AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

210 ಕೋಟಿ ರೂ.ಗಳ ವಿದ್ಯುತ್ ಬಿಲ್ ನೋಡಿ ತಲೆತಿರುಗಿ ಬಿದ್ದ ಉದ್ಯಮಿ

ಹಿಮಾಚಲ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಕಾಂಕ್ರೀಟ್ ಇಟ್ಟಿಗೆಗಳನ್ನು ತಯಾರಿಸುವ ಸಣ್ಣ ಪ್ರಮಾಣದ ಉದ್ಯಮದ ಮಾಲೀಕರು 210 ಕೋಟಿ ರೂ.ಗಳ ವಿದ್ಯುತ್ ಬಿಲ್​ ಪಡೆದಿದ್ದಾರೆ. ಬಿಲ್ ನೋಡಿದ ಉದ್ಯಮ ಮಾಲೀಕರು ಗೊಂದಲಕ್ಕೊಳಗಾದರು. ಕೂಡಲೇ ವಿದ್ಯುತ್ ಮಂಡಳಿ ಕಚೇರಿಗೆ ತೆರಳಿ ದೂರು ನೀಡಿದರು. 2,10,42,08,405 ರೂಪಾಯಿ ವಿದ್ಯುತ್ ಬಿಲ್ ನೋಡಿ ಉದ್ಯಮಿ ಬೆಚ್ಚಿಬಿದ್ದಿದ್ದಾರೆ.

210 ಕೋಟಿ ರೂ.ಗಳ ವಿದ್ಯುತ್ ಬಿಲ್ ನೋಡಿ ತಲೆತಿರುಗಿ ಬಿದ್ದ ಉದ್ಯಮಿ
BillImage Credit source: Etv Bharat
ನಯನಾ ರಾಜೀವ್
|

Updated on: Jan 10, 2025 | 10:32 AM

Share

ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರ ತವರು ಜಿಲ್ಲೆ ಹಮೀರ್‌ಪುರದಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿದ್ಯುತ್ ಇಲಾಖೆ ಮಹಿಳಾ ಉದ್ಯಮಿಯೊಬ್ಬರಿಗೆ 210 ಕೋಟಿ ರೂ.ಗಳ ಬೃಹತ್ ಬಿಲ್ ಕಳುಹಿಸಿದೆ. ಬಿಲ್ ನೋಡಿದ ಉದ್ಯಮಿ ಕೆಲಕಾಲ ಪ್ರಜ್ಞೆ ತಪ್ಪಿದರು. ಆದರೆ, ದೂರಿನ ನಂತರ ವಿದ್ಯುತ್ ಇಲಾಖೆ ಬಿಲ್ ಸರಿಪಡಿಸಿದೆ.

ಇದು ಹಮೀರ್‌ಪುರದ ಭೋರಂಜ್ ಉಪವಿಭಾಗದ ಬೆಹದ್ವಿನ್ ಜತ್ತನ್ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಇಲ್ಲಿ ಉದ್ಯಮಿ ಲಲಿತಾ ಧಿಮಾನ್ ಕಾಂಕ್ರೀಟ್ ಇಟ್ಟಿಗೆಗಳನ್ನು ತಯಾರಿಸುವ ಸಣ್ಣ ಪ್ರಮಾಣದ ಉದ್ಯಮವನ್ನು ನಡೆಸುತ್ತಿದ್ದಾರೆ. ಲಲಿತಾ ಅವರಿಗೆ ವಿದ್ಯುತ್ ಇಲಾಖೆ 210 ಕೋಟಿ ರೂ.ಗೂ ಹೆಚ್ಚು ವಿದ್ಯುತ್ ಬಿಲ್ ಕಳುಹಿಸಿದೆ. ಈ ವೇಳೆ ಮಹಿಳಾ ಉದ್ಯಮಿ 2,10,42,08,405 ರೂಪಾಯಿ ಬಿಲ್ ನೋಡಿದಾಗ ದಿಗ್ಭ್ರಮೆಗೊಂಡಿದ್ದು, ಕೋಟ್ಯಂತರ ರೂಪಾಯಿ ಬಿಲ್ ನೋಡಿ ಲಲಿತ್ ಧಿಮಾನ್ ಗೆ ದೊಡ್ಡ ಶಾಕ್ ಆಗಿದೆ.

ವಿದ್ಯುಚ್ಛಕ್ತಿ ಮಂಡಳಿ ನೌಕರ ಅವರಿಗೆ ಕೋಟ್ಯಂತರ ರೂಪಾಯಿ ಬಿಲ್ ನೀಡಿದ್ದು, ಬಳಿಕ ವಿದ್ಯುತ್ ಮಂಡಳಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ದೂರಿನ ಬಳಿಕ ಇದೀಗ 4,047 ರೂಪಾಯಿ ಬಿಲ್ ಬಂದಿದೆ.

ಮತ್ತಷ್ಟು ಓದಿ:ಮನುಷ್ಯರನ್ನು ನೀರಿಗಿಳಿಯುವಂತೆ ಮಾಡಲು ಸಾವಿನ ನಾಟಕವಾಡುವ ಖತರ್ನಾಕ್‌ ಮೊಸಳೆಗಳು; ವಿಡಿಯೋ ವೈರಲ್‌

ಕುರಿತು ವಿದ್ಯುತ್ ಮಂಡಳಿ ಭೋರಂಜ್‌ನ ಎಸ್‌ಡಿಒ ಅನುರಾಗ್ ಚಾಂಡೇಲ್ ಮಾತನಾಡಿ, ತಾಂತ್ರಿಕ ಕಾರಣಗಳಿಂದ ಇಷ್ಟು ಬಿಲ್ ಬಂದಿದೆ. ದೂರು ಸ್ವೀಕರಿಸಿ ಬಿಲ್ ಸರಿಪಡಿಸಿ ಇದೀಗ ಗ್ರಾಹಕರಿಗೆ 4047 ರೂ. ಬಿಲ್ ನೀಡಲಾಗಿದೆ.

ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವರು ಇದನ್ನು ವಿದ್ಯುತ್ ಸಬ್ಸಿಡಿಗೂ ಲಿಂಕ್ ಮಾಡಿದ್ದಾರೆ. ಜನರ ನಡುವೆಯೂ ಸಾಕಷ್ಟು ಚರ್ಚೆ ನಡೆಯಿತು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ