AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಿಸಿದ್ರೆ ಇಂತಹ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸ್ಬೇಕು! ಏನ್​​ ಅದ್ಭುತವಾಗಿದೆ ನೋಡಿ

ಇತ್ತೀಚಿನ ದಿನಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಸಖತ್ ಟ್ರೆಂಡ್ ಅಲ್ಲಿದೆ. ಬಹುತೇಕ ಎಲ್ಲರೂ ವೆಸ್ಟರ್ನ್ ಶೈಲಿಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡರೆ, ಇಲ್ಲೊಂದು ಜೋಡಿ ಮಾತ್ರ ಭಾರತೀಯ ಸಂಸ್ಕೃತಿಯಂತೆ ವಿಶಿಷ್ಟವಾಗಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ನೋಡಿದ ಅನೇಕರು  ಪ್ರೀ ವೆಡ್ಡಿಂಗ್ ಶೂಟ್ ಅಂದ್ರೆ ಇದಪ್ಪಾ… ಎಂದು ಹೊಗಳಿಕೆಯ ಮಾತುಗಳನ್ನಾಡುತ್ತಿದ್ದಾರೆ. 

ಮಾಡಿಸಿದ್ರೆ ಇಂತಹ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸ್ಬೇಕು! ಏನ್​​ ಅದ್ಭುತವಾಗಿದೆ ನೋಡಿ
ವೈರಲ್ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 08, 2023 | 3:24 PM

Share

ಇತ್ತೀಚಿನ ದಿನಗಳಲ್ಲಿ ಪ್ರೀ ವೆಡ್ಡಿಂಗ್ ಮತ್ತು ಪೋಸ್ಟ್ ವೆಡ್ಡಿಂಗ್ ಶೂಟ್ ತುಂಬಾ ಟ್ರೆಂಡಿಂಗ್ ಅಲ್ಲಿದೆ. ಬಹುತೇಕ ವಿವಾಹವಾಗುವಂತಹ ಎಲ್ಲಾ ಜೋಡಿಗಳು ವಿವಿಧ ಥೀಮ್ ಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಳ್ಳಬೇಕೆಂದು ಬಯಸುತ್ತಾರೆ. ಮತ್ತು   ಈ ಕ್ಷಣವನ್ನು ಸ್ಮರಣೀಯವಾಗಿರಿಸಲು ಕೆಲವೊಬ್ಬರು ವಿದೇಶಕ್ಕೆ ಹೋಗಿ  ಪ್ರೀ ವೆಡ್ಡಿಂಗ್ ಶೂಟ್  ಮಾಡಿಸಿಕೊಂಡರೆ,  ಕೆಲವೊಬ್ಬರು ಬೀಚ್, ನಿಸರ್ಗದ ಮಡಿಲಲ್ಲಿ, ಸ್ನೋ ಫಾಲ್ ಇತ್ಯಾದಿ ಸ್ಥಳಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸುತ್ತಾರೆ.  ಅದರಲ್ಲೂ ಇನ್ನೂ ಕೆಲವೊಬ್ಬರೂ ಸಭ್ಯತೆಯ ಎಲ್ಲೆ ಮೀರಿ   ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಈ ಹಿಂದೆ ಕೇರಳದ ಜೋಡಿಯೊಂದು ಅಸಭ್ಯ ರೀತಿಯಲ್ಲಿ ಪೋಸ್ಟ್ ವೆಡ್ಡಿಂಗ್ ಶೂಟ್ ಮಾಡಿಸಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಆದರೆ ಇಲ್ಲೊಂದು ಜೋಡಿ ನಮ್ಮ ಸಂಸ್ಕೃತಿ, ಸಂಪ್ರದಾಯದಕ್ಕೆ ಸರಿ ಹೊಂದುವಂತೆ  ಅದ್ಭುತವಾದ ಥೀಮ್ ಇಟ್ಟುಕೊಂಡು ಪ್ರೀ ವೆಡಿಂಗ್ ಶೂಟ್ ಮಾಡಿದ್ದಾರೆ.   ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರಿಂದ  ಭಾರಿ ಮೆಚ್ಚುಗೆಯನ್ನು ಪಡೆದುಕೊಂಡಿದೆ.

ಶಿವಾರ್ಚಕ ಮಧು ದೀಕ್ಷೀತ್ ದಂಪತಿ ಈ  ಅದ್ಭುತ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದು, ಈ  ವಿಡಿಯೋವನ್ನು ನಿತ್ಯಾನಂದ ಎಸ್.ಬಿ ಎಂಬವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಾಗೂ  ʼಇದ್ದಪ್ಪಾ ಪ್ರೀ ವೆಡಿಂಗ್ ಶೂಟ್ ಅಂದ್ರೆ!!!ʼ ಎಂಬ ಶೀರ್ಷಿಕೆಯನ್ನು ಕೂಡಾ ಬರೆದುಕೊಂಡಿದ್ದಾರೆ.   ʼಓಂʼ ಚಿತ್ರ ಬ್ರಹ್ಮಾನಂದ ಓಂಕಾರʼ ಹಾಡಿಗೆ  ಹಿಂದೂ ಸಂಸ್ಕೃತಿಯಂತೆ ವಿಡಿಯೋ ಶೂಟ್ ಮಾಡಿಸಿದ್ದು, ನವ ಜೋಡಿಗಳು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟ ಸುಂದರವಾದ ದೃಶ್ಯಾವಳಿಗಳನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಈ  ವಿಡಿಯೋವನ್ನು ದೇವಾಲಯ ಹಾಗೂ ಅಲ್ಲಿನ ಸುತ್ತಮುತ್ತಲಿನ ಪರಿಸರದಲ್ಲಿ  ಶೂಟ್ ಮಾಡಲಾಗಿದ್ದು, ವಿದೇಶಿ ಸಂಸ್ಕೃತಿಗೆ ಮಾರು ಹೋಗಿ ವೆಸ್ಟರ್ನ್ ಶೈಲಿಯಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವವರ ಮಧ್ಯೆ ಈ ಜೋಡಿಯ  ಅರ್ಥಪೂರ್ಣವಾದ  ಪ್ರೀ ವೆಡ್ಡಿಂಗ್ ಶೂಟ್ಗೆ  ಭಾರಿ ಮೆಚ್ಚುಗೆ ಸಿಕ್ಕಿದೆ.

ಇದನ್ನೂ ಓದಿ: ಈ ರೆಸ್ಟೋರೆಂಟ್​​ನಲ್ಲಿ ಕಪಾಳಮೋಕ್ಷ ಸ್ಪೆಷಲ್​​ ಮೆನು

ಫೇಸ್ಬುಕ್ ಅಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ  497 ಸಾವಿರ ವೀಕ್ಷಣೆಗಳನ್ನು ಹಾಗೂ ಹಲವಾರು ಕಮೆಂಟ್ಸ್ಗಳನ್ನು ಪಡೆದುಕೊಂಡಿದೆ.   ಒಬ್ಬ ಬಳಕೆದಾರರು ʼನಿಜವಾಗಿಯೂ ಇದು ತುಂಬಾ ಅದ್ಭುತವಾಗಿದೆʼ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದೊಂದು ಅದ್ಭುತ ಕಾನ್ಸೆಪ್ಟ್.  ಈ ತರಹದ ಒಂದು ಪ್ರೀ ವೆಡಿಂಗ್ ಶೂಟ್ ನಾನು ಈವರೆಗೆ ನೋಡೆ ಇಲ್ಲʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಎಲ್ಲಿಯೂ ಸಭ್ಯತೆ ಮೀರದೆ ಮಾಡಿರುವ ಈ ವಿಡಿಯೋ ಶೂಟ್ ತುಂಬಾ ಚೆನ್ನಾಗಿದೆʼ ಎಂದು ಹೇಳಿದ್ದಾರೆ. ಇನ್ನು ಹಲವರೂ ಈ ಅದ್ಭುತವಾದ ಪ್ರೀ ವೆಡ್ಡಿಂಗ್ ಶೂಟ್ ಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​