AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು

ಇದ್ದಕ್ಕಿದ್ದಂತೆ ಕಾರಿನಿಂದ ಹೊಗೆ ಬರಲಾರಂಭಿಸಿದ್ದು, ಮಕ್ಕಳ ಕಿರಿಚಾಟದಿಂದ ಮನೆಯವರು ಹೊರಗೆ ಧಾವಿಸಿದ್ದಾರೆ. ಆದರೆ ಏಕಾಏಕಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯವರು ಮಕ್ಕಳಿಬ್ಬರನ್ನು ಕಾರಿನಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್ ಆಗಿದೆ.

ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು
ಅಕ್ಷತಾ ವರ್ಕಾಡಿ
|

Updated on: Dec 19, 2023 | 6:29 PM

Share

ಬಿಹಾರ: ರಾಜಧಾನಿ ಪಾಟ್ನಾದ ಮಸೋಧಿ ಪ್ರದೇಶದಲ್ಲಿ ಅಹಿತಕರ ಘಟನೆಯೊಂದು ಬೆಳಕಿಗೆ ಬಂದಿದೆ. ಮನೆಯೊಂದರ ಮುಂದೆ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸುಟ್ಟುಕರಕಲಾಗಿದ್ದಾರೆ. ಗೌರಿಚಕ್ ಥಾಣೆ ಪ್ರದೇಶದ ಸೊಹ್ಗಿ ರಾಂಪುರದಲ್ಲಿ ಈ ಘಟನೆ ನಡೆದಿದ್ದು, ರಾಂಪುರದ ಸಂಜಿತ್ ಕುಮಾರ್ ಹಾಗೂ ಮನೆಯ ಉಳಿದ ಸದಸ್ಯರು ಮನೆಯೊಳಗಿದ್ದ ವೇಳೆ, ಪುಟ್ಟ ಮಕ್ಕಳಿಬ್ಬರು ಕಾರಿನೊಳಗೆ ಆಟವಾಡಲು ಬಂದಿರುವುದಾಗಿ ತಿಳಿದುಬಂದಿದೆ.

ಸಂಜಿತ್ ಕುಮಾರ್ ಎಂಬವರ 8 ವರ್ಷದ ಮಗ ಮತ್ತು ಅವರ ಸಹೋದರನ 6 ವರ್ಷದ ಮಗಳು ಸಾವನ್ನಪ್ಪಿರುವುದು ವರದಿಯಾಗಿದೆ. ಇದ್ದಕ್ಕಿದ್ದಂತೆ ಕಾರಿನಿಂದ ಹೊಗೆ ಬರಲಾರಂಭಿಸಿದ್ದು, ಮನೆಯವರು ಹೊರಗೆ ಧಾವಿಸಿದಾಗ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಏಕಾಏಕಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯವರು ಮಕ್ಕಳಿಬ್ಬರನ್ನು ಕಾರಿನಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಮಕ್ಕಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು.

ಇದನ್ನೂ ಓದಿ:  ರೈಲಿನ ಕಿಟಕಿ ಬದಿ ಕುಳಿತಿದ್ದ ಯುವಕ ಚಳಿಯಿಂದ ಸಾವು; 300 ಕಿ.ಮಿ ಪ್ರಯಾಣಿಸುವವರೆಗೂ ಯಾರಿಗೂ ಗೊತ್ತೇಯಿಲ್ಲ

ಕೆಲ ಹೊತ್ತಿನ ಬಳಿಕ ಕಾರಿನ ಗಾಜು ಒಡೆದು ಮಕ್ಕಳನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಬೆಂಕಿ ನಂದಿಸಿ ಕಾರಿನಲ್ಲಿದ್ದ ಮಕ್ಕಳನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದರೂ ಸಹ ಅಷ್ಟೊತ್ತಿಗಾಗಲೇ ಮಕ್ಕಳಿಬ್ಬರ ದೇಹ ಅರೆಬರೆ ಸುಟ್ಟು ಹೋಗಿದೆ. ಪರಿಣಾಮ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಕೂಡ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ