AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅಶ್ಲೀಲ ಮೆಸೇಜ್‌ ಮಾಡಿದ ಆರೋಪ; ವಿದ್ಯಾರ್ಥಿನಿ ಮತ್ತು ಕುಟುಂಬಸ್ಥರ ಕೈಯಿಂದ ಶಿಕ್ಷಕನಿಗೆ ಬಿತ್ತು ಗೂಸಾ

ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿ ಕಿರುಕುಳ ನೀಡಿದ ಆರೋಪದ ಮೇರೆಗೆ ಶಿಕ್ಷಕನೊಬ್ಬನಿಗೆ ಚಪ್ಪಲಿ ಏಟು ಬಿದ್ದಂತಹ ಘಟನೆ ನಡೆದಿದೆ. ಶಾಲೆಗೆ ನುಗ್ಗಿದ ವಿದ್ಯಾರ್ಥಿನಿಯ ಕುಟುಂಬಸ್ಥರು ಎಲ್ಲರ ಎದುರಲ್ಲೇ ಅಶ್ಲೀಲವಾಗಿ ಮೆಸೇಜ್‌ ಮಾಡಿದಂತಹ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Nov 28, 2024 | 6:04 PM

Share

ಶಿಕ್ಷಕರನ್ನು ವಿದ್ಯಾರ್ಥಿಗಳ ಪಾಲಿನ ಹೊಂಬೆಳಕು ಅಂದ್ರೆ ತಪ್ಪಾಗಲಾರದು. ಆದ್ರೆ ಇಲ್ಲೊಬ್ಬ ವಿದ್ಯಾರ್ಥಿಗಳಿ ದಾರಿದೀಪವಾಗಬೇಕಿದ್ದ ಶಿಕ್ಷಕನೇ ದಾರಿ ತಪ್ಪಿದ್ದು, ವಿದ್ಯಾರ್ಥಿಯೋರ್ವಳಿಗೆ ಅಶ್ಲೀಲ ಮೆಸೇಜ್‌ಗಳನ್ನು ಕಳುಹಿಸಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ನುಗ್ಗಿದ ವಿದ್ಯಾರ್ಥಿನಿಯ ಕುಟುಂಬಸ್ಥರು ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ಹಿಮಾಚಲ ಪ್ರದೇಶದ ಹಮೀರ್‌ಪುರ ಎಂಬಲ್ಲಿ ನಡೆದಿದ್ದು, ಅಶ್ಲೀಮ ಮೆಸೇಜ್‌ ಕಳುಹಿಸಿದ ಆರೋಪದ ಮೇರೆಗೆ ವಿದ್ಯಾರ್ಥಿನಿಯ ಕುಟುಂಬಸ್ಥರು ಶಿಕ್ಷಕನೊಬ್ಬನಿಗೆ ಚಪ್ಪಲಿ ಏಟು ನೀಡಿದ್ದಾರೆ. ಆ ಶಿಕ್ಷಕ ವಿದ್ಯಾರ್ಥಿನಿಗೆ ಪದೇ ಪದೇ ಅಶ್ಲೀಲ ಮೆಸೇಜ್‌ ಕಳುಹಿಸುವ ಮೂಲಕ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ವಿದ್ಯಾರ್ಥಿನಿ ಈ ಬಗ್ಗೆ ಮನೆಯವರಿಗೆ ದೂರನ್ನು ನೀಡಿದ್ದಾಳೆ. ಈ ವಿಷಯ ತಿಳಿಯುತ್ತಿದ್ದಂತೆ ಏಕಾಏಕಿ ಶಾಲೆಗೆ ನುಗ್ಗಿದ ಆಕೆಯ ಮನೆಯವರು ಎಲ್ಲರ ಎದುರಲ್ಲೇ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.

ಇದನ್ನೂ ಓದಿ: ಜೈಲಿಂದ ಬಿಡುಗಡೆಯಾದ ಖುಷಿಯಲ್ಲಿ ಯುವಕನ ಸಖತ್ ಬ್ರೇಕ್‌ ಡಾನ್ಸ್; ವಿಡಿಯೋ ವೈರಲ್

ಈ ಕುರಿತ ವಿಡಿಯೋವನ್ನು News1IndiaTweet ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬಸ್ಥರು ಅಶ್ಲೀಲ ಮೆಸೇಜ್‌ ಕಳುಹಿಸಿದಂತಹ ಶಿಕ್ಷಕನಿಗೆ ಶಾಲೆಯ ಹೊರಗಡೆ ವಿದ್ಯಾರ್ಥಿಗಳ ಮುಂದೆಯೇ ಚಪ್ಪಲಿ ಸೇವೆ ಮಾಡುವಂತಹ ದೃಶ್ಯವನ್ನು ಕಾಣಬಹುದು. ಮಕ್ಕಳಿಗೆ ದಾರಿ ದೀಪವಾಗಬೇಕಿದ್ದ ಶಿಕ್ಷಕನೇ ಈ ರೀತಿ ನಡೆದುಕೊಂಡ ವಿಷಯ ತಿಳಿದು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ