AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

210 ಕೋಟಿ ರೂ.ಗಳ ವಿದ್ಯುತ್ ಬಿಲ್ ನೋಡಿ ತಲೆತಿರುಗಿ ಬಿದ್ದ ಉದ್ಯಮಿ

ಹಿಮಾಚಲ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಕಾಂಕ್ರೀಟ್ ಇಟ್ಟಿಗೆಗಳನ್ನು ತಯಾರಿಸುವ ಸಣ್ಣ ಪ್ರಮಾಣದ ಉದ್ಯಮದ ಮಾಲೀಕರು 210 ಕೋಟಿ ರೂ.ಗಳ ವಿದ್ಯುತ್ ಬಿಲ್​ ಪಡೆದಿದ್ದಾರೆ. ಬಿಲ್ ನೋಡಿದ ಉದ್ಯಮ ಮಾಲೀಕರು ಗೊಂದಲಕ್ಕೊಳಗಾದರು. ಕೂಡಲೇ ವಿದ್ಯುತ್ ಮಂಡಳಿ ಕಚೇರಿಗೆ ತೆರಳಿ ದೂರು ನೀಡಿದರು. 2,10,42,08,405 ರೂಪಾಯಿ ವಿದ್ಯುತ್ ಬಿಲ್ ನೋಡಿ ಉದ್ಯಮಿ ಬೆಚ್ಚಿಬಿದ್ದಿದ್ದಾರೆ.

210 ಕೋಟಿ ರೂ.ಗಳ ವಿದ್ಯುತ್ ಬಿಲ್ ನೋಡಿ ತಲೆತಿರುಗಿ ಬಿದ್ದ ಉದ್ಯಮಿ
BillImage Credit source: Etv Bharat
ನಯನಾ ರಾಜೀವ್
|

Updated on: Jan 10, 2025 | 10:32 AM

Share

ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರ ತವರು ಜಿಲ್ಲೆ ಹಮೀರ್‌ಪುರದಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿದ್ಯುತ್ ಇಲಾಖೆ ಮಹಿಳಾ ಉದ್ಯಮಿಯೊಬ್ಬರಿಗೆ 210 ಕೋಟಿ ರೂ.ಗಳ ಬೃಹತ್ ಬಿಲ್ ಕಳುಹಿಸಿದೆ. ಬಿಲ್ ನೋಡಿದ ಉದ್ಯಮಿ ಕೆಲಕಾಲ ಪ್ರಜ್ಞೆ ತಪ್ಪಿದರು. ಆದರೆ, ದೂರಿನ ನಂತರ ವಿದ್ಯುತ್ ಇಲಾಖೆ ಬಿಲ್ ಸರಿಪಡಿಸಿದೆ.

ಇದು ಹಮೀರ್‌ಪುರದ ಭೋರಂಜ್ ಉಪವಿಭಾಗದ ಬೆಹದ್ವಿನ್ ಜತ್ತನ್ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಇಲ್ಲಿ ಉದ್ಯಮಿ ಲಲಿತಾ ಧಿಮಾನ್ ಕಾಂಕ್ರೀಟ್ ಇಟ್ಟಿಗೆಗಳನ್ನು ತಯಾರಿಸುವ ಸಣ್ಣ ಪ್ರಮಾಣದ ಉದ್ಯಮವನ್ನು ನಡೆಸುತ್ತಿದ್ದಾರೆ. ಲಲಿತಾ ಅವರಿಗೆ ವಿದ್ಯುತ್ ಇಲಾಖೆ 210 ಕೋಟಿ ರೂ.ಗೂ ಹೆಚ್ಚು ವಿದ್ಯುತ್ ಬಿಲ್ ಕಳುಹಿಸಿದೆ. ಈ ವೇಳೆ ಮಹಿಳಾ ಉದ್ಯಮಿ 2,10,42,08,405 ರೂಪಾಯಿ ಬಿಲ್ ನೋಡಿದಾಗ ದಿಗ್ಭ್ರಮೆಗೊಂಡಿದ್ದು, ಕೋಟ್ಯಂತರ ರೂಪಾಯಿ ಬಿಲ್ ನೋಡಿ ಲಲಿತ್ ಧಿಮಾನ್ ಗೆ ದೊಡ್ಡ ಶಾಕ್ ಆಗಿದೆ.

ವಿದ್ಯುಚ್ಛಕ್ತಿ ಮಂಡಳಿ ನೌಕರ ಅವರಿಗೆ ಕೋಟ್ಯಂತರ ರೂಪಾಯಿ ಬಿಲ್ ನೀಡಿದ್ದು, ಬಳಿಕ ವಿದ್ಯುತ್ ಮಂಡಳಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ದೂರಿನ ಬಳಿಕ ಇದೀಗ 4,047 ರೂಪಾಯಿ ಬಿಲ್ ಬಂದಿದೆ.

ಮತ್ತಷ್ಟು ಓದಿ:ಮನುಷ್ಯರನ್ನು ನೀರಿಗಿಳಿಯುವಂತೆ ಮಾಡಲು ಸಾವಿನ ನಾಟಕವಾಡುವ ಖತರ್ನಾಕ್‌ ಮೊಸಳೆಗಳು; ವಿಡಿಯೋ ವೈರಲ್‌

ಕುರಿತು ವಿದ್ಯುತ್ ಮಂಡಳಿ ಭೋರಂಜ್‌ನ ಎಸ್‌ಡಿಒ ಅನುರಾಗ್ ಚಾಂಡೇಲ್ ಮಾತನಾಡಿ, ತಾಂತ್ರಿಕ ಕಾರಣಗಳಿಂದ ಇಷ್ಟು ಬಿಲ್ ಬಂದಿದೆ. ದೂರು ಸ್ವೀಕರಿಸಿ ಬಿಲ್ ಸರಿಪಡಿಸಿ ಇದೀಗ ಗ್ರಾಹಕರಿಗೆ 4047 ರೂ. ಬಿಲ್ ನೀಡಲಾಗಿದೆ.

ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವರು ಇದನ್ನು ವಿದ್ಯುತ್ ಸಬ್ಸಿಡಿಗೂ ಲಿಂಕ್ ಮಾಡಿದ್ದಾರೆ. ಜನರ ನಡುವೆಯೂ ಸಾಕಷ್ಟು ಚರ್ಚೆ ನಡೆಯಿತು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!