AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಜಯದಶಮಿಯಂದು ಜನಿಸಿದ ಹೆಣ್ಣು ಮಗುವನ್ನು ದೇವಿಯಂತೆ ಅಲಂಕರಿಸಿದ ವೈದ್ಯೆ

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ದೃಶ್ಯಗಳು ನಮ್ಮ ಮನಸ್ಸನ್ನು ಗೆಲ್ಲುತ್ತವೆ. ಇದೀಗ ಅಂತಹದ್ದೇ ಸುಂದರ ವಿಡಿಯೋವೊಂದು ವೈರಲ್‌ ಆಗಿದ್ದು, ವೈದ್ಯೆಯೊಬ್ಬರು ವಿಜಯದಶಮಿಯಂದು ಹುಟ್ಟಿದ ಹೆಣ್ಣು ಮಗುವಿಗೆ ದುರ್ಗಾಮಾತೆಯ ಅಲಂಕಾರವನ್ನು ಮಾಡಿ, ವಿಶೇಷ ರೀತಿಯಲ್ಲಿ ಮನೆ ಮಂದಿಗೆ ಮಗುವಿನ ಮುಖವನ್ನು ತೋರಿಸಿದ್ದಾರೆ. ಸದ್ಯ ಈ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 18, 2024 | 6:08 PM

Share

ಭಾರತದಲ್ಲಿ ಅದ್ದೂರಿಯಾಗಿ ಆಚರಿಸುವ ಹಬ್ಬಗಳಲ್ಲಿ ನವರಾತ್ರಿ ಹಬ್ಬವೂ ಒಂದು. ಒಂದು ವಾರದ ಹಿಂದೆ ನವರಾತ್ರಿ ಮತ್ತು ವಿಜಯದಶಮಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗಿದೆ. ಇದೀಗ ವಿಜಯದಶಮಿ ಹಬ್ಬದ ದಿನದ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್‌ ಆಗಿದ್ದು, ಈ ಹಬ್ಬದ ದಿನ ಹುಟ್ಟಿದ ಹೆಣ್ಣು ಮಗುವಿಗೆ ವೈದ್ಯೆಯೊಬ್ಬರು ದುರ್ಗಾಮಾತೆಯ ಅಲಂಕಾರವನ್ನು ಮಾಡಿ, ಬಹಳ ವಿಶೇಷ ರೀತಿಯಲ್ಲಿ ಮುದ್ದು ದೇವಿಯನ್ನು ಕುಟುಂಬಸ್ಥರಿಗೆ ಪರಿಚಯಿಸಿದ್ದಾರೆ. ಸದ್ಯ ಈ ಸುಂದರ ದೃಶ್ಯ ನೋಡುಗರ ಮನ ಗೆದ್ದಿದೆ.

ಹೆಣ್ಣು ಮಕ್ಕಳನ್ನು ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಹಾಗೇ ಇಲ್ಲೊಂದು ಕುಟುಂಬದಲ್ಲಿ ವಿಜಯ ದಶಮಿಯ ಪವಿತ್ರ ದಿನದಂದು ಹೆಣ್ಣು ಮಗುವಿನ ಜನನವಾಗಿದ್ದು, ಈ ವಿಶೇಷ ದಿನದಂದು ಹುಟ್ಟಿದ ಈ ಮಗುವಿಗೆ ಆಸ್ಪತ್ರೆಯ ವೈದ್ಯೆಯೊಬ್ಬರು ದುರ್ಗಾ ದೇವಿಯಂತೆ ಬಟ್ಟೆ ತೊಡಿಸಿ, ನಂತರ ಮಗುವನ್ನು ಕುಟುಂಬಸ್ಥರ ಕೈಗೆ ಕೊಟ್ಟಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ.

ವಿನೀತಾ ಸಿಂಗ್‌ (biharigurl) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ವಿಜಯದಶಮಿಯಂದು ಜನಿಸಿದ ಹೆಣ್ಣು ಮಗುವನ್ನು ದುರ್ಗಾ ದೇವಿಯಂತೆ ಕಂಗೊಳಿಸಿದ ವೈದ್ಯೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ವೈದ್ಯೆಯೊಬ್ಬರು ವಿಜಯದಶಮಿಯ ದಿನದಂದು ಜನಿಸಿದ ಮಗುವಿಗೆ ಕೆಂಪು ಬಟ್ಟೆ, ಕುಂಕುಮ, ಕಿರೀಟ ತೊಡಿಸಿ ದುರ್ಗಾ ದೇವಿಯಂತೆ ಸಿಂಗರಿಸಿದ ದೃಶ್ಯವನ್ನು ಕಾಣಬಹುದು. ಹೀಗೆ ದೇವಿಯಂತೆ ಅಲಂಕಾರಗೊಂಡ ಮಗುವನ್ನು ಬಹಳ ವಿಶೇಷ ರೀತಿಯಲ್ಲಿ ಅವರು ಕುಟುಂಬಸ್ಥರಿಗೆ ಪರಿಚಯಿಸಿದ್ದಾರೆ.

ಅಕ್ಟೋಬರ್‌ 17 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆಹಾ… ಎಷ್ಟು ಮುದ್ದಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಾನು ಇಂದು ಕಂಡ ಬೆಸ್ಟ್‌ ವಿಡಿಯೋದಲ್ಲಿ ಇದು ಕೂಡಾ ಒಂದುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಈ ಹೃದಯಸ್ಪರ್ಶಿ ದೃಶ್ಯವನ್ನು ಕಂಡು ಮನಸೋತಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ