Viral: ನೀವು ಅನಿವಾಸಿ ಭಾರತೀಯರಾ? ನೆಟ್ಟಿಗರ ಪ್ರಶ್ನೆಗೆ ಉದ್ಯಮಿ ಆನಂದ್ ಮಹೀಂದ್ರಾ ಅವರ ಉತ್ತರ ಏನು ಗೊತ್ತಾ?

ಆನಂದ್ ಮಹೀಂದ್ರಾ ಅವರ ಇತ್ತೀಚಿನ ಪೋಸ್ಟ್ ಒಂದಕ್ಕೆ ನೆಟ್ಟಿಗರು ನೀವು ಅನಿವಾಸಿ ಭಾರತೀಯರಾ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಆನಂದ್ ಮಹೀಂದ್ರಾ ಅವರು ನೀಡಿದ ಉತ್ತರ ಎಲ್ಲರ ಗಮನಸೆಳೆಯುತ್ತಿದೆ. ಆನಂದ್ ಮಹೀಂದ್ರಾ ಅವರು ಕೊಟ್ಟ ಉತ್ತರವೇನು ಗೊತ್ತಾ? ಇಲ್ಲಿದೆ ನೋಡಿ

Viral: ನೀವು ಅನಿವಾಸಿ ಭಾರತೀಯರಾ? ನೆಟ್ಟಿಗರ ಪ್ರಶ್ನೆಗೆ ಉದ್ಯಮಿ ಆನಂದ್ ಮಹೀಂದ್ರಾ ಅವರ ಉತ್ತರ ಏನು ಗೊತ್ತಾ?
ಆನಂದ್ ಮಹೀಂದ್ರಾ
Follow us
| Updated By: Rakesh Nayak Manchi

Updated on:Jul 07, 2022 | 11:49 AM

ಉದ್ಯಮಿ ಆನಂದ್ ಮಹೀಂದ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆಕ್ಟಿವ್ ಆಗಿರುತ್ತಾರೆ ಮತ್ತು ತಮ್ಮ ಫಾಲೋವರ್​ಗಳ ಜೀವನಕ್ಕೆ ಸ್ಪೂರ್ತಿ ತುಂಬುವ ವಿಡಿಯೋಗಳನ್ನು, ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.  ಅದರಂತೆ ಆನಂದ್ ಮಹೀಂದ್ರಾ ಅವರು ಇತ್ತೀಚೆಗೆ ಒಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದರು. ಇದಕ್ಕೆ ಕೆಲವು ನೆಟ್ಟಿಗರು ನೀವು ಅನಿವಾಸಿ ಭಾರತೀಯರಾ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಆನಂದ್ ಮಹೀಂದ್ರಾ ಅವರು ನೀಡಿದ ಉತ್ತರ ಇಂಟರ್ನೆಟ್​ ಬಳಕೆದಾರರ ಗಮನಸೆಳೆಯುತ್ತಿದೆ.

ಇದನ್ನೂ ಓದಿ: Viral Video: ಇಂಗ್ಲೆಂಡ್ ರಾಜಕೀಯ ಬಿಕ್ಕಟ್ಟು: ನೇರಪ್ರಸಾರದ ವೇಳೆ ಮೇಜಿನ ಮೇಲೆ ಕಾಲಿಟ್ಟು ಆರಾಮವಾಗಿ ಕುಳಿತ ಟಿವಿ ನಿರೂಪಕನ ವಿಡಿಯೋ ವೈರಲ್

ಜುಲೈ 4 ರಂದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆದ ಆಚರಣೆಗಳ ಚಿತ್ರಗಳನ್ನು ಒಳಗೊಂಡಿರುವ ವಿಡಿಯೋ, ಫೋಟೋಗಳನ್ನು ಆನಂದ್ ಮಹೀಂದ್ರಾ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದರು. “ಮ್ಯಾನ್‌ಹ್ಯಾಟನ್ 4ನೇ ಜುಲೈ ಸ್ಕೈಲೈನ್” ಎಂದು ಪೋಸ್ಟ್​​ಗೆ ಶೀರ್ಷಿಕೆ ನೀಡಿದ್ದರು. ಮ್ಯಾನ್ಹ್ಯಾಟನ್ ಸುತ್ತಲೂ ನಡೆದ ಆಚರಣೆಗಳನ್ನು ತೋರಿಸುವ ವಿಡಿಯೋ, ಫೋಟೋ ಇದಾಗಿದೆ.

ಅವರ ಒಂದು ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಬಳಕೆದಾರರು ಉದ್ಯಮಿಗೆ “ನೀವು ಅನಿವಾಸಿ ಭಾರತೀಯರಾ (NRI)?” ಎಂದು ಪ್ರಶ್ನಿಸಿ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ. ಅನೇಕ ಬಳಕೆದಾರರು ಇಂತಹ ಪ್ರಶ್ನೆಗಳಿಗೆ ಗಮನ ಕೊಡಬೇಡಿ ಎಂದು ಮಹೀಂದ್ರಾ ಅವರ ಜೊತೆ ಮನವಿ ಮಾಡಿದ್ದಾರೆ. ಅದಾಗ್ಯೂ ಆನಂದ್ ಮಹೀಂದ್ರಾ ಅವರು ಬಳಕೆದಾರರ ಪ್ರಶ್ನೆಗೆ ಸಖತ್ ಆಗಿಯೇ ಉತ್ತರವನ್ನು ನೀಡಿದ್ದಾರೆ.

ನೆಟ್ಟಿಗರ ಪ್ರಶ್ನೆಗೆ ಉತ್ತರಿಸಿದ ಉದ್ಯಮಿ, ”ನ್ಯೂಯಾರ್ಕ್‌ನಲ್ಲಿರುವ ಕುಟುಂಬವನ್ನು ಭೇಟಿ ಮಾಡುತ್ತಿದ್ದೇನೆ. ಹಾಗಾಗಿ ನಾನು HRI. ಹೃದಯ (ಯಾವಾಗಲೂ) ಭಾರತದಲ್ಲೇ ನೆಲೆಸಿದೆ” ಎಂದು ಹೇಳಿದ್ದಾರೆ. ಈ ಟ್ವೀಟ್ ನೆಟ್ಟಿಗರ ಕಣ್ಣಿಗೆ ಬೀಳುತ್ತಿದ್ದಂತೆ ಬೆಂಬಲವಾಗಿ ಮಾತನಾಡಿದ್ದಾರೆ. ಬಳಕೆದಾರರೊಬ್ಬರು, “ಇದು ಒಳ್ಳೆಯದಾಗಿದೆ… ನಾನು ಎಚ್‌ಆರ್‌ಐ ಆಗಿದ್ದೇನೆ, ಇದನ್ನು ನಾಚಿಕೆಯಿಲ್ಲದೆ ಹೇಳುತ್ತೇನೆ” ಎಂದು ಪ್ರತಿಕ್ರಿಯಿಸಿದ್ದೇನೆ.

Published On - 11:49 am, Thu, 7 July 22

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು