AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 3 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ತಾಯಿ ಮತ್ತು ಮರಿ ಆನೆಯ ರಕ್ಷಣೆ, ವಿಡಿಯೋ ಇಲ್ಲಿದೆ ನೋಡಿ

ಥೈಲ್ಯಾಂಡ್‌ನ ಪಶುವೈದ್ಯರ ತಂಡದ  ಸುದೀರ್ಘ 3 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ತಾಯಿ ಮತ್ತು ಮರಿ ಆನೆಯನ್ನು ರಕ್ಷಿಸಿರುವ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.

Viral Video: 3 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ತಾಯಿ ಮತ್ತು ಮರಿ ಆನೆಯ ರಕ್ಷಣೆ, ವಿಡಿಯೋ ಇಲ್ಲಿದೆ ನೋಡಿ
ತಾಯಿ ಮತ್ತು ಮರಿ ಆನೆಯ ರಕ್ಷಣೆImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 28, 2023 | 3:31 PM

Share

ಥೈಲ್ಯಾಂಡ್‌ನ ಪಶುವೈದ್ಯರ ತಂಡದ  ಸುದೀರ್ಘ 3 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ತಾಯಿ ಮತ್ತು ಮರಿ ಆನೆಯನ್ನು ರಕ್ಷಿಸಿರುವ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಥಾಯ್ಲೆಂಡ್‌ನ ನಖೋನ್ ನಯೋಕ್ ಪ್ರಾಂತ್ಯದಲ್ಲಿ, ಚಂಡಮಾರುತದ ಸಮಯದಲ್ಲಿ 7 ಅಡಿ ಆಳದ ಗುಂಡಿಯೊಂದು ಸಂಪೂರ್ಣವಾಗಿ ಹುಲ್ಲು ಬೆಳೆದು ಮುಚ್ಚಿ ಹೋಗಿತ್ತು. ಆದರೆ ಅಲ್ಲೊಂದು ಗುಂಡಿ ಇರುವುದನ್ನು ಅರಿಯದೇ ಪುಟ್ಟ ಮರಿ ಆನೆ ಹಾಗೂ ಅದನ್ನು ರಕ್ಷಿಸಲು ಹೋದ ತಾಯಿ ಆನೆ ಚರಂಡಿಯ ಒಳಗೆ ಸಿಕ್ಕಿ ಹಾಕಿಕೊಂಡಿದೆ. ಆದಾಗಗಲೇ ವಿಷಯ ತಿಳಿದ ಪಶುವೈದ್ಯರು ತಂಡ ಸುಮಾರು 3 ಗಂಟೆಗಳ ನಂತರ ಭಾರೀ ಮಳೆಯ ಮಧ್ಯೆಯೂ ಕೂಡ ತಾಯಿ ಹಾಗೂ ಮರಿಯಾನೆಯನ್ನು ಜೀವಂತವಾಗಿ ಹೊರತೆಗೆದಿದ್ದಾರೆ.

ತಾಯಿ ಆನೆ ಪ್ರಜ್ಞೆ ತಪ್ಪಿದ್ದರಿಂದ ಕೆಲಹೊತ್ತಿನ ವರೆಗೆ ಸಿಪಿಆರ್ ನೀಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅಂತಿಮವಾಗಿ ತಾಯಿ ಮತ್ತು ಮರಿ ರಸ್ತೆ ದಾಟಿ ಅರಣ್ಯಕ್ಕೆ ಹೋಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಇಲ್ಲಿದೆ ನೋಡಿ ವಿಡಿಯೋ:

ಇದನ್ನೂ ಓದಿ: ಚಿರತೆ ಸೂರ್ಯ ನಮಸ್ಕಾರ ಹೇಗೆ ಮಾಡುತ್ತಿದೆ ನೋಡಿ: ವಿಡಿಯೋ ವೈರಲ್​​

@TheFigen ಎಂಬ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ತಾಯಿ ಮತ್ತು ಮರಿಯಾನೆಯನ್ನು ರಕ್ಷಿಸಿದ ರಕ್ಷಣಾ ಕಾರ್ಯಾಚರಣೆಯ ಸಿಬ್ಬಂದಿಗೆ ದೇವರು ಸದಾ ಆಶೀರ್ವದಿಸಲಿ ಎಂದು ಕ್ಯಾಪ್ಷನ್​​​ನಲ್ಲಿ ಬರೆಯಲಾಗಿದೆ. ಇದೀಗಾ ಈ ವಿಡಿಯೋ ಟ್ವಿಟರ್​​ನಲ್ಲಿ ಲಕ್ಷಾಂತರ ಜನರನ್ನು ತಲುಪಿದೆ. ಈ ವೈರಲ್ ವಿಡಿಯೋ ಇದೀಗಾಗಲೇ 8.796 ಲಕ್ಷ ವೀಕ್ಷಣೆ ಪಡೆದುಕೊಂಡಿದೆ. 4 ಸಾವಿರಕ್ಕಿಂತಲೂ ಹೆಚ್ಚು ರಿಟ್ವೀಟ್‌ಗಳು, 20 ಸಾವಿರ ಲೈಕ್​​ಗಳು ಮತ್ತು 426 ಬುಕ್‌ಮಾರ್ಕ್‌ಗಳನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 3:30 pm, Tue, 28 March 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ