun 15, 2022 | 2:00 PM

Share

ದೊಡ್ಡ ದೊಡ್ಡ ನಗರಗಳಲ್ಲಿ ಸಾಮಾನ್ಯವಾಗಿ ಟ್ರಾಫಿಕ್ ಜಾಮ್ ಸಂಭವಿಸುತ್ತದೆ. ಮತ್ತು ಜನರು ಒಂದೇ ಸ್ಥಳದಲ್ಲಿ ದೀರ್ಘಕಾಲದವರೆಗೂ ಟ್ರಾಫಿಕ್ ಜಾಮ್​ನಲ್ಲಿ ಕಳೆಯಬೇಕಾಗುತ್ತದೆ. ಬೆಂಗಳೂರಿನಂತಹ ಸಿಟಿಗಳಲ್ಲಿ ಟ್ರಾಫಿಕ್​ನಿಂದ ಪಾರಾಗಿ ಬರುವುದೆ ಒಂದು ಸಾಹಸ. ಅಂತಹ ಸಂದರ್ಭಗಳಲ್ಲಿ ಅನೇಕ ಜನರು ತಮ್ಮ ಕಾರಿನಲ್ಲಿ ಕುಳಿತು ಹಾಡನ್ನು ಕೇಳುವುದು ಅಥವಾ ಮೊಬೈಲ್‌ನಲ್ಲಿ ಮಾತನಾಡುವುದನ್ನು ನಾವು ನೀವು ನೋಡಿರುತ್ತೇವೆ. ಆದರೆ ಟ್ರಾಫಿಕ್ ಮಧ್ಯೆ ಯಾರಾದರೂ ಸ್ಕೂಟಿಯಲ್ಲಿ ವಿಶ್ರಾಂತಿ ಪಡೆಯುವುದನ್ನು ನೀವು ಎಂದಾದರೂ ನೋಡಿದ್ದೀರಾ? ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಏಕೆಂದರೆ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಟ್ರಾಫಿಕ್ ಮಧ್ಯೆ ತನ್ನ ಸ್ಕೂಟಿ ಮೇಲೆ ವಿಶ್ರಾಂತಿ ಪಡೆಯುತ್ತಿದ್ದಾನೆ.

View this post on Instagram

A post shared by Memes | YooBros (@yoo_bros)

ಈ ವೈರಲ್ ವಿಡಿಯೋದಲ್ಲಿ ನೀವು ಸುತ್ತಲೂ ಕಾರುಗಳು ನಿಲ್ಲಿಸಿರುವುದನ್ನು ನೋಡಬಹುದು. ಜನ ಸಂಚಾರಕ್ಕೆ ಕಾಯುತ್ತಿದ್ದಾರೆ. ಆದರೆ ಅಷ್ಟರಲ್ಲಿ ವ್ಯಕ್ತಿಯೊಬ್ಬ ತನ್ನ ಸ್ಕೂಟಿಯ ಮೇಲೆ ಕಾಲುಗಳನ್ನು ಅಗಲಿಸಿ ಆರಾಮವಾಗಿ ಮಲಗಿರುವುದನ್ನು ವಿಡಿಯೋದಲ್ಲಿ ಗಮನಿಸಬಹುವುದು. ಆತ ಸ್ಕೂಟಿ ಮೇಲೆ ಅಲ್ಲ, ಮನೆಯ ಹಾಸಿಗೆಯ ಮೇಲೆ ಮಲಗಿರುವಂತೆ ಕಾಣುತ್ತದೆ. ನಂತರ ಟ್ರಾಫಿಕ್ ತೆರೆದ ತಕ್ಷಣ ಅವನು ಎದ್ದು ಕುಳಿತುಕೊಳ್ಳುತ್ತಾನೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್​ಗೆ ಹೈಕೋರ್ಟ್​ನಿಂದ ಬಿಗ್ ರಿಲೀಫ್

ಜನರು ಈ ವಿಡಿಯೋವನ್ನು ತುಂಬಾ ತಮಾಷೆಯಾಗಿ ತೆಗೆದುಕೊಂಡಿದ್ದಾರೆ. yoo__bros ಎಂಬ Instagram ಪುಟದಿಂದಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಇದುವರೆಗೆ 26 ಸಾವಿರಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ. ಈ ವಿಡಿಯೋಗೆ ಜನರು ಸಾಕಷ್ಟು ತಮಾಷೆಯ ಕಾಮೆಂಟ್‌ಗಳನ್ನು ಸಹ ಮಾಡುತ್ತಿದ್ದಾರೆ. ನಾವು ರಸ್ತೆಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ನಾಚಿಕೆಪಡುತ್ತೇವೆ. ಆದರೆ ಈತ ಟ್ರಾಫಿಕ್‌ನಲ್ಲಿ ಮಲಗಿದ್ದಾರೆ ಮತ್ತು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಕಮೆಂಟ್ ಮಾಡಲಾಗಿದೆ.

ಇನ್ನಷ್ಟು ಟ್ರೆಂಡಿಂಗ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು