Viral: ಅಮೇಝಾನ್​; ಆರ್ಡರ್ ಮಾಡಿದ್ದು ರೂ 90ಸಾವಿರ ಕ್ಯಾಮೆರಾ ಲೆನ್ಸ್; ತಲುಪಿದ್ದು ಕಿನೋವಾ ಬೀಜಗಳು

Online Fraud : ಇದು ಎಲ್ಲರಿಗೂ ಆಗುತ್ತಲೇ ಇದೆ. ಹಾಗಾಗಿ ದುಬಾರಿ ಬೆಲೆಯ ವಸ್ತುಗಳನ್ನು ನೇರ ಅಂಗಡಿಯಲ್ಲಿ ಖರೀದಿಸುವುದೇ ಮೇಲು ಎಂದು ಅನೇಕರು ಈ ಟ್ವೀಟ್​​ಗೆ ಸಲಹೆ ನೀಡಿದ್ದಾರೆ.

Viral: ಅಮೇಝಾನ್​; ಆರ್ಡರ್ ಮಾಡಿದ್ದು ರೂ 90ಸಾವಿರ ಕ್ಯಾಮೆರಾ ಲೆನ್ಸ್; ತಲುಪಿದ್ದು ಕಿನೋವಾ ಬೀಜಗಳು
ಸಿಗ್ಮಾ ಲೆನ್ಸ್​ ಬದಲಾಗಿ ಗ್ರಾಹಕರಿಗೆ ಕಿನೋವಾ ಬೀಜಗಳು ತಲುಪಿವೆ.
Follow us
|

Updated on:Jul 17, 2023 | 3:01 PM

Online Shopping : ಪ್ರತೀ ದಿನ ಲೆಕ್ಕವಿಲ್ಲದಷ್ಟು ಆನ್​ಲೈನ್​ ಶಾಪಿಂಗ್​ನ ಅವಾಂತರಗಳು ನಡೆಯುತ್ತಿರುತ್ತವೆ. ಆರ್ಡರ್ ಮಾಡುವುದೊಂದು ತಲುಪುವುದೊಂದು. ಇದೀಗ ಅಮೇಝಾನ್​ನಿಂದ ರೂ. 90,000 ಕ್ಯಾಮೆರಾ ಲೆನ್ಸ್​ ಅನ್ನು ಆರ್ಡರ್​ ಮಾಡಿದ ಒಬ್ಬರಿಗೆ ಲೆನ್ಸ್ ಬದಲಾಗಿ ಕಿನೋವಾ ಬೀಜಗಳು (ಹರಿವೆ ಸೊಪ್ಪಿನ ವರ್ಗಕ್ಕೆ ಸೇರಿದ ಬೀಜಗಳು) ತಲುಪಿವೆ. ಅರುಣಕುಮಾರ್ ಮೆಹೆರ್​ ಎಂಬುವವರು ತಮ್ಮ ಅನುಭವವನ್ನು ಟ್ವೀಟ್ ಮಾಡಿದ್ದಾರೆ, ‘ಅಮೇಝಾನ್​ನಿಂದ 90K INR ಕ್ಯಾಮೆರಾ ಲೆನ್ಸ್ ಆರ್ಡರ್ ಮಾಡಿದೆ. ಆದರೆ ಲೆನ್ಸ್​ ಬಾಕ್ಸಿನೊಳಗೆ ಕಿನೋವಾ ಬೀಜಗಳ (Quinoa Seeds)  ​ಪ್ಯಾಕೆಟ್ ಕಳುಹಿಸಲಾಗಿದೆ. ಅಮೇಝಾನ್​ ಮತ್ತು ಎಪ್ಪಾರಿಯೋ ರೀಟೇಲ್​ನ ದೊಡ್ಡ ಸ್ಕ್ಯಾಮ್​ ಇದು.’

ಅರುಣಕುಮಾರ್​ ಜು. 5ರಂದು ಅಮೇಝಾನ್​ನಿಂದ ಸಿಗ್ಮಾ 24/70 F 2.8 ಲೆನ್ಸ್​ ಆರ್ಡರ್​ ಮಾಡಿದ್ದರು. ಆದ ಸಮಸ್ಯೆಯನ್ನು ಅವರು ಅಮೇಝಾನ್​ಗೆ ಟ್ಯಾಗ್​ ಮಾಡಿ ಟ್ವೀಟ್ ಮಾಡಿದ್ದರು. ಅಮೇಝಾನ್​ ಈ ಬಗ್ಗೆ ತನಿಖೆ ನಡೆಸುತ್ತಿದೆ ಪ್ರತಿಕ್ರಿಯಿಸಿದೆಯಾದರೂ, ಅರುಣಕುಮಾರ್, ಲೆನ್ಸ್​ ಕಳುಹಿಸಿ ಇಲ್ಲವೆ ಹಣವನ್ನು ಮರುಪಾವತಿಸಿ ಎಂದು ಮರುಟ್ವೀಟ್ ಮಾಡಿದ್ದಾರೆ. ಜು.7ರಂದು ಮಾಡಿದ ಈ ಟ್ವೀಟ್ ಅನ್ನು 1.3 ಲಕ್ಷಕ್ಕಿಂತಲೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಸುಮಾರು 300 ಜನರು ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : Viral Video: ಹೀಲ್ಸ್ ಮತ್ತು ಸ್ಕರ್ಟ್​ನಲ್ಲಿ ಡ್ಯಾನ್ಸ್​ ಮಾಡಿದ ಪುರುಷ 

ಅನೇಕರು ತಮ್ಮ ಇಂಥ ಅನುಭವಗಳನ್ನು ಈ ಟ್ವೀಟ್​ನಡಿ ಹಂಚಿಕೊಂಡಿದ್ದಾರೆ. ಕೆಲವರು ಅಂಗಡಿಗೆ ಹೋಗಿ ಖರೀದಿಸುವುದು ಉತ್ತಮ ಎಂದಿದ್ದಾರೆ. ಕಳೆದ ವರ್ಷ ಸಿಗ್ಮಾ 150-600 ಲೆನ್ಸ್ ಆರ್ಡರ್ ಮಾಡಿದ್ದೆ, ನನಗೆ ಹೊಲಿಗೆ ಯಂತ್ರ ಕಳಿಸಿದ್ದರು ಎಂದಿದ್ದಾರೆ ಒಬ್ಬರು. ಇದೇನು ಹೊಸ ಸಮಸ್ಯೆಯಲ್ಲ, ನಾನು ಅನೇಕ ಬಾರಿ ಇದನ್ನು ಎದುರಿಸಿದ್ದೇನೆ. ಕೆಲವೊಮ್ಮೆ ಸಮಸ್ಯೆಗಳು ಪರಿಹಾರಗೊಂಡಿವೆ, ಇನ್ನೂ ಕೆಲವು ಹಾಗೇ ಇವೆ. ಆದ್ದರಿಂದ ಡೆಲಿವರಿ ಏಜೆಂಟರ್ ಮುಂದೆಯೇ ಬಾಕ್ಸ್​ ತೆರೆದು ನಂತರ ಅದನ್ನು ತೆಗೆದುಕೊಳ್ಳುತ್ತೇನೆ ಎಂದಿದ್ಧಾರೆ ಇನ್ನೊಬ್ಬರು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:56 am, Mon, 17 July 23

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ