AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕತ್ತೆ ಚಾಲಿತ ಫ್ಯಾನ್ ಹೇಗಿದೆ ನೋಡಿ, ಆದರೆ ಇದು ಮೂಕ ಪ್ರಾಣಿಗಳಿಗೆ ಹಿಂಸೆ

ವಿಶೇಷವಾಗಿ ಬೇಸಿಗೆ ಕಾಲದಲ್ಲಿ ಫ್ಯಾನ್ ಅಥವಾ ಎಸಿ ಇಲ್ಲದೆ ಮನೆಯ ಒಳಗೆ ಕೂರಲು ಸಾಧ್ಯವೇ ಇಲ್ಲ. ಈ ಸಮಯದಲ್ಲಂತೂ  ಹೆಚ್ಚಿನವರ  ಮನೆಯಲ್ಲಿ ದಿನದ 24 ಗಂಟೆಯೂ ಫ್ಯಾನ್ ಚಾಲು ಆಗುತ್ತಲೇ ಇರುತ್ತೆ. ಆದ್ರೆ ಇಲ್ಲೊಂದು ಪಾಕಿಸ್ತಾನಿ ಕುಟುಂಬವೊಂದು ಇಡೀ ದಿನ ಫ್ಯಾನ್ ಚಾಲು ಮಾಡಿದರೆ ಕರೆಂಟ್ ಬಿಲ್ ಕಟ್ಟುವವರ್ಯಾರು  ಎಂದು ದೇಸಿ ಉಪಾಯ ಮಾಡಿ, ಕತ್ತೆ ಚಾಲಿತ ಫ್ಯಾನ್ ಒಂದನ್ನು ತಯಾರಿಸಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದ್ದು, ಈ ವಿಡಿಯೋವನ್ನು ನೋಡಿ ಮೂಕ ಪ್ರಾಣಿಗಳಿಗೆ ತೊಂದರೆ ಕೊಡುವುದು ಎಷ್ಟು ಸರಿ ಎಂದು ನೆಟ್ಟಿಗರು ಫುಲ್ ಗರಂ ಆಗಿದ್ದಾರೆ. 

Viral Video: ಕತ್ತೆ ಚಾಲಿತ ಫ್ಯಾನ್ ಹೇಗಿದೆ ನೋಡಿ, ಆದರೆ ಇದು ಮೂಕ ಪ್ರಾಣಿಗಳಿಗೆ ಹಿಂಸೆ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Feb 08, 2024 | 2:02 PM

Share

ಜುಗಾಡ್ ಐಡಿಯಾಗಳಿಗೆ ಸಂಬಂಧಿಸಿದ ವಿಡಿಯೋಗಳು ಆಗೊಮ್ಮೆ ಈಗೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಕಾಣಸಿಗುತ್ತವೆ. ಕೆಲವರು ತಮ್ಮ  ದಿನನಿತ್ಯದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ವಿಭಿನ್ನ ಶೈಲಿಯ ಜುಗಾಡ್ ಐಡಿಯಾಗಳನ್ನು ಉಪಯೋಸಿಕೊಂಡು ಖರ್ಚಿಲ್ಲದೆ ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುತ್ತಾರೆ. ಈ ಹಿಂದೆ ವ್ಯಕ್ತಿಯೊಬ್ಬ ಕೆಟ್ಟುಹೋದ ನೀರಿನ ಟ್ಯಾಂಕ್ ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಶೌಚಾಲಯವನ್ನು ತಯಾರಿಸಿದಂತಹ, ವ್ಯಕ್ತೊಯೊಬ್ಬ ಯಾವುದೇ ಖರ್ಚಿಲ್ಲದೆ ಸೈಕಲ್ ಚಕ್ರದಿಂದ ಡೈನಿಂಗ್ ಟೇಬಲ್ ತಯಾರಿಸಿದಂತಹ ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅಂತಹದ್ದೇ ದೇಸಿ ಜುಗಾಡ್ ವಿಡಿಯೋವೊಂದು ವೈರಲ್ ಆಗಿದ್ದು, ಪಾಕಿಸ್ತಾನಿ ಕುಟುಂಬವೊಂದು ಕತ್ತೆ ಚಾಲಿತ ಫ್ಯಾನ್ ಒಂದನ್ನು ತಯಾರಿಸಿದ್ದಾರೆ. ಹೌದು ವಿಶೇಷವಾಗಿ ಈ ಬೇಸಿಗೆಯಲ್ಲಿ ಫ್ಯಾನ್ ಇಲ್ಲದೆ ಮನೆಯೊಳಗೆ ಒಂದು ನಿಮಿಷವೂ ಇರಲು ಸಾಧ್ಯವಿಲ್ಲ. ದಿನದ 24 ಗಂಟೆಯು ಫ್ಯಾನ್ ಚಾಲು ಮಾಡಿದರೆ ಕರೆಂಟ್ ಬಿಲ್ ಕಟ್ಟುವವರ್ಯಾರು ಎಂಬ ಕಾರಣಕ್ಕೆ, ಈ ಕುಟುಂಬವು ಯಾವುದೇ ವೆಚ್ಚವಿಲ್ಲದೆ ಕತ್ತೆ ಚಾಲಿತ ಫ್ಯಾನ್ ಒಂದನ್ನು ತಯಾರಿಸಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದ್ದು, ಪ್ರಾಣಿ ಹಿಂಸೆ ಮಾಡಿದ್ದಕ್ಕಾಗಿ ಇವರುಗಳ ವಿರುದ್ಧ ನೆಟ್ಟಿಗರು ಫುಲ್ ಗರಂ ಆಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪಾಕಿಸ್ತಾನದ ಹಳ್ಳಿಯೊಂದರಲ್ಲಿ, ಬಿಸಿಲಿನ ತಾಪದಿಂದ ಪಾರಾಗಲು ಕುಟುಂಬವೊಂದು ವಿನೂತನ ಪ್ರಯೋಗವನ್ನು ಮಾಡಿರುವುದನ್ನು ಕಾಣಬಹುದು. ಈ ಕುರಿತ ವಿಡಿಯೋವನ್ನು @singer.bhau.nath.ji ಎಂಬ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಪೋಸ್ಟ್ ಮಾಡಲಾಗಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ಪಾಕಿಸ್ತಾನದ ಹಳ್ಳಿಯೊಂದರಲ್ಲಿ ಕುಟುಂಬವೊಂದು ಬಯಲು ಪ್ರದೇಶದಲ್ಲಿ ಮಂಚದ ಮೇಲೆ ಮಲಗಿರುವುದನ್ನು ಕಾಣಬಹುದು. ಮತ್ತು ಬಿಸಿಲಿನ ತಾಪದಿಂದ ಪಾರಾಗಲು ದೇಸಿ ಫ್ಯಾನ್ ಅನ್ನು ಕೂಡಾ ಚಾಲು ಮಾಡಿದ್ದರು. ಕತ್ತೆಯು ತಿರುಗುತ್ತಿದ್ದಂತೆ ನಿಧಾನಕ್ಕೆ ಈ ಫ್ಯಾನ್ ಕೂಡಾ ಗಾಳಿ ಬೀಸುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು. ಇಲ್ಲಿ ಇವರುಗಳು ನೆಮ್ಮದಿಯಿಂದ ಮಲಗಲು ಕತ್ತೆಗೆ ತೊಂದರೆ ಕೊಟ್ಟಿದ್ದಕ್ಕಾಗಿ ಹಲವರು ಕೋಪಗೊಂಡಿದ್ದಾರೆ.

ಇದನ್ನೂ ಓದಿ: ಇದು ಪ್ರಪಂಚದಲ್ಲೇ ಅತ್ಯಂತ ಅಗ್ಗದ ದೇಸಿ ಡೈನಿಂಗ್ ಟೇಬಲ್, ಹೇಗಿದೆ ನೋಡಿ

ಜನವರಿ 29 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5.8 ಮಿಲಿಯನ್ ವೀಕ್ಷಣೆಗಳನ್ನು  ಹಾಗೂ 90 ಸಾವಿರಕ್ಕೂ ಹೆಚ್ಚು ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದು ಬಂದಿವೆ. ಒಬ್ಬ ಬಳಕೆದಾರರು ʼಯಾಕೆ ಈ ರೀತಿ ಪ್ರಾಣಿ ಹಿಂಸೆ ಮಾಡುತ್ತಿದ್ದಾರೆ, ನಿಜವಾಗಿಯೂ ಇದು ತಮಾಷೆಯ ರೀತಿ ಕಾಣೋದಿಲ್ಲʼ ಅಂತ ಕಿಡಿ ಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼಮೂಕ ಪ್ರಾಣಿಗಳಿಗೆ ನೋವು ನೀಡಿ, ಇವರುಗಳು ನೆಮ್ಮದಿಯಿಂದ ಮಲಗಿದ್ದಾರೆ. ಒಂದು ಚೂರು ಕರುಣೆ ಬೇಡವೇʼ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಪಾಪ ಆ ಕತ್ತೆ ಏನು ತಪ್ಪು ಮಾಡಿತ್ತು, ಅದಕ್ಕೆ ಯಾಕಿಷ್ಟು ನೋವು ಕೊಡುತ್ತೀರಿʼ ಅಂತ ಕೇಳಿದ್ದಾರೆ. ಇನ್ನೂ ಅನೇಕರು ಪ್ರಾಣಿ ಹಿಂಸೆ ಮಾಡುವುದು ಎಷ್ಟು ಸರಿ ಎಂದು ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?