AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ಹೆಂಡತಿ ಹೆಣ್ಣಲ್ಲವೆಂದು ತಿಳಿದ ಪತಿ ಮುಂದೆ ಮಾಡಿದ್ದೇನು ಗೊತ್ತಾ..?

ಮಹಿಳೆಯ ವೈದ್ಯಕೀಯ ದಾಖಲೆಗಳು ಶಿಶ್ನ ಮತ್ತು ಅಪೂರ್ಣ ಹೈಮೆನ್​ನ್ನು ಹೊಂದಿದೆ. ಆದ್ದರಿಂದ ಅವಳು ಹೆಣ್ಣು ಅಲ್ಲ. ಈ ಕುರಿತಾಗಿ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಕೆಗೆ ನೋಟಿಸ್ ಜಾರಿ ಮಾಡಿದೆ.

Viral News: ತನ್ನ ಹೆಂಡತಿ ಹೆಣ್ಣಲ್ಲವೆಂದು ತಿಳಿದ ಪತಿ ಮುಂದೆ ಮಾಡಿದ್ದೇನು ಗೊತ್ತಾ..?
ಸುಪ್ರೀಂ ಕೋರ್ಟ್
TV9 Web
| Edited By: |

Updated on:Mar 14, 2022 | 1:37 PM

Share

ನವದೆಹಲಿ: ವೈದ್ಯಕೀಯ ವರದಿಗಳ ಪ್ರಕಾರ ಅವಳು ಹೆಣ್ಣು ಅಲ್ಲ (Wife’s Not Female) ಎಂಬ ಕಾರಣಕ್ಕಾಗಿ ವಿಚ್ಛೇದನ (Divorce) ಕೋರಿ ಗಂಡ ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾನೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದ್ರೇಶ್ ಅವರು ಕಳೆದ ವರ್ಷ ಜುಲೈ 29 ರ ಮಧ್ಯಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪತಿ ಸಲ್ಲಿಸಿರುವ ಅರ್ಜಿಗೆ ಉತ್ತರವನ್ನು ಸಲ್ಲಿಸುವಂತೆ ಶುಕ್ರವಾರ ಮಹಿಳೆಗೆ ಸೂಚಿಸಿದ್ದಾರೆ. ಮಹಿಳೆಯ ವೈದ್ಯಕೀಯ ದಾಖಲೆಗಳು ಶಿಶ್ನ ಮತ್ತು ಅಪೂರ್ಣ ಹೈಮೆನ್​ನ್ನು ಹೊಂದಿದೆ. ಆದ್ದರಿಂದ ಅವಳು ಹೆಣ್ಣು ಅಲ್ಲ. ಈ ಕುರಿತಾಗಿ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಕೆಗೆ ನೋಟಿಸ್ ಜಾರಿ ಮಾಡಿದೆ. ದಂಪತಿಗಳು 2016 ರಲ್ಲಿ ವಿವಾಹವಾಗಿದ್ದಾರೆ. ಆದರೆ ಅವರ ಪತ್ನಿ ತಮಗೆ ಋತುಚಕ್ರವಾಗಿದೆ ಎಂದು ಹೇಳಿಕೊಂಡು ಕೆಲವು ದಿನಗಳವರೆಗೆ ಮುಂದುಡಲಾಗಿದೆ ಎಂದು ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಪುರುಷನು ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಪ್ರಯತ್ನಿಸಿದಾಗ, ಅವನು ಯೋನಿಯ ಬದಲಾಗಿ ಅವಳು ಮಗುವಿನಂತ ಸಣ್ಣ ಶಿಶ್ನವನ್ನು ಹೊಂದಿದ್ದಳು ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಅರ್ಜಿದಾರರು ತಮ್ಮ ಪತ್ನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದದ್ದು, ಆಕೆಗೆ ಇಂಪರ್‌ಫೊರೇಟ್ ಹೈಮೆನ್ ಎಂಬ ವೈದ್ಯಕೀಯ ಸಮಸ್ಯೆ ಇದೆ ಎಂಬುದು ನಿರ್ಣಯವಾಗಿತ್ತು. ಇಂಪರ್ಫೊರೇಟ್ ಹೈಮೆನ್ ಎನ್ನುವುದು ಕನ್ಯಾಪೊರೆಯು ಯೋನಿಯ ತೆರೆಯುವಿಕೆಯನ್ನು ಆವರಿಸುವ ಸ್ಥಿತಿಯಾಗಿದೆ. ಆಕೆಯ ಸ್ಥಿತಿಯನ್ನು ಶಸ್ತ್ರಚಿಕಿತ್ಸೆಯ ಮೂಲಕ ಸರಿಪಡಿಸಲು ತನ್ನ ಹೆಂಡತಿಗೆ ಸಲಹೆ ನೀಡಲಾಯಿತು ಆದರೆ ಗರ್ಭಧಾರಣೆಯ ಸಾಧ್ಯತೆಗಳು ಅಸಾಧ್ಯವೆಂದು ವೈದ್ಯರು ಹೇಳಿದರು.

ಅರ್ಜಿದಾರರು ತಾನು ಮೋಸ ಹೋಗಿದ್ದೇನೆ ಎಂದು ಭಾವಿಸಿ ತನ್ನ ಮಾವನಿಗೆ ಕರೆ ಮಾಡಿ, ತನ್ನ ಮಗಳನ್ನು ವಾಪಸ್ ಕರೆದುಕೊಂಡು ಹೋಗುವಂತೆ  ಕೇಳಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಅರ್ಜಿಯ ಪ್ರಕಾರ, ಮಹಿಳೆಯು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು ಮತ್ತು ನಂತರ ಆಕೆಯ ತಂದೆ ತನ್ನ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದರಿಂದ ಪತಿ ಮನೆಗೆ ಮರಳಿದಳು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:

ರಷ್ಯಾ ದಾಳಿಕೋರರ ಪತ್ತೆಗೆ ಕೃತಕ ಬುದ್ಧಿಮತ್ತೆ ಬಳಸುತ್ತಿರುವ ಉಕ್ರೇನ್: ಅಮೆರಿಕ ಕಂಪನಿಗಳಿಂದ ನೆರವು

Published On - 12:06 pm, Mon, 14 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್