Viral Video: ಅರೇ ಇದೆಂಥಾ ಅಚ್ಚರಿ… ಬೇವಿನ ಮರದಲ್ಲಿ ಮಾವಿನ ಹಣ್ಣು

ಈ ಪ್ರಕೃತಿಯ ವಿಸ್ಮಯ ಯಾರು ಬಲ್ಲರು ಹೇಳಿ. ಪ್ರಕೃತಿಯ ಮಡಿಲಿನಲ್ಲಿ ಹಲವು ವಿಸ್ಮಯಕಾರಿ ಅಂಶಗಳು ಅಡಗಿವೆ. ಇದೀಗ ಇಂಹದ್ದೇ ಅಚ್ಚರಿಯ ಘಟನೆಯೊಂದು ನಡೆದಿದ್ದು, ಕೇಂದ್ರ ಸಚಿವ ಪ್ರಹ್ಲಾದ್‌ ಸಿಂಗ್‌ ಪಟೇಲ್‌ ಅವರ ಮಧ್ಯಪ್ರದೇಶದಲ್ಲಿನ ಬಂಗಲೆಯಲ್ಲಿನ ಗಾರ್ಡನ್‌ ಅಲ್ಲಿ ಬೇವಿನ ಮರದಲ್ಲಿ ಮಾವಿನ ಹಣ್ಣು ಬೆಳೆದಿದೆ. ಈ ಕುರಿತ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ. 

Viral Video: ಅರೇ ಇದೆಂಥಾ ಅಚ್ಚರಿ... ಬೇವಿನ ಮರದಲ್ಲಿ ಮಾವಿನ ಹಣ್ಣು
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: May 28, 2024 | 12:32 PM

ಪ್ರಕೃತಿ ಹಲವು  ವಿಸ್ಮಯಕಾರಿ ಸಂಗತಿಗಳ ಆಗರ.  ಈ ಪ್ರಕೃತಿ ಸದಾ ಒಂದಲ್ಲ ಒಂದು ಮನುಷ್ಯರು ಊಹಿಸಲು ಸಾಧ್ಯವಾಗದ ವಿಸ್ಮಯಗಳನ್ನು ಆಗಾಗ್ಗೆ ಸೃಷ್ಟಿಸುತ್ತದೆ. ಇಂತಹ ಅಚ್ಚರಿಯ ಸಂಗತಿಗಳು ನಮ್ಮನ್ನು ಬಾಯಿ ಮೇಲೆ ಬೆರಳಿಡುವಂತೆ ಮಾಡತ್ತವೆ. ಇದೀಗ ಇಂತಹದ್ದೇ ವಿಸ್ಮಯಕಾರಿ ಘಟನೆಯೊಂದು ನಡೆದಿದ್ದು, ಕೇಂದ್ರ ಸಚಿವ ಪ್ರಹ್ಲಾದ್‌ ಸಿಂಗ್‌ ಪಟೇಲ್‌ ಅವರ ಬಂಗಲೆಯಲ್ಲಿ ಬೇವಿನ ಮರದಲ್ಲಿ ಮಾವಿನ ಹಣ್ಣು ಬೆಳೆದಿದೆ. ಈ ಕುರಿತ ವಿಶೇಷ ವಿಡಿಯೋವೊಂದನ್ನು ಸಚಿವ ಪ್ರಹ್ಲಾದ್‌ ಸಿಂಗ್‌ ಪಟೇಲ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಅಚ್ಚರಿಯ ಸಂಗತಿಯನ್ನು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

ಈ  ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, ಕೇಂದ್ರ ಸಚಿವ ಪ್ರಹ್ಲಾದ್‌ ಸಿಂಗ್‌ ಪಟೇಲ್‌ ಅವರ ಬಂಗಲೆಯಲ್ಲಿನ ಗಾರ್ಡನ್‌ನಲ್ಲಿರುವ ಬೇವಿನ ಮರದಲ್ಲಿ ಮಾವಿನ ಹಣ್ಣು ಬೆಳೆದಿದೆ. ಈ  ವಿಡಿಯೋವನ್ನು ಪ್ರಹ್ಲಾದ್‌ ಸಿಂಗ್‌ ಪಟೇಲ್‌ (@prahladspatel) ತಮ್ಮ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕೇಂದ್ರ  ಸಚಿವರು ಹಂಚಿಕೊಂಡ ವಿಡಿಯೋ ಇಲ್ಲಿದೆ ನೋಡಿ:

ಭೋಪಾಲ್‌ನಲ್ಲಿರುವ ಬಂಗಲೆಯಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಶನಿವಾರದಂದು ಅದರ ಪರಿಶೀಲನೆಗೆಂದು ಸಚಿವ ಪ್ರಹ್ಲಾದ್‌ ಸಿಂಗ್‌ ಭೇಟಿ ನೀಡಿದ್ದರು, ಆ ಸಂದರ್ಭದಲ್ಲಿ ಬೇವಿನ ಮರದಲ್ಲಿ ಮಾವಿನ ಹಣ್ಣು ಬೆಳೆದಿರುವುದನ್ನು ಗಮನಿಸಿದ ಅವರು ಕೃಷಿ ವಿಜ್ಞಾನಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದರು. ಪರಿಶೀಲನೆ ನಡೆಸಿದಾಗ ಬೇವಿನ ಮರವು ಸುಮಾರು 20 ರಿಂದ 25 ವರ್ಷಗಳಷ್ಟು ಹಳೆಯದು ಎಂದು ತಿಳಿದು ಬಂದಿದೆ. ಬೇವಿನ ಮರದಲ್ಲಿ ಮಾವಿನ ಕೊಂಬೆ ಪತ್ತೆಯಾಗಿದ್ದು, ಕೆಲವೊಮ್ಮೆ ಬೇರೆ ಮರದ ಮೇಲೆ ಬಿದ್ದ ಬೀಜಗಳು ಮೊಳಕೆಯೊಡೆದು ಅಲ್ಲೇ ಮರವಾಗಿ ಬೆಳೆಯುತ್ತದೆ ಎನ್ನುತ್ತಾರೆ ಸಸ್ಯಶಾಸ್ತ್ರಜ್ಞರು.

ವೈರಲ್‌ ವಿಡಿಯೋದಲ್ಲಿ ಬೇವಿನ ಮರವೊಂದರ ಕೊಂಬೆಗಳಲ್ಲಿ ಮಾವಿನ ಹಣ್ಣು ಬೆಳೆದಿರುವುದನ್ನು ಕಾಣಬಹುದು.  ಕೇಂದ್ರ ಸಚಿವ ಪ್ರಹ್ಲಾದ್‌ ಸಿಂಗ್‌ ಪಟೇಲ್‌ ಅವರು ಮಧ್ಯಪ್ರದೇಶದಲ್ಲಿರುವ ತಮ್ಮ ಬಂಗಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬೇವಿನ ಮರದಲ್ಲಿ ಮಾವಿನ ಹಣ್ಣು ಬೆಳೆದಿರುವುದನ್ನು ಗಮನಿಸಿದ್ದಾರೆ. ಈ ಅಚ್ಚರಿಯ ಸಂಗತಿಯ ಕುರಿತ ವಿಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: BMW ಕಾರು ಓಡಿಸಿದ ಅಪ್ರಾಪ್ತ ಮಗ, ಕಾರಿನ ಬಾನೆಟ್ ಮೇಲೆ ಮಲಗಿ ಅಪ್ಪನ ಸವಾರಿ

ಮೇ  24 ರಂದು ಹಂಚಿಕೊಳ್ಳಲಾದ ಈ ವಿಡಿಯೋ 30 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ವಿಸ್ಮಯ ಸಂಗತಿಯನ್ನು ಕಂಡು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ