AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು

ಇದ್ದಕ್ಕಿದ್ದಂತೆ ಕಾರಿನಿಂದ ಹೊಗೆ ಬರಲಾರಂಭಿಸಿದ್ದು, ಮಕ್ಕಳ ಕಿರಿಚಾಟದಿಂದ ಮನೆಯವರು ಹೊರಗೆ ಧಾವಿಸಿದ್ದಾರೆ. ಆದರೆ ಏಕಾಏಕಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯವರು ಮಕ್ಕಳಿಬ್ಬರನ್ನು ಕಾರಿನಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್ ಆಗಿದೆ.

ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು
ಅಕ್ಷತಾ ವರ್ಕಾಡಿ
|

Updated on: Dec 19, 2023 | 6:29 PM

Share

ಬಿಹಾರ: ರಾಜಧಾನಿ ಪಾಟ್ನಾದ ಮಸೋಧಿ ಪ್ರದೇಶದಲ್ಲಿ ಅಹಿತಕರ ಘಟನೆಯೊಂದು ಬೆಳಕಿಗೆ ಬಂದಿದೆ. ಮನೆಯೊಂದರ ಮುಂದೆ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸುಟ್ಟುಕರಕಲಾಗಿದ್ದಾರೆ. ಗೌರಿಚಕ್ ಥಾಣೆ ಪ್ರದೇಶದ ಸೊಹ್ಗಿ ರಾಂಪುರದಲ್ಲಿ ಈ ಘಟನೆ ನಡೆದಿದ್ದು, ರಾಂಪುರದ ಸಂಜಿತ್ ಕುಮಾರ್ ಹಾಗೂ ಮನೆಯ ಉಳಿದ ಸದಸ್ಯರು ಮನೆಯೊಳಗಿದ್ದ ವೇಳೆ, ಪುಟ್ಟ ಮಕ್ಕಳಿಬ್ಬರು ಕಾರಿನೊಳಗೆ ಆಟವಾಡಲು ಬಂದಿರುವುದಾಗಿ ತಿಳಿದುಬಂದಿದೆ.

ಸಂಜಿತ್ ಕುಮಾರ್ ಎಂಬವರ 8 ವರ್ಷದ ಮಗ ಮತ್ತು ಅವರ ಸಹೋದರನ 6 ವರ್ಷದ ಮಗಳು ಸಾವನ್ನಪ್ಪಿರುವುದು ವರದಿಯಾಗಿದೆ. ಇದ್ದಕ್ಕಿದ್ದಂತೆ ಕಾರಿನಿಂದ ಹೊಗೆ ಬರಲಾರಂಭಿಸಿದ್ದು, ಮನೆಯವರು ಹೊರಗೆ ಧಾವಿಸಿದಾಗ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಏಕಾಏಕಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಮನೆಯವರು ಮಕ್ಕಳಿಬ್ಬರನ್ನು ಕಾರಿನಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಮಕ್ಕಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು.

ಇದನ್ನೂ ಓದಿ:  ರೈಲಿನ ಕಿಟಕಿ ಬದಿ ಕುಳಿತಿದ್ದ ಯುವಕ ಚಳಿಯಿಂದ ಸಾವು; 300 ಕಿ.ಮಿ ಪ್ರಯಾಣಿಸುವವರೆಗೂ ಯಾರಿಗೂ ಗೊತ್ತೇಯಿಲ್ಲ

ಕೆಲ ಹೊತ್ತಿನ ಬಳಿಕ ಕಾರಿನ ಗಾಜು ಒಡೆದು ಮಕ್ಕಳನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಬೆಂಕಿ ನಂದಿಸಿ ಕಾರಿನಲ್ಲಿದ್ದ ಮಕ್ಕಳನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದರೂ ಸಹ ಅಷ್ಟೊತ್ತಿಗಾಗಲೇ ಮಕ್ಕಳಿಬ್ಬರ ದೇಹ ಅರೆಬರೆ ಸುಟ್ಟು ಹೋಗಿದೆ. ಪರಿಣಾಮ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಕೂಡ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ