AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅಮೇಝಾನ್​; ಆರ್ಡರ್ ಮಾಡಿದ್ದು ರೂ 90ಸಾವಿರ ಕ್ಯಾಮೆರಾ ಲೆನ್ಸ್; ತಲುಪಿದ್ದು ಕಿನೋವಾ ಬೀಜಗಳು

Online Fraud : ಇದು ಎಲ್ಲರಿಗೂ ಆಗುತ್ತಲೇ ಇದೆ. ಹಾಗಾಗಿ ದುಬಾರಿ ಬೆಲೆಯ ವಸ್ತುಗಳನ್ನು ನೇರ ಅಂಗಡಿಯಲ್ಲಿ ಖರೀದಿಸುವುದೇ ಮೇಲು ಎಂದು ಅನೇಕರು ಈ ಟ್ವೀಟ್​​ಗೆ ಸಲಹೆ ನೀಡಿದ್ದಾರೆ.

Viral: ಅಮೇಝಾನ್​; ಆರ್ಡರ್ ಮಾಡಿದ್ದು ರೂ 90ಸಾವಿರ ಕ್ಯಾಮೆರಾ ಲೆನ್ಸ್; ತಲುಪಿದ್ದು ಕಿನೋವಾ ಬೀಜಗಳು
ಸಿಗ್ಮಾ ಲೆನ್ಸ್​ ಬದಲಾಗಿ ಗ್ರಾಹಕರಿಗೆ ಕಿನೋವಾ ಬೀಜಗಳು ತಲುಪಿವೆ.
ಶ್ರೀದೇವಿ ಕಳಸದ
|

Updated on:Jul 17, 2023 | 3:01 PM

Share

Online Shopping : ಪ್ರತೀ ದಿನ ಲೆಕ್ಕವಿಲ್ಲದಷ್ಟು ಆನ್​ಲೈನ್​ ಶಾಪಿಂಗ್​ನ ಅವಾಂತರಗಳು ನಡೆಯುತ್ತಿರುತ್ತವೆ. ಆರ್ಡರ್ ಮಾಡುವುದೊಂದು ತಲುಪುವುದೊಂದು. ಇದೀಗ ಅಮೇಝಾನ್​ನಿಂದ ರೂ. 90,000 ಕ್ಯಾಮೆರಾ ಲೆನ್ಸ್​ ಅನ್ನು ಆರ್ಡರ್​ ಮಾಡಿದ ಒಬ್ಬರಿಗೆ ಲೆನ್ಸ್ ಬದಲಾಗಿ ಕಿನೋವಾ ಬೀಜಗಳು (ಹರಿವೆ ಸೊಪ್ಪಿನ ವರ್ಗಕ್ಕೆ ಸೇರಿದ ಬೀಜಗಳು) ತಲುಪಿವೆ. ಅರುಣಕುಮಾರ್ ಮೆಹೆರ್​ ಎಂಬುವವರು ತಮ್ಮ ಅನುಭವವನ್ನು ಟ್ವೀಟ್ ಮಾಡಿದ್ದಾರೆ, ‘ಅಮೇಝಾನ್​ನಿಂದ 90K INR ಕ್ಯಾಮೆರಾ ಲೆನ್ಸ್ ಆರ್ಡರ್ ಮಾಡಿದೆ. ಆದರೆ ಲೆನ್ಸ್​ ಬಾಕ್ಸಿನೊಳಗೆ ಕಿನೋವಾ ಬೀಜಗಳ (Quinoa Seeds)  ​ಪ್ಯಾಕೆಟ್ ಕಳುಹಿಸಲಾಗಿದೆ. ಅಮೇಝಾನ್​ ಮತ್ತು ಎಪ್ಪಾರಿಯೋ ರೀಟೇಲ್​ನ ದೊಡ್ಡ ಸ್ಕ್ಯಾಮ್​ ಇದು.’

ಅರುಣಕುಮಾರ್​ ಜು. 5ರಂದು ಅಮೇಝಾನ್​ನಿಂದ ಸಿಗ್ಮಾ 24/70 F 2.8 ಲೆನ್ಸ್​ ಆರ್ಡರ್​ ಮಾಡಿದ್ದರು. ಆದ ಸಮಸ್ಯೆಯನ್ನು ಅವರು ಅಮೇಝಾನ್​ಗೆ ಟ್ಯಾಗ್​ ಮಾಡಿ ಟ್ವೀಟ್ ಮಾಡಿದ್ದರು. ಅಮೇಝಾನ್​ ಈ ಬಗ್ಗೆ ತನಿಖೆ ನಡೆಸುತ್ತಿದೆ ಪ್ರತಿಕ್ರಿಯಿಸಿದೆಯಾದರೂ, ಅರುಣಕುಮಾರ್, ಲೆನ್ಸ್​ ಕಳುಹಿಸಿ ಇಲ್ಲವೆ ಹಣವನ್ನು ಮರುಪಾವತಿಸಿ ಎಂದು ಮರುಟ್ವೀಟ್ ಮಾಡಿದ್ದಾರೆ. ಜು.7ರಂದು ಮಾಡಿದ ಈ ಟ್ವೀಟ್ ಅನ್ನು 1.3 ಲಕ್ಷಕ್ಕಿಂತಲೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಸುಮಾರು 300 ಜನರು ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : Viral Video: ಹೀಲ್ಸ್ ಮತ್ತು ಸ್ಕರ್ಟ್​ನಲ್ಲಿ ಡ್ಯಾನ್ಸ್​ ಮಾಡಿದ ಪುರುಷ 

ಅನೇಕರು ತಮ್ಮ ಇಂಥ ಅನುಭವಗಳನ್ನು ಈ ಟ್ವೀಟ್​ನಡಿ ಹಂಚಿಕೊಂಡಿದ್ದಾರೆ. ಕೆಲವರು ಅಂಗಡಿಗೆ ಹೋಗಿ ಖರೀದಿಸುವುದು ಉತ್ತಮ ಎಂದಿದ್ದಾರೆ. ಕಳೆದ ವರ್ಷ ಸಿಗ್ಮಾ 150-600 ಲೆನ್ಸ್ ಆರ್ಡರ್ ಮಾಡಿದ್ದೆ, ನನಗೆ ಹೊಲಿಗೆ ಯಂತ್ರ ಕಳಿಸಿದ್ದರು ಎಂದಿದ್ದಾರೆ ಒಬ್ಬರು. ಇದೇನು ಹೊಸ ಸಮಸ್ಯೆಯಲ್ಲ, ನಾನು ಅನೇಕ ಬಾರಿ ಇದನ್ನು ಎದುರಿಸಿದ್ದೇನೆ. ಕೆಲವೊಮ್ಮೆ ಸಮಸ್ಯೆಗಳು ಪರಿಹಾರಗೊಂಡಿವೆ, ಇನ್ನೂ ಕೆಲವು ಹಾಗೇ ಇವೆ. ಆದ್ದರಿಂದ ಡೆಲಿವರಿ ಏಜೆಂಟರ್ ಮುಂದೆಯೇ ಬಾಕ್ಸ್​ ತೆರೆದು ನಂತರ ಅದನ್ನು ತೆಗೆದುಕೊಳ್ಳುತ್ತೇನೆ ಎಂದಿದ್ಧಾರೆ ಇನ್ನೊಬ್ಬರು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:56 am, Mon, 17 July 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ