AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಏರ್ ಇಂಡಿಯಾ ವಿಮಾನದಲ್ಲಿ ಹೀಗೊಂದು ಹೃದಯಸ್ಪರ್ಶಿ ಸನ್ನಿವೇಶ

Air India : ಹೆಣ್ಣುಮಗುವನ್ನು ಹೆಗಲ ಮೇಲೆ ಹಾಕಿಕೊಂಡು ಸಂತೈಸುತ್ತಿರುವ ಏರ್ ಇಂಡಿಯಾ ಸಿಬ್ಬಂದಿಗೆ ನೆಟ್ಟಿಗರಿಂದ ಶಭಾಷ್​! 2ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆಗೊಳಗಾದ ಈ ವಿಡಿಯೋ ನೋಡಿ.

Viral Video : ಏರ್ ಇಂಡಿಯಾ ವಿಮಾನದಲ್ಲಿ ಹೀಗೊಂದು ಹೃದಯಸ್ಪರ್ಶಿ ಸನ್ನಿವೇಶ
ಪ್ರಯಾಣಿಕರ ಮಗುವನ್ನು ಸಂತೈಸುತ್ತಿರುವ ಏರ್ ಇಂಡಿಯಾ ಸಿಬ್ಬಂದಿ
TV9 Web
| Edited By: |

Updated on:Aug 30, 2022 | 4:55 PM

Share

Viral Video : ವಿಮಾನದಲ್ಲಿ ಚಿಕ್ಕಮಕ್ಕಳೊಂದಿಗೆ ಪ್ರಯಾಣಿಸುವುದು ನಿಜಕ್ಕೂ ಪ್ರಯಾಸದ ಕೆಲಸ. ಇಂಥ ಸಂದರ್ಭದಲ್ಲಿ ವಿಮಾನ ಸಿಬ್ಬಂದಿ ಸಹಕರಿಸಿದರೆ ವರ್ಣಿಸದಷ್ಟು ಆರಾಮದಾಯಕವಾಗಿರುತ್ತದೆ ಪ್ರಯಾಣ. ಅಂಥದೊಂದು ದೃಶ್ಯವನ್ನು ನೀವಿಲ್ಲಿ ನೋಡಬಹುದು. ನೀಲ್​ ಮಲ್ಕಮ್ ಎಂಬ ಏರ್ ಇಂಡಿಯಾ ಸಿಬ್ಬಂದಿ ಪ್ರಯಾಣಿಕರ ಹೆಣ್ಣುಮಗುವನ್ನು ಭುಜದ ಮೇಲೆ ಹಾಕಿಕೊಂಡು ಸಂತೈಸಿದ್ದಾರೆ. ಈ ಮಗುವಿನ ತಂದೆ ವೆಂಕಟೇಶ ನೀಲ್ ಅವರಿಗೆ ವಿಶೇಷ ಧನ್ಯವಾದ ಹೇಳಿದ್ದಾರೆ. ವೆಂಕಟೇಶ್, ಅವರ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ನೋಡಬಹುದು. ಹೀಗೆ ಭುಜದ ಮೇಲೆ ಹಾಯಾಗಿ ವಿರಮಿಸುವ ಈ ಮಗುವನ್ನು ನೋಡಿ ನೆಟ್ಟಿಗರ ಮನತುಂಬಿದೆ.

ಇದನ್ನೂ ಓದಿ
Image
Viral Video : ತನ್ನ ಹುಡುಗನಿಗಾಗಿ ಪಂಜಾಬಿ ಕಲಿತು ಮಾತನಾಡಿದ್ದಾಳೆ ಈ ಕೆನಡಿಯನ್ ಯುವತಿ
Image
Viral Video : ‘ಮಸಾಕಾ ಕಿಡ್ಸ್​ ಆಫ್ರಿಕಾನಾ’ದ ಮಕ್ಕಳು ಈ ಸಲ ಜಸ್ಟಿನ್​ ಬೈಬರ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ
Image
Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು
Image
Viral Video : ನಿರೀಕ್ಷೆ ಇಲ್ಲದೆ ಪ್ರೀತಿಸುವುದಷ್ಟೇ ಗೊತ್ತು ಈ ಜೀವಗಳಿಗೆ
View this post on Instagram

A post shared by Jeevan Venkatesh | JWA (@jeevan_jwa)

ಆಗಸ್ಟ್ 7 ರಂದು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಏರ್​ ಇಂಡಿಯಾ ಕ್ಯಾಬಿನ್​ ಸಿಬ್ಬಂದಿ ನೀಲ್ ಪ್ರಯಾಣಿಕರ ಮಗುವನ್ನು ಸಂತೈಸಿದ್ದಾರೆ. ಇವರ ಈ ಆಪ್ತ ನಡೆವಳಿಕೆಯನ್ನು ಮೆಚ್ಚಿಕೊಂಡ ಮಗುವಿನ ತಂದೆ ವೆಂಕಟೇಶ್, ‘ನನ್ನ ಮಗಳು ಹೀಗೆ ಅವರ ಭುಜದ ಮೇಲೆ ಹಾಯಾಗಿ ಮಲಗಿರುವುದನ್ನು ನೋಡಿ ಅಚ್ಚರಿಗೊಳಗಾಗಿದ್ದೇನೆ. ಏರ್ ಇಂಡಿಯಾ ಅನ್ನು ಟಾಟಾ ತನ್ನ ಸುಪರ್ದಿಗೆ ತೆಗೆದುಕೊಂಡ ನಂತರ ಅನೇಕ ಬದಲಾವಣೆಗಳು ಉಂಟಾಗುತ್ತಿವೆ’ ಎಂದು ಪೋಸ್ಟ್​ನಲ್ಲಿ ಬರೆದು, ನೀಲ್​ ಮಲ್ಕಮ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ನೆಟ್ಟಿಗರು ಹೃದಯಸ್ಪರ್ಶಿಯಾದ ಈ ದೃಶ್ಯವನ್ನು ಕೊಂಡಾಡುತ್ತಿದ್ದಾರೆ. 1,70,000 ಕ್ಕೂ ಹೆಚ್ಚು ಲೈಕ್ಸ್​ ಮತ್ತು 2 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆಯನ್ನು ಈ ವಿಡಿಯೋ ಹೊಂದಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:50 pm, Tue, 30 August 22

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ