AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಜಯದಶಮಿಯಂದು ಜನಿಸಿದ ಹೆಣ್ಣು ಮಗುವನ್ನು ದೇವಿಯಂತೆ ಅಲಂಕರಿಸಿದ ವೈದ್ಯೆ

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ದೃಶ್ಯಗಳು ನಮ್ಮ ಮನಸ್ಸನ್ನು ಗೆಲ್ಲುತ್ತವೆ. ಇದೀಗ ಅಂತಹದ್ದೇ ಸುಂದರ ವಿಡಿಯೋವೊಂದು ವೈರಲ್‌ ಆಗಿದ್ದು, ವೈದ್ಯೆಯೊಬ್ಬರು ವಿಜಯದಶಮಿಯಂದು ಹುಟ್ಟಿದ ಹೆಣ್ಣು ಮಗುವಿಗೆ ದುರ್ಗಾಮಾತೆಯ ಅಲಂಕಾರವನ್ನು ಮಾಡಿ, ವಿಶೇಷ ರೀತಿಯಲ್ಲಿ ಮನೆ ಮಂದಿಗೆ ಮಗುವಿನ ಮುಖವನ್ನು ತೋರಿಸಿದ್ದಾರೆ. ಸದ್ಯ ಈ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 18, 2024 | 6:08 PM

ಭಾರತದಲ್ಲಿ ಅದ್ದೂರಿಯಾಗಿ ಆಚರಿಸುವ ಹಬ್ಬಗಳಲ್ಲಿ ನವರಾತ್ರಿ ಹಬ್ಬವೂ ಒಂದು. ಒಂದು ವಾರದ ಹಿಂದೆ ನವರಾತ್ರಿ ಮತ್ತು ವಿಜಯದಶಮಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗಿದೆ. ಇದೀಗ ವಿಜಯದಶಮಿ ಹಬ್ಬದ ದಿನದ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್‌ ಆಗಿದ್ದು, ಈ ಹಬ್ಬದ ದಿನ ಹುಟ್ಟಿದ ಹೆಣ್ಣು ಮಗುವಿಗೆ ವೈದ್ಯೆಯೊಬ್ಬರು ದುರ್ಗಾಮಾತೆಯ ಅಲಂಕಾರವನ್ನು ಮಾಡಿ, ಬಹಳ ವಿಶೇಷ ರೀತಿಯಲ್ಲಿ ಮುದ್ದು ದೇವಿಯನ್ನು ಕುಟುಂಬಸ್ಥರಿಗೆ ಪರಿಚಯಿಸಿದ್ದಾರೆ. ಸದ್ಯ ಈ ಸುಂದರ ದೃಶ್ಯ ನೋಡುಗರ ಮನ ಗೆದ್ದಿದೆ.

ಹೆಣ್ಣು ಮಕ್ಕಳನ್ನು ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಹಾಗೇ ಇಲ್ಲೊಂದು ಕುಟುಂಬದಲ್ಲಿ ವಿಜಯ ದಶಮಿಯ ಪವಿತ್ರ ದಿನದಂದು ಹೆಣ್ಣು ಮಗುವಿನ ಜನನವಾಗಿದ್ದು, ಈ ವಿಶೇಷ ದಿನದಂದು ಹುಟ್ಟಿದ ಈ ಮಗುವಿಗೆ ಆಸ್ಪತ್ರೆಯ ವೈದ್ಯೆಯೊಬ್ಬರು ದುರ್ಗಾ ದೇವಿಯಂತೆ ಬಟ್ಟೆ ತೊಡಿಸಿ, ನಂತರ ಮಗುವನ್ನು ಕುಟುಂಬಸ್ಥರ ಕೈಗೆ ಕೊಟ್ಟಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯ ಎಲ್ಲೆಡೆ ವೈರಲ್‌ ಆಗುತ್ತಿದೆ.

ವಿನೀತಾ ಸಿಂಗ್‌ (biharigurl) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ವಿಜಯದಶಮಿಯಂದು ಜನಿಸಿದ ಹೆಣ್ಣು ಮಗುವನ್ನು ದುರ್ಗಾ ದೇವಿಯಂತೆ ಕಂಗೊಳಿಸಿದ ವೈದ್ಯೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ವೈದ್ಯೆಯೊಬ್ಬರು ವಿಜಯದಶಮಿಯ ದಿನದಂದು ಜನಿಸಿದ ಮಗುವಿಗೆ ಕೆಂಪು ಬಟ್ಟೆ, ಕುಂಕುಮ, ಕಿರೀಟ ತೊಡಿಸಿ ದುರ್ಗಾ ದೇವಿಯಂತೆ ಸಿಂಗರಿಸಿದ ದೃಶ್ಯವನ್ನು ಕಾಣಬಹುದು. ಹೀಗೆ ದೇವಿಯಂತೆ ಅಲಂಕಾರಗೊಂಡ ಮಗುವನ್ನು ಬಹಳ ವಿಶೇಷ ರೀತಿಯಲ್ಲಿ ಅವರು ಕುಟುಂಬಸ್ಥರಿಗೆ ಪರಿಚಯಿಸಿದ್ದಾರೆ.

ಅಕ್ಟೋಬರ್‌ 17 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆಹಾ… ಎಷ್ಟು ಮುದ್ದಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಾನು ಇಂದು ಕಂಡ ಬೆಸ್ಟ್‌ ವಿಡಿಯೋದಲ್ಲಿ ಇದು ಕೂಡಾ ಒಂದುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಈ ಹೃದಯಸ್ಪರ್ಶಿ ದೃಶ್ಯವನ್ನು ಕಂಡು ಮನಸೋತಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್