AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು

ಇದ್ದಕ್ಕಿದ್ದಂತೆ ಕಾರಿನಿಂದ ಹೊಗೆ ಬರಲಾರಂಭಿಸಿದ್ದು, ಮಕ್ಕಳ ಕಿರಿಚಾಟದಿಂದ ಮನೆಯವರು ಹೊರಗೆ ಧಾವಿಸಿದ್ದಾರೆ. ಆದರೆ ಏಕಾಏಕಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯವರು ಮಕ್ಕಳಿಬ್ಬರನ್ನು ಕಾರಿನಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್ ಆಗಿದೆ.

ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು
ಅಕ್ಷತಾ ವರ್ಕಾಡಿ
|

Updated on: Dec 19, 2023 | 6:29 PM

Share

ಬಿಹಾರ: ರಾಜಧಾನಿ ಪಾಟ್ನಾದ ಮಸೋಧಿ ಪ್ರದೇಶದಲ್ಲಿ ಅಹಿತಕರ ಘಟನೆಯೊಂದು ಬೆಳಕಿಗೆ ಬಂದಿದೆ. ಮನೆಯೊಂದರ ಮುಂದೆ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸುಟ್ಟುಕರಕಲಾಗಿದ್ದಾರೆ. ಗೌರಿಚಕ್ ಥಾಣೆ ಪ್ರದೇಶದ ಸೊಹ್ಗಿ ರಾಂಪುರದಲ್ಲಿ ಈ ಘಟನೆ ನಡೆದಿದ್ದು, ರಾಂಪುರದ ಸಂಜಿತ್ ಕುಮಾರ್ ಹಾಗೂ ಮನೆಯ ಉಳಿದ ಸದಸ್ಯರು ಮನೆಯೊಳಗಿದ್ದ ವೇಳೆ, ಪುಟ್ಟ ಮಕ್ಕಳಿಬ್ಬರು ಕಾರಿನೊಳಗೆ ಆಟವಾಡಲು ಬಂದಿರುವುದಾಗಿ ತಿಳಿದುಬಂದಿದೆ.

ಸಂಜಿತ್ ಕುಮಾರ್ ಎಂಬವರ 8 ವರ್ಷದ ಮಗ ಮತ್ತು ಅವರ ಸಹೋದರನ 6 ವರ್ಷದ ಮಗಳು ಸಾವನ್ನಪ್ಪಿರುವುದು ವರದಿಯಾಗಿದೆ. ಇದ್ದಕ್ಕಿದ್ದಂತೆ ಕಾರಿನಿಂದ ಹೊಗೆ ಬರಲಾರಂಭಿಸಿದ್ದು, ಮನೆಯವರು ಹೊರಗೆ ಧಾವಿಸಿದಾಗ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಏಕಾಏಕಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯವರು ಮಕ್ಕಳಿಬ್ಬರನ್ನು ಕಾರಿನಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಮಕ್ಕಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು.

ಇದನ್ನೂ ಓದಿ:  ರೈಲಿನ ಕಿಟಕಿ ಬದಿ ಕುಳಿತಿದ್ದ ಯುವಕ ಚಳಿಯಿಂದ ಸಾವು; 300 ಕಿ.ಮಿ ಪ್ರಯಾಣಿಸುವವರೆಗೂ ಯಾರಿಗೂ ಗೊತ್ತೇಯಿಲ್ಲ

ಕೆಲ ಹೊತ್ತಿನ ಬಳಿಕ ಕಾರಿನ ಗಾಜು ಒಡೆದು ಮಕ್ಕಳನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಬೆಂಕಿ ನಂದಿಸಿ ಕಾರಿನಲ್ಲಿದ್ದ ಮಕ್ಕಳನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದರೂ ಸಹ ಅಷ್ಟೊತ್ತಿಗಾಗಲೇ ಮಕ್ಕಳಿಬ್ಬರ ದೇಹ ಅರೆಬರೆ ಸುಟ್ಟು ಹೋಗಿದೆ. ಪರಿಣಾಮ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಕೂಡ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್