AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಮನುಷ್ಯನ ದುರಾಸೆಗೆ ಕ್ರೂರತನಕ್ಕೆ ಕೊನೆಯೇ ಇಲ್ಲವೆ?

Baby birds fall to death : ಸಾಕಷ್ಟು ಪುಟ್ಟಹಕ್ಕಿಗಳು ಒಂದೇ ಏಟಿಗೆ ಜೀವಕಳೆದುಕೊಳ್ಳುವಂಥ ಹೃದಯವಿದ್ರಾವಕ ಘಟನೆಯಿದು. ಇದು ನಡೆದದ್ದು ಕೇರಳದ ಮಲಪ್ಪುರಂನಲ್ಲಿ.

Viral Video : ಮನುಷ್ಯನ ದುರಾಸೆಗೆ ಕ್ರೂರತನಕ್ಕೆ ಕೊನೆಯೇ ಇಲ್ಲವೆ?
ಪಕ್ಷಿಗಳ ಮಾರಣಹೋಮ
TV9 Web
| Edited By: |

Updated on:Sep 02, 2022 | 5:02 PM

Share

Viral Video : ಬೃಹತ್ ಮರವನ್ನು ಬುಡಸಮೇತ ನೆಲಕ್ಕುರುಳಿಸಿದಾಗ ಅದರಲ್ಲಿದ್ದ ಸಾಕಷ್ಟು ಹಕ್ಕಿಮರಿಗಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ. ಈ ವಿಡಿಯೋ ಟ್ವಿಟರ್​ನಲ್ಲಿ ಹರಿದಾಡುತ್ತ ವೈರಲ್ ಆಗಿದೆ. ಏಳು ಗಂಟೆಗಳಲ್ಲಿ ಸುಮಾರು 7,000 ಕ್ಕೂ ಹೆಚ್ಚು ರೀಟ್ವೀಟ್​ ಪಡೆದಿದೆ. ಈ ವಿಡಿಯೋ ಅನ್ನು ಟ್ವಿಟರ್​ನಲ್ಲಿ ಹಂಚಿಕೊಂಡವರು ಐಎಫ್​ಎಸ್​ ಅಧಿಕಾರಿ ಪರವೀನ್ ಕಸ್ವಾನ್. ‘ಪ್ರತಿಯೊಬ್ಬರಿಗೂ ಮನೆ ಬೇಕು. ಆದರೆ, ನಾವು ಅದೆಷ್ಟು ಕ್ರೂರಿಗಳಾದೆವು’ ಎಂಬ ನೋಟ್ ಅವರ ಪೋಸ್ಟ್​ನಲ್ಲಿದೆ. 44 ಸೆಕೆಂಡುಗಳ ಜೀವ ಚುರುಗುಟ್ಟುವ ಈ ವಿಡಿಯೋ ನೋಡಲು ನಿಜಕ್ಕೂ ಕಷ್ಟವಾಗುತ್ತದೆ. ಇನ್ನು ಜೀವ ಕಳೆದುಕೊಂಡ ಆ ಹಕ್ಕಿಗಳು, ಅವುಗಳ ಅಪ್ಪ ಅಮ್ಮ ಬಳಗ…

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ಕ್ಲಿಪ್​ ಕೇರಳದ ಮಲಪ್ಪುರಂ ಜಿಲ್ಲೆಯ ತಿರುರಂಗಡಿಯ ವಿಕೆ ಪಾಡಿಯಿಂದ ವರದಿಯಾಗಿದೆ. ಈ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಈ ಮರವನ್ನು ಜೆಸಿಬಿಯಿಂದ ನೆಲಕ್ಕುರುಳಿಸಲಾಗಿದೆ. ಮರ ಉರುಳಿ ಬೀಳುತ್ತಿದ್ದಂತೆ ಜನರೇ ಗಾಬರಿಯಾಗಿದ್ದಾರೆ, ಇನ್ನು ಸಣ್ಣಪುಟ್ಟ ಹಕ್ಕಿಗಳು?  ಅದೂ ಅವುಗಳು ತಮ್ಮತಮ್ಮ ಮರಿಗಳೊಡನೆ ಗೂಡಿನೊಳಗೆ ಇರುವಾಗ ಹೇಗಾಗಿರಬೇಡ?

ಈ ಘಟನೆ ಕುರಿತು ಕೇರಳ ಅರಣ್ಯ ಇಲಾಖೆಯು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ. ವರದಿಗಳ ಪ್ರಕಾರ, ಅಧಿಕೃತ ಪರವಾನಿಗೆ ಇಲ್ಲದೆ ಈ ಮರವನ್ನು ಕಡಿಯಲಾಗಿದೆ. ಹಾಗಾಗಿ ಜೆಸಿಬಿ ಚಾಲಕನೊಂದಿಗೆ ವಿಚಾರಣೆ ನಡೆಸಿ ಆತನನ್ನು ಬಂಧಿಸಲಾಗಿದೆ.

ಅರಣ್ಯ ಸಚಿವ ಎ.ಕೆ. ಸಸೀಂದ್ರನ್, ಈ ಘಟನೆ ಅತ್ಯಂತ ಕ್ರೂರ ಎಂದಿದ್ದಾರೆ. ಇಲಾಖೆಯ ಅನುಮತಿಯಿಲ್ಲದೆ ಹೀಗೆ ಮಾಡಿರುವುದು ಅಪರಾಧ. ಅದರಲ್ಲೂ ಪಕ್ಷಿಗಳು ಮತ್ತು ಗೂಡುಗಳಿದ್ದ ಮರವನ್ನು ಇದ್ದಕ್ಕಿದ್ದ ಹಾಗೆ ಹೀಗೆ ಕಡಿಯಬಾರದು. ಮರ ಕಡಿಯಲು ಅರಣ್ಯ ಇಲಾಖೆಯಿಂದ ಕಟ್ಟುನಿಟ್ಟಾದ ಮಾರ್ಗಸೂಚಿಗಳಿದ್ದು ಅವುಗಳನ್ನು ಪಾಲಿಸಬೇಕಾಗುತ್ತದೆ. ಈ ಘಟನೆಗೆ ಸಂಬಂಧಿಸಿ ಹೆಚ್ಚಿನ ತನಿಖೆ ಮಾಡಲಾಗುವುದು ಎಂದಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 5:00 pm, Fri, 2 September 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ