Viral Video: ಹಕ್ಕಿಗಳು ಹೇಗೆ ನಿದ್ರಿಸುತ್ತವೆ ಗೊತ್ತಾ? ಇಲ್ಲಿದೆ ನೋಡಿ ಮುದ್ದಾದ ವಿಡಿಯೋ…

ಹಕ್ಕಿಗಳು ಹೇಗೆ ನಿದ್ರಿಸುತ್ತವೆ ಎಂಬುದನ್ನು ಬಹುಶಃ ಯಾರು ನೋಡಿರಲು ಸಾಧ್ಯವಿಲ್ಲ. ತಮ್ಮ ಪುಟ್ಟ ಗೂಡಿನಲ್ಲಿ ಬೆಚ್ಚಗೆ ಮಲಗುವ ಹಕ್ಕಿಗಳು ರಾತ್ರಿ ಹೊತ್ತಿನಲ್ಲಿ ಅಷ್ಟಾಗಿ ಯಾರಿಗೂ ಕಾಣಿಸೊಲ್ಲ. ಈ ಹಕ್ಕಿಗಳು ಹೇಗೆ ನಿದ್ರಿಸುತ್ತವೆ ಎಂಬ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಈ ಮುದ್ದಾದ ದೃಶ್ಯವನ್ನು ಕಂಡು ನೆಟ್ಟಿಗರು ಖುಷಿಯಾಗಿದ್ದಾರೆ.

Viral Video: ಹಕ್ಕಿಗಳು ಹೇಗೆ ನಿದ್ರಿಸುತ್ತವೆ ಗೊತ್ತಾ? ಇಲ್ಲಿದೆ ನೋಡಿ ಮುದ್ದಾದ ವಿಡಿಯೋ…
ವೈರಲ್​​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 11, 2024 | 5:13 PM

ದೇಹಕ್ಕೆ ನಿದ್ರೆ ಬೇಕೇ ಬೇಕು. ದಿನವಿಡೀ ಚಟುವಟಿಕೆಯಿಂದ ಇರುವ ದೇಹಕ್ಕೆ ವಿಶ್ರಾಂತಿ ತುಂಬಾ ಮುಖ್ಯ. ಮನುಷ್ಯರು, ಪ್ರಾಣಿ ಪಕ್ಷಿಗಳು ಸೇರಿದಂತೆ ಭೂಮಿ ಮೇಲಿನ ಪ್ರತಿಯೊಂದು ಜೀವಿಯೂ ಕೂಡಾ ನಿದ್ರೆ ಮಾಡುವ ಮೂಲಕ ದೇಹಕ್ಕೆ ವಿಶ್ರಾಂತಿಯನ್ನು ಪಡೆದುಕೊಳ್ಳುತ್ತವೆ. ಹೀಗೆ ಮನುಷ್ಯರು ಮತ್ತು ಪ್ರಾಣಿಗಳು ಹಾಯಾಗಿ ಮಲಗಿ ನಿದ್ರಿಸುವುದನ್ನು ನೀವು ನೋಡಿಯೇ ಇರುತ್ತಿರಿ ಅಲ್ವಾ. ಆದ್ರೆ ನೀವು ಎಂದಾದ್ರೂ ಪಕ್ಷಿಗಳು ಹೇಗೆ ನಿದ್ರಿಸುತ್ತವೆ ಎಂಬುದನ್ನು ನೋಡಿದ್ದೀರಾ? ಹಾಗಿದ್ರೆ ಈ ವೈರಲ್‌ ವಿಡಿಯೋವನ್ನು ಒಮ್ಮೆ ನೋಡಿ.

ಫಿಲ್ಮ್‌ ಮೇಕರ್‌, ಫೋಟೊಗ್ರಾಫರ್‌ ಅಮೋಘವರ್ಷ (amoghavarsha) ಈ ಕುರಿತ ಅದ್ಭುತ ವಿಡಿಯೋವೊಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡು, “ ನೀವು ಪಕ್ಷಿಗಳು ಮಲಗುವುದನ್ನು ನೋಡಿದ್ದೀರಾ?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ವಿಡಿಯೋದಲ್ಲಿ ಹಕ್ಕಿಯೊಂದು ಹಾಯಾಗಿ ನಿದ್ರಿಸಿರುವ ಸುಂದರ ದೃಶ್ಯವನ್ನು ಕಾಣಬಹುದು. ಫೋಟೋಗ್ರಾಫರ್‌ ಅಮೋಘವರ್ವ ಮತ್ತು ಅವರ ಸ್ನೇಹಿತ ವೈಲ್ಡ್‌ ಲೈಫ್‌ ಫೋಟೋಗ್ರಫಿ ಸಂದರ್ಭದಲ್ಲಿ ಈ ಅದ್ಭುತ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಸಾಮಾನ್ಯವಾಗಿ ಹಕ್ಕಿಗಳು ಕೂಡಾ ರಾತ್ರಿ ಹೊತ್ತಿನಲ್ಲಿ ನಿದ್ರೆ ಮಾಡುವುದರಿಂದ ಅವುಗಳು ಹೇಗೆ ನಿದ್ರಿಸುತ್ತವೆ ಎಂಬುದನ್ನು ನೋಡಲು ಸಾಧ್ಯವಿಲ್ಲ. ಆದ್ರೆ ಕೆಲವೊಂದು ಪಕ್ಷಿಗಳು ರಾತ್ರಿಯಿಡಿ ಎಚ್ಚರವಿದ್ದು, ಹಗಲು ಹೊತ್ತಿನಲ್ಲಿ ನಿದ್ರಿಸುತ್ತವೆ. ಹೀಗೆ ಹಗಲು ಹೊತ್ತಿನಲ್ಲಿ ನಿದ್ರಿಸುವ ಹಕ್ಕಿಗಳಲ್ಲಿ ಸಿಲೋನ್‌ ಫ್ರಾಗ್‌ಮೌತ್ ಕೂಡಾ ಒಂದು. ಅದು ಹೇಗೆ ನಿದ್ರಿಸುತ್ತವೆ ಎಂಬುದನ್ನು ನೋಡಿ ಎಂದು ಹೇಳುವ ದೃಶ್ಯ ಕಾಣಬಹುದು.

ಇದನ್ನೂ ಓದಿ: ನನ್ನ ಹೆಂಡ್ತಿ ದಿನಾ ಕುಡಿಯುತ್ತಾಳೆ, ನನಗೂ ಕುಡಿಯಲು ಒತ್ತಾಯಿಸುತ್ತಾಳೆ, ವಿಚ್ಛೇದಕ್ಕೆ ಮುಂದಾದ ಪತಿ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.3 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು “ಅಬ್ಬಬ್ಬಾ ಈ ದೃಶ್ಯ ತುಂಬಾನೇ ಅದ್ಭುತವಾಗಿದೆ” ಎಂದು ಕಾಮೆಂಟ್‌ ಮಾಡಿದ್ದಾರೆ. ‌ ಮತ್ತೊಬ್ಬ ಬಳಕೆದಾರರು ʼಹಕ್ಕಿ ತುಂಬಾ ಮುದ್ದಾಗಿದೆʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ