Viral: ಗೋ ಹತ್ಯೆ ಮಾಡುವವರಿಗೆ ಚಿಕಿತ್ಸೆ ನೀಡಬೇಡಿ, ಆಸ್ಪತ್ರೆಯ ಮೇಲೆ ಗುಂಪಿನ ದಾಳಿ, ಕಣ್ಣೀರು ಹಾಕಿದ ವೈದ್ಯರು 

ಬಕ್ರೀದ್‌ ಹಬ್ಬದ ಹಿನ್ನೆಲೆ ಶನಿವಾರ  ಶನಿವಾರ (ಜೂನ್‌ 15) ದಂದು ತೆಲಂಗಾಣದ ಮೇದಕ್‌ ಪಟ್ಟಣದಲ್ಲಿ  ಗೋ ಸಾಗಣೆ ವೇಳೆ ಅಲ್ಲಿನ ಮದರಸಾದ ಮೇಲೆ ಹಿಂದೂ ಸಂಘಟನೆ ದಾಳಿ ನಡೆಸಿತ್ತು. ಈ ಗಲಭೆಯಲ್ಲಿ ಗಾಯಗೊಂಡ ಮುಸ್ಲಿಮರನ್ನು  ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಬಾರದೆಂದು ಹಿಂದೂ ಸಂಘಟನೆ ಆಸ್ಪತ್ರೆಯ ಮೇಲೂ ದಾಳಿ ಮಾಡಿತ್ತು. ಇವರ ಈ ನಡವಳಿಕೆಯಿಂದ ಕುಪಿತಗೊಂಡ ವೈದ್ಯರೊಬ್ಬರು ರೋಗಿಗಳನ್ನು ಉಪಚರಿಸುವುದು ಪಾಪವೇ? ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. 

Viral: ಗೋ ಹತ್ಯೆ ಮಾಡುವವರಿಗೆ ಚಿಕಿತ್ಸೆ ನೀಡಬೇಡಿ, ಆಸ್ಪತ್ರೆಯ ಮೇಲೆ ಗುಂಪಿನ ದಾಳಿ, ಕಣ್ಣೀರು ಹಾಕಿದ ವೈದ್ಯರು 
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 18, 2024 | 12:15 PM

ತೆಲಂಗಾಣದ ಮೇದಕ್‌ ಪಟ್ಟಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಬಕ್ರೀದ್‌ ಹಬ್ಬದ ನಿಮಿತ್ತ ಶನಿವಾರ (ಜೂನ್‌ 15) ದಂದು ಮುಸ್ಲಿಮರು ಕಸಾಯಿಖಾನೆಗೆ ಗೋ ಸಾಗಣೆ ಮಾಡುತ್ತಿದ್ದ ವೇಳೆ ಇದನ್ನು ವಿರೋಧಿಸಿ ಮೇದಕ್‌ನ ಮಿನ್ಹಾಜ್‌ ಉಲ್‌ ಉಲೂಮ್‌ ಮದರಸಾದ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಗೋ ಸಾಗಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದೆ. ಈ ಕೋಮು ಘರ್ಷಣೆಯಲ್ಲಿ ಹಲವು ಮುಸ್ಲಿಮರು ಗಾಯಗೊಂಡಿದ್ದು, ಆ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಸಂಘರ್ಷದಲ್ಲಿ ಗಾಯಗೊಂಡ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ, ಗೋ ಹತ್ಯೆ ಮಾಡುವವರಿಗೆ ಯಾವುದೇ ಕಾರಣಕ್ಕೂ ಚಿಕಿತ್ಸೆ ನೀಡಬಾರದೆಂದು  ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಯ ಮೇಲೆ 150 ರಿಂದ 200 ಜನ ಬಿಜೆಪಿ ಮತ್ತು ಬಿಜೆವೈಎಂ ಕಾರ್ಯಕರ್ತರು ಅದೇ ರಾತ್ರಿ ಮುತ್ತಿಗೆ ಹಾಕಿದ್ದಾರೆ. ನಂತರ ಆಸ್ಪತ್ರೆಯ ಒಳಗೆ ನುಗ್ಗಿ ಕಲ್ಲು ತೂರಾಟ ನಡೆಸಿ ಕಿಟಕಿ, ಗಾಜು, ಪೀಠೋಪಕರಣಗಳನ್ನು ಹಾನಿಗೊಳಿಸಿದ್ದಾರೆ. ಈ ಗಲಾಟೆಯಲ್ಲಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರ ಕಾಲಿನ ಮೂಳೆ ಕೂಡಾ ಮುರಿತವಾಗಿದ್ದು, ವೈದ್ಯರ ಕಾರುಗಳನ್ನು ಜಖಂ ಗೊಳಿಸಿದ್ದಾರೆ. ಈ ಒಂದು ಗಲಭೆಯಿಂದ ಆಘಾತಕ್ಕೊಳಗಾದ ವೈದ್ಯರೊಬ್ಬರು ಆಸ್ಪತ್ರೆಗೆ ದಾಖಲಾದ ಗಾಯಾಳುಗಳಿಗೆ ಚಿಕಿತ್ಸೆ ನೀಡುವುದು ಪಾಪವೇ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತ ವಿಡಿಯೋವೊಂದನ್ನು  ನಾಸೀರ್‌ (@NaseerGiyas) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ವೈದ್ಯರಾದ ಡಾ. ನವೀನ್‌ ಮಾಧ್ಯಮಗಳ ಮುಂದೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿರುವ ದೃಶ್ಯವನ್ನು ಕಾಣಬಹುದು. ಅಲ್ಲಾ ನಾವೇನು ತಪ್ಪು ಮಾಡಿದ್ದೇವೆ ಹೇಳಿ, ಆಸ್ಪತ್ರೆಗೆ ಬಂದ ಗಾಯಾಳುಗಳಿಗೆ ಚಿಕಿತ್ಸೆ ನೀಡುವುದು ಪಾಪದ ಕೆಲಸವೇ? ಇನ್ನು ಮುಂದೆ ರೋಗಿಗಳಿಗೆ ಚಿಕಿತ್ಸೆ ನೀಡುವ ಮುಂಚೆ ಇತರ ವೈದ್ಯರ ಬಳಿ ಸಲಹೆ ಕೇಳಿ ಅವರಿಗೆ ಚಿಕಿತ್ಸೆ ನೀಡಬೇಕೇ ಅಥವಾ ಬೇಡವೋ ಎಂಬುದನ್ನು ನಿರ್ಧರಿಸುತ್ತೇನೆ ಎಂದು ನೋವಿನ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ, ದರ್ಶನ್ ಅಭಿಮಾನಿಯ ಹುಚ್ಚಾಟ

ಜೂನ್‌ 16 ರಂದು ಹಂಚಿಕೊಳ್ಳಲಾದ ಈ ವಿಡಿಯೋ 7 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಒಂದು ಅಮಾನವೀಯ ಕೃತ್ಯವನ್ನು ನೆಟ್ಟಿಗರು ಖಂಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:05 pm, Tue, 18 June 24

ತಾಜಾ ಸುದ್ದಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್