AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಶೇಷಚೇತನರೇ ನಡೆಸುತ್ತಿರುವ ಈ ಕರಕುಶಲ ಮಳಿಗೆ

ಪ್ರಸ್ತುತ  ವಿಶೇಷ ಚೇತನರಿಗೆ ಸಮಾನತೆ ಮತ್ತು ಸೌಲಭ್ಯಗಳು ಸಿಕ್ಕಿವೆ. ಅದೇ ರೀತಿ ಇಲ್ಲೊಂದು ಸಂಸ್ಥೆಯು ಡೌನ್ ಸಿಂಡ್ರೋಮ್ನಿಂದ ಬಳಲುತ್ತಿರುವಂತ ವಿಶೇಷ ಚೇತನರಿಗೆ ಉದ್ಯೋಗವನ್ನು ಸೃಷ್ಟಿಸುವ ನಿಟ್ಟಿನಲ್ಲಿ   ಕರಕುಶಲ ಮಳಿಗೆಯೊಂದನ್ನು ತೆರೆದಿದೆ. ಈ ಮಳಿಗೆಯನ್ನು ನಾಲ್ವರು ವಿಶೇಷ ಚೇತನ ಮಹಿಳೆಯರೇ ನಿರ್ವಹಿಸುತ್ತಿದ್ದು, ಈ ಒಂದು ವಿಶೇಷ ಮಳಿಗೆಯ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದೆ. 

Viral Video: ವಿಶೇಷಚೇತನರೇ ನಡೆಸುತ್ತಿರುವ ಈ ಕರಕುಶಲ ಮಳಿಗೆ
ಮಾಲಾಶ್ರೀ ಅಂಚನ್​
| Edited By: |

Updated on:Jan 04, 2024 | 6:53 PM

Share

ನಾವೆಲ್ಲದ್ರೂ ಟ್ರಿಪ್ ಹೋದ್ರೆ, ಅಲ್ಲಿ ಏನಾದ್ರೂ ಸ್ಪೆಷಲ್ ಉಡುಗೊರೆಗಳನ್ನು ನಾವು ನಮ್ಮ ಸ್ನೇಹಿತರು ಹಾಗೂ ಕುಟುಂಬದವರಿಗಾಗಿ ಕೊಂಡುಕೊಳ್ಳುತ್ತೇವೆ ಅಲ್ವಾ.  ಈ ಉಡುಗೊರೆಗಳನ್ನು ವಿಶೇಷ ಸ್ಥಳಗಳಿಂದ  ಖರೀದಿಸಿದಾಗ ಆ ಉಡುಗೊರೆಯೂ ತುಂಬಾನೇ ವಿಶೇಷವಾಗಿರುತ್ತೆ. ಹೀಗೆ ನೀವೇನಾದ್ರೂ ಕೇರಳ ಕಡೆಗೆ ಟ್ರಿಪ್ ಹೋದ್ರೆ,  ಅಲ್ಲಿನ ಈ ಒಂದು ವಿಶೇಷ ಸ್ಥಳದಿಂದ  ನಿಮ್ಮ ಪ್ರೀತಿಪಾತ್ರರಿಗೆ ವಿಶೇಷ ಉಡುಗೊರೆಗಳನ್ನು ಕೊಂಡುಕೊಳ್ಳಲು  ಮರೆಯದಿದೆ.

ಆ ವಿಶೇಷ ಸ್ಥಳ ಯಾವುದು ಅಂತಾ ಯೋಚ್ನೆ ಮಾಡ್ತಿದ್ದಿರಾ,  ಅದುವೇ ಕೇರಳದ ಕೋಝಿಕ್ಕೋಡ್ ಅಲ್ಲಿರುವ  ULCCS ಫೌಂಡೇಶನ್ ಮತ್ತು ಡೌನ್ಸ್ ಸಿಂಡ್ರೋಮ್ ಟ್ರಸ್ಟ್  ನಡೆಸುತ್ತಿರುವ ʼಸರ್ಗಶೇಷಿʼ ಎಂಬ ಹೆಸರಿನ  ಕರಕುಶಲ ಮಳಿಗೆ. ಈ ಕರಕುಶಲ ಮಳಿಗೆಯ  ವಿಶೇಷವೇನೆಂದ್ರೆ, ಇಲ್ಲಿ ಡೌನ್ ಸಿಂಡ್ರೋಮ್ನಿಂದ ಬಳಲುತ್ತಿರುವಂತಹ ವಿಶೇಷಚೇತನರೇ ಈ ಮಳಿಗೆಯನ್ನು ನಿರ್ವಹಿಸುತ್ತಿದ್ದಾರೆ. ಲ್ಯಾಪ್ ಟಾಪ್ ಬ್ಯಾಗ್ನಿಂದ  ಹಿಡಿದು ವಿವಿಧ ಬಗೆಯ ಗಿಫ್ಟ್ ಐಟಂ ವರಗೆ ಇಲ್ಲಿ ಪ್ರತಿಯೊಂದು ವಸ್ತುವೂ ಲಭ್ಯವಿದೆ.  ವಿಶೇಷಚೇತನರು ತಯಾರಿಸಿದಂತ ಹ್ಯಾಂಡ್ ಮೇಡ್ ಬ್ಯಾಗ್, ಫೋಟೋ ಫ್ರೇಮ್, ಗಿಫ್ಟ್ ಪ್ರೋಡಕ್ಟ್ಗಳನ್ನು ಈ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತದೆ.  ಅಷ್ಟೇ ಅಲ್ಲದೆ ಭಾರಿ ಡಿಸ್ಕೌಂಟ್ ಬೆಲೆಯಲ್ಲಿ ಎಲ್ಲಾ ರೀತಿಯ ಕರಕುಶಲ ಉತ್ಪನ್ನಗಳು ಇಲ್ಲಿ  ಲಭ್ಯವಿದೆ. ಮುಂದಿನ ಬಾರಿ ನೀವೇನಾದ್ರೂ ಕೇರಳಕ್ಕೆ ಟ್ರಿಪ್ ಹೋದ್ರೆ ಈ ವಿಶೇಷ  ಸ್ಥಳದಿಂದ ನಿಮ್ಮ  ಪ್ರೀತಿಪಾತ್ರರಿಗೆ ವಿಶೇಷ ಉಡುಗೊರೆಗಳನ್ನು ಖರೀದಿಸಲು ಮರೆಯದಿರಿ.

ವೈರಲ್​ ವಿಡಿಯೋ ಇಲ್ಲಿದೆ:

ಈ ವಿಶೇಷ ಮಳಿಗೆಯ ಕುರಿತ ವಿಡಿಯೋವನ್ನು ಅಸ್ವಲ್ ಪುತ್ರೆನ್ (@kozhikode_to_you) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಡಿಯೋದಲ್ಲಿ ಈ ಒಂದು ವಿಶೇಷ ಮಳಿಗೆಯ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: ಅಮ್ಮನ ಮಡಿಲು ಸೇರಿದ ಕಂದಮ್ಮ, ಆನೆಗಳ ಭಾವನಾತ್ಮಕ ಚಿತ್ರ ಹೇಗಿದೆ? ನೋಡಿ 

ಜನವರಿ 02 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.8 ಮಿಲಿಯನ್ ವೀಕ್ಷಣೆಗಳನ್ನು  ಒಂದುವರೆ ಲಕ್ಷಕ್ಕೂ ಅಧಿಕ ಲೈಕ್ಸ್ಗಳನ್ನು  ಪಡೆದುಕೊಂಡಿದೆ.  ಒಬ್ಬ ಬಳಕೆದಾರರು ಈ ವಿಶೇಷ ಶಾಪ್ ಬಗ್ಗೆ ಮಾಹಿತಿಯನ್ನು ನೀಡಿದ್ದಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.  ಮತ್ತೊಬ್ಬ ಬಳಕೆದಾರರು ʼಇಂತಹ ಮಳಿಗೆಗಗಳಿಂದ ವಸ್ತುಗಳನ್ನು ಖರೀದಿಸುವ ಮೂಲಕ ನಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಾನು ಖಂಡಿತವಾಗಿಯೂ ಇಲ್ಲಿಗೆ ಭೇಟಿ ನೀಡುತ್ತೇನೆʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:52 pm, Thu, 4 January 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!