AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು

ಇದ್ದಕ್ಕಿದ್ದಂತೆ ಕಾರಿನಿಂದ ಹೊಗೆ ಬರಲಾರಂಭಿಸಿದ್ದು, ಮಕ್ಕಳ ಕಿರಿಚಾಟದಿಂದ ಮನೆಯವರು ಹೊರಗೆ ಧಾವಿಸಿದ್ದಾರೆ. ಆದರೆ ಏಕಾಏಕಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯವರು ಮಕ್ಕಳಿಬ್ಬರನ್ನು ಕಾರಿನಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್ ಆಗಿದೆ.

ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು
ಅಕ್ಷತಾ ವರ್ಕಾಡಿ
|

Updated on: Dec 19, 2023 | 6:29 PM

Share

ಬಿಹಾರ: ರಾಜಧಾನಿ ಪಾಟ್ನಾದ ಮಸೋಧಿ ಪ್ರದೇಶದಲ್ಲಿ ಅಹಿತಕರ ಘಟನೆಯೊಂದು ಬೆಳಕಿಗೆ ಬಂದಿದೆ. ಮನೆಯೊಂದರ ಮುಂದೆ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸುಟ್ಟುಕರಕಲಾಗಿದ್ದಾರೆ. ಗೌರಿಚಕ್ ಥಾಣೆ ಪ್ರದೇಶದ ಸೊಹ್ಗಿ ರಾಂಪುರದಲ್ಲಿ ಈ ಘಟನೆ ನಡೆದಿದ್ದು, ರಾಂಪುರದ ಸಂಜಿತ್ ಕುಮಾರ್ ಹಾಗೂ ಮನೆಯ ಉಳಿದ ಸದಸ್ಯರು ಮನೆಯೊಳಗಿದ್ದ ವೇಳೆ, ಪುಟ್ಟ ಮಕ್ಕಳಿಬ್ಬರು ಕಾರಿನೊಳಗೆ ಆಟವಾಡಲು ಬಂದಿರುವುದಾಗಿ ತಿಳಿದುಬಂದಿದೆ.

ಸಂಜಿತ್ ಕುಮಾರ್ ಎಂಬವರ 8 ವರ್ಷದ ಮಗ ಮತ್ತು ಅವರ ಸಹೋದರನ 6 ವರ್ಷದ ಮಗಳು ಸಾವನ್ನಪ್ಪಿರುವುದು ವರದಿಯಾಗಿದೆ. ಇದ್ದಕ್ಕಿದ್ದಂತೆ ಕಾರಿನಿಂದ ಹೊಗೆ ಬರಲಾರಂಭಿಸಿದ್ದು, ಮನೆಯವರು ಹೊರಗೆ ಧಾವಿಸಿದಾಗ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಏಕಾಏಕಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯವರು ಮಕ್ಕಳಿಬ್ಬರನ್ನು ಕಾರಿನಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಮಕ್ಕಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು.

ಇದನ್ನೂ ಓದಿ:  ರೈಲಿನ ಕಿಟಕಿ ಬದಿ ಕುಳಿತಿದ್ದ ಯುವಕ ಚಳಿಯಿಂದ ಸಾವು; 300 ಕಿ.ಮಿ ಪ್ರಯಾಣಿಸುವವರೆಗೂ ಯಾರಿಗೂ ಗೊತ್ತೇಯಿಲ್ಲ

ಕೆಲ ಹೊತ್ತಿನ ಬಳಿಕ ಕಾರಿನ ಗಾಜು ಒಡೆದು ಮಕ್ಕಳನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಬೆಂಕಿ ನಂದಿಸಿ ಕಾರಿನಲ್ಲಿದ್ದ ಮಕ್ಕಳನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದರೂ ಸಹ ಅಷ್ಟೊತ್ತಿಗಾಗಲೇ ಮಕ್ಕಳಿಬ್ಬರ ದೇಹ ಅರೆಬರೆ ಸುಟ್ಟು ಹೋಗಿದೆ. ಪರಿಣಾಮ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಕೂಡ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್