AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಾಜಿ ಪ್ರೇಯಸಿಯ ಕಿರುಕುಳ ತಡೆಯಲಾರದೆ ಆತ್ಮಹತ್ಯೆಗೆ ಮುಂದಾದ ಯುವಕನ ಕರಾಳ ಕಥೆ

ಸಾಮಾನ್ಯವಾಗಿ ಬ್ರೇಕಪ್ ಆದ ನಂತರ ಎಲ್ಲ ಮರೆತು ಹೊಸ ಬದುಕು ರೂಪಿಸುತ್ತಾರೆ. ಆದರೆ ಇಲ್ಲೊಬ್ಬಳು ಯುವತಿ ಬ್ರೇಕಪ್​​ ಬಳಿಕ ಮಾಜಿ ಪ್ರಿಯಕರ ಬಗ್ಗೆ ತಿಳಿದುಕೊಳ್ಳಲು ಗೂಢಚಾರಿಗಳ ನೇಮಕ ಮಾಡಿದ್ದಳು. ಇದಲ್ಲದೇ ಆತನ ಕೊಲೆಗೂ ಸಂಚು ರೂಪಿಸಿದ್ದಳು. ಇದೀಗಾ ಆಕೆಯ ಕಿರುಕುಳ ಸಹಿಸಲಾಗದೆ ಆತ ಪೊಲೀಸರಿಗೆ ದೂರು ನೀಡಿದ್ದು,ದೂರಿನ ಆಧಾರದ ಮೇಲೆ ಆಕೆಗೆ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Viral News: ಮಾಜಿ ಪ್ರೇಯಸಿಯ ಕಿರುಕುಳ ತಡೆಯಲಾರದೆ ಆತ್ಮಹತ್ಯೆಗೆ ಮುಂದಾದ ಯುವಕನ ಕರಾಳ ಕಥೆ
Horrible ex girlfriendImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 16, 2024 | 12:33 PM

Share

ಎಲ್ಲಿ ಪ್ರೀತಿ ಇರುತ್ತದೋ ಅಲ್ಲಿ ಒಂದಿಷ್ಟು ಜಗಳ, ಮನಸ್ತಾಪ, ಹುಸಿ ಕೋಪ ಸರ್ವೇ ಸಾಮಾನ್ಯ. ಆದರೆ ಇದೆಲ್ಲಾವನ್ನು ದಾಟಿ ಪರಸ್ಪರ ಒಂದಾಗುವುದೇ ನಿಜವಾದ ಪ್ರೇಮ. ಕೆಲವೊಮ್ಮೆ ಜಗಳಗಳು ತುಂಬಾ ತೀವ್ರವಾಗಿರುತ್ತವೆ. ಇದು ದಾಂಪತ್ಯದಲ್ಲಿ ಪ್ರತ್ಯೇಕತೆಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಬ್ರೇಕಪ್ ಆದ ನಂತರ ಗೆಳೆಯ ಮತ್ತು ಗೆಳತಿ ಪರಸ್ಪರರ ಬದುಕನ್ನು ನೋಡದೆ ಬೇರೆ ಬೇರೆ ದಾರಿಯಲ್ಲಿ ಹೋಗುತ್ತಾರೆ. ಆದರೆ ಬ್ರೇಕಪ್ ಆದ ಬಳಿಕವು ಮಾಜಿ ಪ್ರಿಯಕರನಿಗೆ ಕಿರುಕುಳ ನೀಡುತ್ತಿದ್ದ ಯುವತಿಯ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಈ ಸ್ಟೋರಿ ಪೂರ್ತಿಯಾದ ಓದಿದರೆ ಶತ್ರುಗೂ ಈ ತರ ಗೆಳತಿ ಸಿಗೋದು ಬೇಡ ಅಂತ ನೀವು ಅಂದುಕೊಳ್ಳುವುದು ಖಂಡಿತಾ.

ಈ ವ್ಯಕ್ತಿಯ ಹೆಸರು ಜರ್ಲಾಟ್ ರೈಸ್. ಅವರು ಐರ್ಲೆಂಡ್‌ನ ಚಲನಚಿತ್ರ ನಿರ್ಮಾಪಕ. ಡೈಲಿ ಮೇಲ್ ವರದಿಯ ಪ್ರಕಾರ, ಅವರು ಇತ್ತೀಚೆಗೆ ಸಾಕ್ಷ್ಯಚಿತ್ರಕ್ಕಾಗಿ ತಮ್ಮ ಜೀವನದಲ್ಲಿ ಕರಾಳ ಪ್ರೇಮ ಕಥೆಯನ್ನು ಹಂಚಿಕೊಂಡಿದ್ದಾರೆ. 2002ರಲ್ಲಿ ರೈಸ್ ತನ್ನ ಪ್ರೇಯಸಿ ಲೀನಾ ತಂತಾಶ್​​ಯನ್ನು ಮೊದಲ ಬಾರಿಗೆ ಕೆಫೆಯೊಂದರಲ್ಲಿ ಭೇಟಿಯಾಗಿದ್ದರು. ಆರಂಭದಲ್ಲಿ ಎಲ್ಲವೂ ಸರಿಯಾಗಿತ್ತು. ಆದರೆ ದಿನಗಳೆದಂತೆ ಪ್ರೇಯಸಿಯ ವಿಚಿತ್ರ ನಡತೆಯಿಂದಾಗಿ ನಿಧಾನವಾಗಿ ಅವಳಿಂದ ದೂರವಿರಲು ನಿರ್ಧರಿಸುತ್ತಾನೆ. ದಿನದಿಂದ ಆತನ ಮೇಲೆ ವಿಚಿತ್ರ ಶರತ್ತುಗಳನ್ನು ನೀಡಲು ಪ್ರಾರಂಭಿಸುತ್ತಾಳೆ. ಆಕೆಯ ಪ್ರಕಾರ ಆತ ವಾರದಲ್ಲಿ ಕನಿಷ್ಠ ಮೂರು ದಿನಗಳನ್ನು ಕಳೆಯಬೇಕು, ಪ್ರತಿದಿನ ಸಂಜೆ 15 ನಿಮಿಷಗಳ ಕಾಲ ಫೋನ್‌ನಲ್ಲಿ ಮಾತನಾಡಬೇಕು ಎಂದು ಶರತ್ತು ಹಾಕಿದ್ದಳು. ಮೇಲಾಗಿ ತನ್ನ ಮಾತು ಕೇಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು. ಫೋನ್‌ನಲ್ಲಿ ಮಾತ್ರವಲ್ಲದೆ ಇಮೇಲ್‌ಗಳ ಮೂಲಕ ಅವನಿಗೆ ನಿರಂತರವಾಗಿ ಕಿರುಕುಳ ನೀಡಲಾರಂಭಿಸಿದ್ದಳು.

ಇದನ್ನೂ ಓದಿ: ಪೊಲೀಸರಿಗೆ ಇಲ್ಲವಾಯ್ತಾ ರಕ್ಷಣೆ; ಠಾಣೆಗೆ ನುಗ್ಗಿ ಆರಕ್ಷಕರ ಮೇಲೆ ಅಮಾನುಷವಾಗಿ ಹಲ್ಲೆ 

ಗೂಢಚಾರಿಗಳ ನೇಮಕ:

ಲೀನಾಳ ಚಿತ್ರಹಿಂಸೆಯನ್ನು ಸಹಿಸಲಾಗದ ಕಾರಣ ರೈಸ್ ತನ್ನ ಫೋನ್​​​​ ನಂಬರ್​ ಬದಲಾಯಿಸಿದನು. ಆದ್ರೆ ಲೀನಾಗೆ ಆ ನಂಬರ್ ಹೇಗೋ ಗೊತ್ತಾಗಿತ್ತ. ಹೊಸ ನಂಬರ್ ಗೆ ಕರೆ ಮಾಡಿ,ಇಲ್ಲವೇ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದಳು. ರೈಸ್ ಎಲ್ಲಿಗೆ ಹೋಗುತ್ತಿದ್ದಾನೆ ಎಂದು ಕಂಡುಹಿಡಿಯಲು ಅವಳು ಒಬ್ಬ ಗೂಢಚಾರಿಯನ್ನು ನೇಮಕ ಮಾಡಿದ್ದಳು. ಜೊತೆಗೆ ಅವನನ್ನು ಕೊಲ್ಲಲು ಪ್ರಯತ್ನಿಸಿದ್ದಳು. ಆಕೆಯ ಕಿರುಕುಳ ತಡೆಯಲಾರದೆ ದೇಶ ತೊರೆದು ಹೋಗಿದ್ದರೂ ಕೂಡ ಅವಳು ತನ್ನ ಸ್ನೇಹಿತರೊಬ್ಬರ ಮೂಲಕ ಕರೆ ಮಾಡಿ ರೈಸ್‌ಗೆ ಬೆದರಿಕೆ ಮತ್ತು ಕಿರುಕುಳ ನೀಡುತ್ತಿದ್ದಳು. ಕೊನೆಗೆ ಲೀನಾಳ ಕಿರುಕುಳ ಸಹಿಸಲಾಗದ ರೈಸ್ ಪೊಲೀಸರಿಗೆ ದೂರು ನೀಡಿದ್ದಾನೆ. ಈತನ ದೂರಿನ ಆಧಾರದ ಮೇಲೆ ಆಕೆಗೆ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Fri, 16 February 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ