210 ಕೋಟಿ ರೂ.ಗಳ ವಿದ್ಯುತ್ ಬಿಲ್ ನೋಡಿ ತಲೆತಿರುಗಿ ಬಿದ್ದ ಉದ್ಯಮಿ

ಹಿಮಾಚಲ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಕಾಂಕ್ರೀಟ್ ಇಟ್ಟಿಗೆಗಳನ್ನು ತಯಾರಿಸುವ ಸಣ್ಣ ಪ್ರಮಾಣದ ಉದ್ಯಮದ ಮಾಲೀಕರು 210 ಕೋಟಿ ರೂ.ಗಳ ವಿದ್ಯುತ್ ಬಿಲ್​ ಪಡೆದಿದ್ದಾರೆ. ಬಿಲ್ ನೋಡಿದ ಉದ್ಯಮ ಮಾಲೀಕರು ಗೊಂದಲಕ್ಕೊಳಗಾದರು. ಕೂಡಲೇ ವಿದ್ಯುತ್ ಮಂಡಳಿ ಕಚೇರಿಗೆ ತೆರಳಿ ದೂರು ನೀಡಿದರು. 2,10,42,08,405 ರೂಪಾಯಿ ವಿದ್ಯುತ್ ಬಿಲ್ ನೋಡಿ ಉದ್ಯಮಿ ಬೆಚ್ಚಿಬಿದ್ದಿದ್ದಾರೆ.

210 ಕೋಟಿ ರೂ.ಗಳ ವಿದ್ಯುತ್ ಬಿಲ್ ನೋಡಿ ತಲೆತಿರುಗಿ ಬಿದ್ದ ಉದ್ಯಮಿ
BillImage Credit source: Etv Bharat
Follow us
ನಯನಾ ರಾಜೀವ್
|

Updated on: Jan 10, 2025 | 10:32 AM

ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರ ತವರು ಜಿಲ್ಲೆ ಹಮೀರ್‌ಪುರದಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿದ್ಯುತ್ ಇಲಾಖೆ ಮಹಿಳಾ ಉದ್ಯಮಿಯೊಬ್ಬರಿಗೆ 210 ಕೋಟಿ ರೂ.ಗಳ ಬೃಹತ್ ಬಿಲ್ ಕಳುಹಿಸಿದೆ. ಬಿಲ್ ನೋಡಿದ ಉದ್ಯಮಿ ಕೆಲಕಾಲ ಪ್ರಜ್ಞೆ ತಪ್ಪಿದರು. ಆದರೆ, ದೂರಿನ ನಂತರ ವಿದ್ಯುತ್ ಇಲಾಖೆ ಬಿಲ್ ಸರಿಪಡಿಸಿದೆ.

ಇದು ಹಮೀರ್‌ಪುರದ ಭೋರಂಜ್ ಉಪವಿಭಾಗದ ಬೆಹದ್ವಿನ್ ಜತ್ತನ್ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಇಲ್ಲಿ ಉದ್ಯಮಿ ಲಲಿತಾ ಧಿಮಾನ್ ಕಾಂಕ್ರೀಟ್ ಇಟ್ಟಿಗೆಗಳನ್ನು ತಯಾರಿಸುವ ಸಣ್ಣ ಪ್ರಮಾಣದ ಉದ್ಯಮವನ್ನು ನಡೆಸುತ್ತಿದ್ದಾರೆ. ಲಲಿತಾ ಅವರಿಗೆ ವಿದ್ಯುತ್ ಇಲಾಖೆ 210 ಕೋಟಿ ರೂ.ಗೂ ಹೆಚ್ಚು ವಿದ್ಯುತ್ ಬಿಲ್ ಕಳುಹಿಸಿದೆ. ಈ ವೇಳೆ ಮಹಿಳಾ ಉದ್ಯಮಿ 2,10,42,08,405 ರೂಪಾಯಿ ಬಿಲ್ ನೋಡಿದಾಗ ದಿಗ್ಭ್ರಮೆಗೊಂಡಿದ್ದು, ಕೋಟ್ಯಂತರ ರೂಪಾಯಿ ಬಿಲ್ ನೋಡಿ ಲಲಿತ್ ಧಿಮಾನ್ ಗೆ ದೊಡ್ಡ ಶಾಕ್ ಆಗಿದೆ.

ವಿದ್ಯುಚ್ಛಕ್ತಿ ಮಂಡಳಿ ನೌಕರ ಅವರಿಗೆ ಕೋಟ್ಯಂತರ ರೂಪಾಯಿ ಬಿಲ್ ನೀಡಿದ್ದು, ಬಳಿಕ ವಿದ್ಯುತ್ ಮಂಡಳಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ದೂರಿನ ಬಳಿಕ ಇದೀಗ 4,047 ರೂಪಾಯಿ ಬಿಲ್ ಬಂದಿದೆ.

ಮತ್ತಷ್ಟು ಓದಿ:ಮನುಷ್ಯರನ್ನು ನೀರಿಗಿಳಿಯುವಂತೆ ಮಾಡಲು ಸಾವಿನ ನಾಟಕವಾಡುವ ಖತರ್ನಾಕ್‌ ಮೊಸಳೆಗಳು; ವಿಡಿಯೋ ವೈರಲ್‌

ಕುರಿತು ವಿದ್ಯುತ್ ಮಂಡಳಿ ಭೋರಂಜ್‌ನ ಎಸ್‌ಡಿಒ ಅನುರಾಗ್ ಚಾಂಡೇಲ್ ಮಾತನಾಡಿ, ತಾಂತ್ರಿಕ ಕಾರಣಗಳಿಂದ ಇಷ್ಟು ಬಿಲ್ ಬಂದಿದೆ. ದೂರು ಸ್ವೀಕರಿಸಿ ಬಿಲ್ ಸರಿಪಡಿಸಿ ಇದೀಗ ಗ್ರಾಹಕರಿಗೆ 4047 ರೂ. ಬಿಲ್ ನೀಡಲಾಗಿದೆ.

ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವರು ಇದನ್ನು ವಿದ್ಯುತ್ ಸಬ್ಸಿಡಿಗೂ ಲಿಂಕ್ ಮಾಡಿದ್ದಾರೆ. ಜನರ ನಡುವೆಯೂ ಸಾಕಷ್ಟು ಚರ್ಚೆ ನಡೆಯಿತು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ