AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಳ್ಳಿ ಹುಡುಗಿಯ ಕೋಲುವರಸೆ ಹೇಗಿದೆ ನೋಡಿ?

ಸಿಲಂಬಮ್ (ಕೋಲುವರಸೆ) ದಕ್ಷಿಣ ಭಾರತದ ಆಯುಧ ಆಧಾರಿತ ಪ್ರಾಚೀನ ಸಮರ ಕಲೆಯಾಗಿದ್ದು, ಕರಾಟೆ ಸೇರಿದಂತೆ ಇತರೆ ಮಾರ್ಷಿಯಲ್ ಆರ್ಟ್ ಕಲೆಗಳನ್ನು ಅಭ್ಯಾಸ ಮಾಡುವಂತೆ, ಇಂದಿಗೂ ಸಿಲಂಬಮ್ ಸಮರ ಕಲೆಯ ತರಬೇತಿಯನ್ನು ಪಡೆಯುವ ಹಲವರಿದ್ದಾರೆ. ಇದೇ ರೀತಿ ಕೋಲುವರಸೆ ಸಮರ ಕಲೆಯ ತರಬೇತಿಯನ್ನು ಪಡೆಯುವಂತಹ ವಿದ್ಯಾರ್ಥಿನಿಯೊಬ್ಬಳು, ಆತ್ಮವಿಶ್ವಾಸದಿಂದ ಕೋಲುವರಸೆ ಕಸರತ್ತಿನ ಅದ್ಭುತ ಪ್ರದರ್ಶನವನ್ನು ನೀಡಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

Viral Video: ಹಳ್ಳಿ ಹುಡುಗಿಯ ಕೋಲುವರಸೆ ಹೇಗಿದೆ ನೋಡಿ?
ವೈರಲ್ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 09, 2023 | 6:10 PM

Share

ಕೋಲು ವರಸೆ ಅಥವಾ ಸಿಲಂಬಮ್ ಎಂಬುದು ದಕ್ಷಿಣ ಭಾರತದಲ್ಲಿನ ಆಯುಧ ಆಧಾರಿತ ಪ್ರಾಚೀನ ಸಮರ ಕಲೆಯಾಗಿದೆ. ಇದು ಬಿದಿರು ಕೋಲನ್ನು ಕೈಯಲ್ಲಿ ಹಿಡಿದು ಆಡುವ ಸಾಂಪ್ರದಾಯಿಕ ಸಮರ ಕಲೆಯಾಗಿದೆ. ಕರಾಟೆ ಸೇರಿದಂತೆ ಇತರ ಮಾರ್ಷಿಯಲ್ ಆರ್ಟ್ಸ್ ತರಬೇತಿಯನ್ನು ನೀಡುವಂತೆ, ಇಂದಿಗೂ ಕೋಲುವರಸೆ ಸಮರ ಕಲೆಯ ತರಬೇತಿಯನ್ನೂ ನೀಡಲಾಗುತ್ತದೆ. ಹಲವಾರು ಸಿಲಂಬಮ್ ಕ್ಲಾಸಸ್ ಕೂಡಾ ಇವೆ. ಈ ಸಮರ ಕಲೆಯನ್ನು ಅಭ್ಯಾಸ ಮಾಡುವುದರಿಂದ ನಮ್ಮ ದೇಹ ಸದೃಢವಾಗಿರುವುದು ಮಾತ್ರವಲ್ಲದೆ, ಇದರಿಂದ ಹಲವಾರು ಆರೋಗ್ಯ ಪ್ರಯೋಜನಗಳು ದೊರೆಯುತ್ತದೆ ಮತ್ತು ಈ ಸಮರ ಕಲೆ ವ್ಯಕ್ತಿತ್ವ ವಿಕಸನಕ್ಕೂ ಬಹಳ ಸಹಕಾರಿಯಾಗಿದೆ. ಈ ಎಲ್ಲಾ ಪ್ರಯೋಜನಗಳ ಕಾರಣ, ಹೆಚ್ಚಿನ ಪೋಷಕರು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಕೋಲುವರಸೆ ತರಬೇತಿ ನೀಡಲು ಬಯಸುತ್ತಾರೆ. ಇದೇ ರೀತಿ ಕೋಲುವರಸೆ ಸಮರ ಕಲೆಯ ತರಬೇತಿಯನ್ನು ಪಡೆಯುತ್ತಿರುವಂತಹ ವಿದ್ಯಾರ್ಥಿನಿಯೊಬ್ಬಳು ಅದ್ಭುತವಾಗಿ ಕೋಲುವರಸೆ ಕಸರತ್ತಿನ ಪ್ರದರ್ಶನವನ್ನು ಮಾಡಿದ್ದು, ಈಕೆಯ ಪ್ರತಿಭೆಗೆ ನೆಟ್ಟಿಗರಿಂದ ಭಾರಿ ಮೆಚ್ಚುಗೆ ಲಭಿಸಿದೆ.

ಸಿಲಂಬಮ್ ತರಬೇತುದಾರ ಶರತ್ (@sarathsilambam) ಎಂಬವರು ತಮ್ಮ ವಿಧ್ಯಾರ್ಥಿನಿಯ ಕೋಲುವರಸೆ ಪ್ರದರ್ಶನದ ವಿಡಿಯೋವನ್ನು ಹೆಮ್ಮೆಯಿಂದ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ವಿದ್ಯಾರ್ಥಿನಿ ಬಿದಿರು ಕೋಲನ್ನು ಹಿಡಿದುಕೊಂದು ಮಿಂಚಿನ ವೇಗದಲ್ಲಿ ಕೋಲುವರಸೆ ಕಲೆಯನ್ನು ಪ್ರದರ್ಶಿಸುವ ದೃಶ್ಯಾವಳಿಯನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by SARATH⚡ (@sarathsilambam)

ವಿಡಿಯೋದಲ್ಲಿ ವಿದ್ಯಾರ್ಥಿನಿ ಅಂಗಳದಲ್ಲಿ ನಿಂತು, ಕೈಯಲ್ಲಿ ಒಂದು ಬಿದಿರು ಕೋಲನ್ನು ಹಿಡಿದುಕೊಂಡು, ಬಹಳ ಆತ್ಮವಿಶ್ವಾಸದಿಂದ ಸಿಲಂಬಮ್ ಕಸರತ್ತನ್ನು ಮಾಡುವ ಅದ್ಭುತ ದೃಶ್ಯಾವಳಿಯನ್ನು ಕಾಣಬಹುದು.

ಇದನ್ನೂ ಓದಿ:  ಶ್ರೀ ಕೃಷ್ಣದೇವರಾಯರ ಆಸ್ಥಾನದ ಮಹಾಮಂತ್ರಿ ತಿಮ್ಮರಸರ ವಾಡೆ ಮತ್ತು ಕುಟುಂಬ ಈಗ ಹೇಗಿದೆ ಗೊತ್ತಾ? 

ಡಿಸೆಂಬರ 2 ರಂದು ಹಂಚಿಕೊಳ್ಳಲಾದ ಈ ವಿಡಿಯೋ 6.9 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 517K ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದುಬಂದಿವೆ. ಒಬ್ಬ ಬಳಕೆದಾರರು ʼಈ ಬಾಲಕಿ ತುಂಬಾ ಪ್ರತಿಭಾವಂತೆʼ ಎಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಇನೊಬ್ಬ ಬಳಕೆದಾರರು ʼಈಕೆ ಎಲ್ಲಾ ಹುಡುಗಿಯರಿಗೂ ಮಾದರಿʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಈಕೆಯ ಪ್ರತಿಭೆಗೆ ಮೆಚ್ಚುಗೆಯನ್ನು ಸೂಚಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ