AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೆ..ಎಂಥಾ ದುರಂತ: ಹೈವೋಲ್ಟೇಜ್ ವಿದ್ಯುತ್ ತಂತಿ ಬಿದ್ದು 30 ಮಂದಿ ದುರ್ಮರಣ

ಕಿಬ್ಲಾ ಮಾರುಕಟ್ಟೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ಕಾಣುವಂತೆ ಎಲ್ಲಾ ಮೃತದೇಹಗಳು ಒಂದಕ್ಕೊಂದು ಅಂಟಿಕೊಂಡಿವೆ.

ಛೆ..ಎಂಥಾ ದುರಂತ: ಹೈವೋಲ್ಟೇಜ್ ವಿದ್ಯುತ್ ತಂತಿ ಬಿದ್ದು 30 ಮಂದಿ ದುರ್ಮರಣ
ಸಾಂದರ್ಭಿಕ ಚಿತ್ರ
TV9 Web
| Updated By: ಝಾಹಿರ್ ಯೂಸುಫ್|

Updated on: Feb 02, 2022 | 8:04 PM

Share

ಯಾವಾಗ ಬೇಕಾದರೂ ಅಪಘಾತಗಳು ಸಂಭವಿಸುತ್ತವೆ. ಕೆಲವು ಅಪಘಾತಗಳು ಎಷ್ಟು ಭೀಕರವಾಗಿರುತ್ತವೆ ಎಂದರೆ ಅವುಗಳನ್ನು ನೋಡಿದರೆ ಕೈಕಾಲುಗಳು ನಡುಗಲಾರಂಭಿಸುತ್ತವೆ. ಅಂತಹದೊಂದು ಅವಘಡದ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವೀಡಿಯೊ ಕಾಂಗೋ ಗಣರಾಜ್ಯದ್ದು, ಅಲ್ಲಿನ ಕಿಬ್ಲಾ ಪ್ರದೇಶದ ಮಾರುಕಟ್ಟೆಯಲ್ಲಿ ಹೈವೋಲ್ಟೇಜ್ ವಿದ್ಯುತ್ ತಂತಿ ಜನರ ಮೇಲೆ ಬಿದ್ದಿದೆ. ಈ ತಂತಿಯಿಂದ 30 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೊದಲೇ ಅಸ್ವಚ್ಛತೆಯಿಂದ ಕೂಡಿದ್ದ ಮಾರುಕಟ್ಟೆಯ ದಾರಿಯುದ್ದಕ್ಕೂ ಕೆಸರು ತುಂಬಿತ್ತು. ಇದರಿಂದ ಅಲ್ಲಿ ವಿದ್ಯುತ್ ಕಂಬಗಳು ಕೂಡ ಸಡಿಲಗೊಂಡಿದ್ದವು. ಎಂದಿನಂತೆ ಬೆಳಿಗ್ಗಿನ ಜಾವ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಲು ಜನಜಂಗುಳಿ ಸೇರಿಸಿತ್ತು. ಇದೇ ವೇಳೆ ಹೈವೋಲ್ಟೇಜ್ ತಂತಿ ಬಿದ್ದಿದೆ. ಮೊದಲೇ ಕೆಸರಿನಿಂದ ತುಂಬಿದ್ದರಿಂದ ನೀರಿನ ಸೆಳೆತಕ್ಕೆ ಇಡೀ ಪ್ರದೇಶಕ್ಕೆ ಹೈವೋಲ್ಟೇಜ್ ವಿದ್ಯುತ್ ಪಸರಿಸಿದೆ. ಇದರಿಂದ ಕ್ಷಣಾರ್ಧದಲ್ಲೇ ವಿದ್ಯುತ್ ಶಾಕ್ ತಗುಲಿ ಮಾರುಕಟ್ಟೆಯಲ್ಲಿ ಮೃತದೇಹಗಳು ರಾಶಿ ಬಿದ್ದವು.

ಇದೀಗ ಈ ಕಿಬ್ಲಾ ಮಾರುಕಟ್ಟೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ಕಾಣುವಂತೆ ಎಲ್ಲಾ ಮೃತದೇಹಗಳು ಒಂದಕ್ಕೊಂದು ಅಂಟಿಕೊಂಡಿವೆ. ಈ ಪೈಕಿ ಬಹುತೇಕ ಮೃತ ದೇಹಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ತಂತಿ ನೇರವಾಗಿ ಕೆಸರಿನಿಂದ ಕೂಡಿದ ನೀರಿಗೆ ಬಿದ್ದಿದೆ. ನೀರಿನ ಸಂಪರ್ಕಕ್ಕೆ ಬಂದವರಿಗೆ ಬಲವಾದ ವಿದ್ಯುತ್ ಶಾಕ್ ತಗುಲಿದೆ. ಈ ಪೈಕಿ 30 ಮಂದಿ ಸಾವನ್ನಪ್ಪಿದ್ದಾರೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(high voltage deadly wire fall in busy market bodies lying everwhere)

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು