AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಹಿಳಾ ರೋಗಿಗಳ ಮುಂದೆ ಹೆರಿಗೆ ವಾರ್ಡ್‌ನಲ್ಲಿ ಹಸ್ತಮೈಥುನ ಮಾಡುತ್ತಾ ವಿಕೃತಿ ಮೆರೆದ ವ್ಯಕ್ತಿ

ಉತ್ತರಾಖಂಡದ ಕೋಟ್‌ದ್ವಾರದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನವೆಂಬರ್ 13 ರಂದು ನಡೆದಿದ್ದು, ರೋಗಿಗಳು ದೂರಿನ ಮೇರೆಗೆ ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: Nov 20, 2024 | 10:37 AM

Share

ಉತ್ತರಾಖಂಡ: ಹೆರಿಗೆ ವಾರ್ಡ್‌ನಲ್ಲಿ ನಿಂತು ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ಉತ್ತರಾಖಂಡದ ಕೋಟ್‌ದ್ವಾರದಲ್ಲಿ ನಡೆದಿದೆ. ಪೌರಿ ಗರ್ವಾಲ್‌ನ ಕೋಟ್‌ದ್ವಾರದ ಸರ್ಕಾರಿ ಆಸ್ಪತ್ರೆಯೊಳಗೆ ಈ ಘಟನೆ ಸಂಭವಿಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹೆರಿಗೆ ವಾರ್ಡ್‌ನ ಒಳಗಡೆ ಇರುವ ಹಾಸಿಗೆಯ ಬಳಿ ನಿಂತು ವ್ಯಕ್ತಿ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ಘಟನೆ ಬುಧವಾರ (ನವೆಂಬರ್ 13) ಸಂಭವಿಸಿದೆ ಎಂದು ವರದಿಯಾಗಿದೆ. ವಾರ್ಡ್‌ನೊಳಗೆ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವ್ಯಕ್ತಿಯನ್ನು ಕಂಡು ವಾರ್ಡ್‌ನೊಳಗಿದ್ದ ಮಹಿಳಾ ರೋಗಿಗಳು ಅಲಾರಾಂ ಮಾಡಿದ್ದರು. ಗಲಾಟೆಯಿಂದಾಗಿ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ, ಆದರೆ ವಾರ್ಡ್‌ನೊಳಗಿನ ಮಹಿಳಾ ರೋಗಿಯೊಬ್ಬರು ಘಟನೆಯನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ವಧು ಮದುವೆಗೂ ಮುನ್ನ 30 ದಿನಗಳವರೆಗೆ ಒಂದು ಗಂಟೆ ಅಳಬೇಕು, ಇದು ಇಲ್ಲಿನ ವಿಚಿತ್ರ ಪದ್ಧತಿ

ಈ ಕುರಿತು ಪೊಲೀಸರು ಕ್ರಮ ಕೈಗೊಂಡಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಕಾನೂನು ಕ್ರಮದ ವರದಿಗಳಿಲ್ಲ ಮತ್ತು ವ್ಯಕ್ತಿಯನ್ನು ಇನ್ನೂ ಗುರುತಿಸಲಾಗಿಲ್ಲ. ಪೊಲೀಸರು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​