AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧವೂ ಕಲೆ; ಆಕಾಶದಲ್ಲಿ ಹಾರ್ನ್​ಬಿಲ್​ಗಳ ಬಿರುಸಿನ ಕಾಳಗ, ವೈರಲ್ ಆದ ವಿಡಿಯೋ

Hornbill : ತಮಿಳುನಾಡಿನ ನೆಲ್ಲಿಯಂಪತಿ, ವಾಲ್ಪಾರೈಗೆ ಹಾರ್ನ್​ಬಿಲ್​ಗಳು ವಲಸೆಗೆ ಬಂದಿವೆ. ಈಗಿವು ಕಾದಾಡುತ್ತಿವೆಯೋ, ಕಲಾತ್ಮಕವಾಗಿ ಹಾರಾಡುತ್ತಿವೆಯೋ ಎಂಬ ಸುಂದರವಾದ ಗೊಂದಲ ನೆಟ್ಟಿಗರಲ್ಲಿ ಮೂಡಿದೆ.

ಯುದ್ಧವೂ ಕಲೆ; ಆಕಾಶದಲ್ಲಿ ಹಾರ್ನ್​ಬಿಲ್​ಗಳ ಬಿರುಸಿನ ಕಾಳಗ, ವೈರಲ್ ಆದ ವಿಡಿಯೋ
ಹಾರ್ನ್​ಬಿಲ್​ಗಳ ಕಾದಾಟ
TV9 Web
| Updated By: ಶ್ರೀದೇವಿ ಕಳಸದ|

Updated on:Jan 03, 2023 | 10:57 AM

Share

Viral Video : ಐಎಎಸ್​ ಅಧಿಕಾರಿ ಸುಪ್ರಿಯಾ ಸಾಹು ತಮಿಳುನಾಡಿನಲ್ಲಿ ಪರಿಸರ ಹವಾಮಾನ ಬದಲಾವಣೆ ಮತ್ತು ಅರಣ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಗಾಗ ವನ್ಯಜೀವಿಗಳ ಕುರಿತು ಟ್ವೀಟ್ ಮಾಡುತ್ತಿರುತ್ತಾರೆ. ಈ ಸಲ ಅವರು ಟ್ವೀಟ್ ಮಾಡಿದ ಈ ವಿಡಿಯೋದಲ್ಲಿ ಹಾರ್ನ್​ಬಿಲ್​ಗಳು ಆಕಾಶದಲ್ಲಿ ಆಕ್ರಮಣಕಾರಿಯಾಗಿ ದಾಳಿಯಲ್ಲಿ ತೊಡಗಿಕೊಂಡಿವೆ.

ಪ್ರತೀ ವರ್ಷವೂ ತಮಿಳುನಾಡಿನ ನೆಲ್ಲಿಯಂಪತಿ ಮತ್ತು ವಾಲ್ಪಾರೈನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಹಾರ್ನ್​ಬಿಲ್​ಗಳು ವಲಸೆಗೆ ಬರುತ್ತವೆ. ನೀಲಾಕಾಶದ ಹಿನ್ನೆಲೆಯಲ್ಲಿ ಹೀಗೆ ಅವು ರೆಕ್ಕೆ ಬಿಚ್ಚಿ ಹಾರುವುದನ್ನು ನೋಡುವುದೇ ಅದ್ಭುತ ಅನುಭವ. ಬಹುವರ್ಣಗಳಲ್ಲಿ ವಿನ್ಯಾಸಗೊಂಡಿರುವ ಅವುಗಳ ಗರಿಗಳಂತೂ ನಯನ ಮನೋಹರ. ಆದರೆ ಈ ವಿಡಿಯೋದಲ್ಲಿ ಮಾತ್ರ ಈ ಚೆಂದುಳ್ಳಿಗಳು ಯಾಕೋ ಎಂತೋ ಅಂತೂ ಕಾದಾಟಕ್ಕಿಳಿದಿವೆ. ಕೊಕ್ಕಿಗೆ ಕೊಕ್ಕು ಕೊಟ್ಟಿ ದಾಳಿ ಮಾಡಿವೆ. ಈತನಕ ಈ ವಿಡಿಯೋ ಅನ್ನು 47,200 ಜನರು ನೋಡಿದ್ದಾರೆ. ಸಾವಿರಕ್ಕು ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಹಿಮನೀರಿನಲ್ಲಿ ಮಿಂದೆದ್ದು ಕಾಫಿ ಕುಡಿಯುತ್ತಿರುವ ಯುವತಿಯ ವಿಡಿಯೋ ವೈರಲ್

ನೆಲ್ಲಿಯಂಪತಿ ಕೇರಳದಲ್ಲಿದೆ ಎಂದಿದ್ದಾರೆ ಕೆಲವರು. ಕೇರಳ ಮತ್ತು ತಮಿಳುನಾಡಿನ ಗಡಿಯಲ್ಲಿದೆ ಎಂದು ಇನ್ನೂ ಕೆಲವರು ಹೇಳಿದ್ದಾರೆ. ಆಕ್ರಮಣಶೀಲತೆಗಿಂತ ಇದು ಕಲಾತ್ಮಕವಾಗಿ ಕಾಣುತ್ತಿದೆ. ಆಕಾಶದಲ್ಲಿ ಇವೆರಡೂ ನರ್ತಿಸುವಂತೆ ತೋರುತ್ತಿದೆ ಎಂದಿದ್ದಾರೆ ಹಲವರು. ಬಹಳ ಅದ್ಭುತವಾಗಿದೆ ಈ ದೃಶ್ಯ ಎಂದು ಮತ್ತೊಬ್ಬರು ಹೇಳಿದ್ದಾರೆ. ಕಾದಾಟವೋ ಕಲೆಯೋ ಎರಡಕ್ಕೂ ಲಯವಂತೂ ಬೇಕೇಬೇಕು. ಅದಿಲ್ಲಿ ಸಾಧಿಸಿದೆ.

ಈ ವಿಡಿಯೋ ನೋಡಿದ ನೀವೇನನ್ನುತ್ತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:55 am, Tue, 3 January 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!