AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಈ ಬೈಕ್​ನಲ್ಲಿ ಎಷ್ಟು ಜನರು ಸವಾರಿ ಮಾಡುತ್ತಿದ್ದಾರೆ? ಇದು ಭ್ರಮಾತ್ಮಕ ಚಿತ್ರವಲ್ಲ!

Biking : ತಲೆಬರಹ ನೋಡಿ ಇದು ಆಪ್ಟಿಕಲ್ ಇಲ್ಲ್ಯೂಷನ್​ ಎಂದುಕೊಂಡಿರಾ? ಖಂಡಿತ ಅಲ್ಲ, ಇದು ಉತ್ತರ ಪ್ರದೇಶದ ಅಪ್ರಾಪ್ತಬಾಲಕರ ಬೈಕ್ ಸವಾರಿ ದೃಶ್ಯ. ಕಾನೂನು ಉಲ್ಲಂಘಿಸಿರುವ ಈ ಹುಡುಗರ ಬಗ್ಗೆ ನೆಟ್ಟಿಗರು ಕೋಪಗೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ಧಾರೆ. ನೋಡಿ ಈ ವಿಡಿಯೋ.

Viral: ಈ ಬೈಕ್​ನಲ್ಲಿ ಎಷ್ಟು ಜನರು ಸವಾರಿ ಮಾಡುತ್ತಿದ್ದಾರೆ? ಇದು ಭ್ರಮಾತ್ಮಕ ಚಿತ್ರವಲ್ಲ!
ಎಷ್ಟು ಹುಡುಗರು ಈ ಬೈಕ್​ ಮೇಲೆ ಸವಾರಿ ಮಾಡುತ್ತಿದ್ದಾರೆ.
ಶ್ರೀದೇವಿ ಕಳಸದ
|

Updated on: Aug 10, 2023 | 2:27 PM

Share

Uttar Pradesh: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಉತ್ತರ ಪ್ರದೇಶದ ಹಾಪುರ್ (Hapur)ನದ್ದು. ನಮ್ಮ ದೇಶದಲ್ಲಿ ದ್ವಿಚಕ್ರವಾಹನದ ಮೂಲಕ ಇಬ್ಬರು ಮಾತ್ರ ಚಲಿಸಬಹುದು. ಬಹಳವೆಂದರೆ ಮೂರು ಜನ. ಆದರೆ ಈ ವಿಡಿಯೋ ನೋಡಿ. ಒಂದಲ್ಲ ಎರಡಲ್ಲ ಬರೋಬ್ಬರಿ… ಎಷ್ಟು? ನೀವೇ ಲೆಕ್ಕ ಹಾಕಿ. ಇವರ ಈ ಬೈಕ್​ಹುಚ್ಚಾಟವನ್ನು ನೋಡಿದ ಕಾರಿನಲ್ಲಿರುವ ವ್ಯಕ್ತಿ ಆಘಾತಕ್ಕೆ ಬಿದ್ದು ಇದನ್ನು ವಿಡಿಯೋ ಮಾಡಿದ್ದಾರೆ. ಈ ಹುಡುಗರ ಹುಚ್ಚುಸಾಹಸಕ್ಕೆ ನೆಟ್ಟಿಗರು ಕಣ್​ಕಣ್​ಬಿಟ್ಟು ನೋಡುತ್ತಿದ್ದಾರೆ.

ಈ ವಿಡಿಯೋ ಅನ್ನು ಆ.9 ರಂದು ಟ್ವೀಟ್ ಮಾಡಲಾಗಿದೆ. ಇದರಲ್ಲಿ ಇನ್ನೂ ಆಘಾತಕಾರಿ ಸಂಗತಿಯೆಂದರೆ ಈ ಬೈಕ್​ನಲ್ಲಿ ಪ್ರಯಾಣಿಸುವವರೆಲ್ಲರೂ ಅಪ್ರಾಪ್ತ ವಯಸ್ಸಿನವರು. ಹುಚ್ಚುಕುದುರೆಯ ಬೆನ್ನೇರಿ ಇವರು ತಮ್ಮ ಜೀವನವನ್ನು ಅಪಾಯಕ್ಕೆ ತಳ್ಳಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಎಲ್ಲಕ್ಕಿಂತ ಮೇಲಾಗಿ ಇವರುಗಳು ಕಾನೂನನ್ನು ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ : Viral Video: ಮಹಾರಾಷ್ಟ್ರ: ‘ ಬುದ್ಧಿ ಇದೆಯೇ ನಿನಗೆ?’  ಭಯೋತ್ಪಾದಕನಿಗೆ ಕಪಾಳಮೋಕ್ಷ, ಮುಂದೆ?

ಈ ಏಳು ಜನರು ಗಿನ್ನೀಸ್​ ವರ್ಲ್ಡ್​ ರೆಕಾರ್ಡ್​ಗೆ ಅರ್ಹರಾಗಿದ್ದಾರೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೆಲವರು ಹೇಳಿದ್ದಾರೆ. ಇಂತವರನ್ನು ಜೈಲಿಗೆ ಹಾಕಿದರೆ ಮಾತ್ರ ಪಾಠ ಕಲಿಯುತ್ತಾರೆ ಎಂದು ಒಬ್ಬರು ಹೇಳಿದ್ದಾರೆ.

ಇದನ್ನೂ ಓದಿ : Viral: ಆಸ್ಟ್ರೇಲಿಯಾ; 247 ಮಿಲಿಯನ್​ ವರ್ಷಗಳ ಹಿಂದೆ ಹಲ್ಲಿಜಾತಿಗೆ ಸೇರಿದ್ದ ಜೀವಿಯ ಪಳಿಯುಳಿಕೆ ಪತ್ತೆ

ಭಾರತ ಕೆಂದ್ರ ಮೋಟಾರು ವಾಹನ ಕಾಯಿದೆ 1988ರ ಪ್ರಕಾರ ದ್ವಿಚಕ್ರವಾಹನದ ಮೇಲೆ ಇಬ್ಬರಿಗಿಂತ ಹೆಚ್ಚು ಜನರು ಪ್ರಯಾಣಿಸಲು ಅನುಮತಿ ನೀಡಲಾಗುವುದಿಲ್ಲ. ಅಕಸ್ಮಾತ್ ಈ ಕಾನೂನನ್ನು ಉಲ್ಲಂಘಿಸಿದಲ್ಲಿ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಇದನ್ನೂ ಓದಿ : Viral: ಮದುವೆಗೆ ಕರೆಯದೇ ಬಂದ ಅತಿಥಿ; ದಿಗ್ಭ್ರಾಂತಗೊಂಡ ನವದಂಪತಿ

ಉತ್ತರ ಪ್ರದೇಶದ ಪೊಲೀಸರನ್ನು ಟ್ಯಾಗ್ ಮಾಡಿ ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಲವರು ಮನವಿ ಮಾಡಿಕೊಂಡಿದ್ದಾರೆ. ಒಂದು ಎಸ್​ಯುವಿ ಕಾರಿನಲ್ಲಿ ಹೋಗಬೇಕಾದ ಮಂದಿ ಬೈಕಿನ ಮೇಲೆ ಹೋಗುತ್ತಿದ್ದಾರೆ ಎಂದು ಮತ್ತೊಬ್ಬರು ಒಬ್ಬರು ಹೇಳಿದ್ದಾರೆ. ಇದಕ್ಕಿಂತ ಎತ್ತಿನಬಂಡಿಯೇ ಮೇಲು, ಸುರಕ್ಷಿತವಾಗಿ ಮತ್ತು ಕಾನೂನಿನ ತೊಡಕಿಲ್ಲದೆ ನೀವು ಪ್ರಯಾಣಿಸುತ್ತಿದ್ದಿರಿ ಎಂದಿದ್ದಾರೆ ಇನ್ನೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು