AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾವಿನ ಬಾಲ ಹಿಡಿದು ಕಚ್ಚಿಸಿಕೊಳ್ಳುತ್ತಿದ್ದ ಉರಗ ತಜ್ಞ; ಸೆಕೆಂಡುಗಳಲ್ಲಿ ಅಪಾಯದಿಂದ ಪಾರು

ಅಶೋಕ್ ಅವರು ನಾಗರ ಹಾವಿನ ಬಾಲವನ್ನು ಹಿಡಿಯುತ್ತಿದ್ದಂತೆಯೇ ಬಾಗಿಲಿನಿಂದ ಆಚೆಗೆ ಬಂದ ಹಾವು ದಾಳಿ ನಡೆಸುತ್ತದೆ. ಕಿಂಚಿತ್ತು ತಡವಾಗಿದ್ದರೂ ಅಶೋಕ್ ಅವರಿಗೆ ಹಾವು ಕಚ್ಚಿಬಿಡುತ್ತಿತ್ತು. ಕ್ಷಣಮಾತ್ರದಲ್ಲಿ ದೂರ ಸರಿದು ಹಾವಿನಿಂದ ತಮ್ಮನ್ನು ತಾವು ರಕ್ಷಿಸಿಕೊಂಡಿದ್ದಾರೆ.

Viral Video: ಹಾವಿನ ಬಾಲ ಹಿಡಿದು ಕಚ್ಚಿಸಿಕೊಳ್ಳುತ್ತಿದ್ದ ಉರಗ ತಜ್ಞ; ಸೆಕೆಂಡುಗಳಲ್ಲಿ ಅಪಾಯದಿಂದ ಪಾರು
ಹಾವಿನ ಬಾಲ ಹಿಡಿದು ಕಚ್ಚಿಸಿಕೊಳ್ಳುತ್ತಿದ್ದ ಉರಗ ತಜ್ಞ; ಸೆಕೆಂಡುಗಳಲ್ಲಿ ಅಪಾಯದಿಂದ ಪಾರು
TV9 Web
| Updated By: shruti hegde|

Updated on:Sep 07, 2021 | 2:43 PM

Share

ಹಾವು ಹಿಡಿಯುತ್ತಿರುವ ವಿಡಿಯೋಗಳು ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತವೆ. ಉರಗ ತಜ್ಞರು ಅಪಾಯಕಾರಿ ಹಾವುಗಳನ್ನು ಕೆಲ ನಿಮಿಷಗಳಲ್ಲಿ ಹಿಡಿದು ಜನರನ್ನು ದಿಗ್ಭ್ರಮೆಗೊಳಿಸುತ್ತಾರೆ. ಕೆಲವು ಬಾರಿ ಅನುಭವಿ ಹಾವು ಹಿಡಿಯುವವರೂ ಕೂಡಾ ಅಪಾಯದಲ್ಲಿ ಸಿಲುಕಿಕೊಳ್ಳಬಹುದು. ಇತ್ತೀಚಿಗೆ ವೈರಲ್ ಆದ ವಿಡಿಯೋ ಕೂಡಾ ಅಂಥದ್ದೇ! ಹಾವಿನ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಉರಗ ತಜ್ಞ ತಪ್ಪಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಹಾವು ಹಿಡಿಯುವವ ಅಶೋಕ್ ಎಂದು ಗುರುತಿಸಲಾಗಿದೆ. ಸ್ನಾನಗೃಹದಲ್ಲಿ ಅಡಗಿ ಕುಳಿತಿದ್ದ ಹಾವನ್ನು ರಕ್ಷಿಸಲು ಉರಗ ತಜ್ಞ ಅಶೋಕ್ ಮುಂದಾಗಿದ್ದಾರೆ. ವಿಡಿಯೋದಲ್ಲಿ ಗಮನಿಸುವಂತೆ ಸುಮಾರು 14 ಅಡಿ ಉದ್ದದ ನಾಗರ ಹಾವು ಹಿಡಿಯಲು ಮುಂದಾಗಿದ್ದ ಅಶೋಕ್ ಹಾವಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.

ಅಶೋಕ್ ಅವರು ನಾಗರ ಹಾವಿನ ಬಾಲವನ್ನು ಹಿಡಿಯುತ್ತಿದ್ದಂತೆಯೇ ಬಾಗಿಲಿನಿಂದ ಆಚೆಗೆ ಬಂದ ಹಾವು ದಾಳಿ ನಡೆಸುತ್ತದೆ. ಕಿಂಚಿತ್ತು ತಡವಾಗಿದ್ದರೂ ಅಶೋಕ್ ಅವರಿಗೆ ಹಾವು ಕಚ್ಚಿಬಿಡುತ್ತಿತ್ತು. ಕ್ಷಣಮಾತ್ರದಲ್ಲಿ ದೂರ ಸರಿದು ಹಾವಿನಿಂದ ತಮ್ಮನ್ನು ತಾವು ರಕ್ಷಿಸಿಕೊಂಡಿದ್ದಾರೆ. ವಿಷಪೂರಿತ ನಾಗರ ಹಾವು ಇದ್ದಕ್ಕಿದ್ದಂತೆ ತಲೆ ಎತ್ತಿ ವ್ಯಕ್ತಿಗೆ ಕಚ್ಚಲು ಮುಂದಾಗಿದೆ. ಉರಗ ತಜ್ಞ ಗಾಬರಿಯಿಂದ ಹಿಂದಕ್ಕೆ ಸರಿದಿದ್ದಾರೆ.

ಅದೃಷ್ಟವಶಾತ್ ಅಶೋಕ್ ಹಾವಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು , ಹಾವನ್ನು ಹೇಗೆ ಹಿಡಿಯಬಾರದು ಅದರಲ್ಲಿಯೂ ಮುಖ್ಯವಾಗಿ ನಾಗರ ಹಾವನ್ನು .. ಎಂದು ಬರೆಯುವ ಮೂಲಕ ಭಾರತೀಯ ಅರಣ್ಯ ಸೇವಾ ಸಧಿಕಾರಿ ಪರ್ವೀನ್ ಕಸ್ವಾನ್ ಟ್ವೀಟ್​ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ವಿಡಿಯೋ ಸುಮಾರು 60,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾವು ರಕ್ಷಕರು ಅದೃಷ್ಟ ಮಾಡಿದ್ದರು ಎಂದು ಓರ್ವರು ಹೇಳಿದ್ದಾರೆ. ವರದಿಗಳ ಪ್ರಕಾರ ಗೋಪಾಲಕೃಷ್ಣ ಭಟ್ ಎನ್ನುವವರ ಮನೆಯ ಸ್ನಾನ ಗೃಹದಲ್ಲಿ ಹಾವು ಅಡಗಿತ್ತು. ಆಗಸ್ಟ್ ತಿಂಗಳಿನಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ. ಹಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ:

Viral Video: ಕ್ಯೂಟ್ ಸ್ಮೈಲ್ ಮಾಡುತ್ತಾ ಮೇಕೆ ಜೊತೆ ಸೆಲ್ಫಿ ತೆಗೆಯೋಕೆ ಹೋದ ಯುವತಿಯ ಫಜೀತಿ ನೋಡಿ

Viral Video: ನಗುತ್ತಾ ವಧುವಿನ ಊಟದ ಬಾಳೆಯಲ್ಲಿದ್ದ ಹಪ್ಪಳ ಕದ್ದ ವರ; ಕ್ಯೂಟ್ ವಿಡಿಯೋ ವೈರಲ್

(How Not To Catch a snake video goes viral in social media)

Published On - 2:39 pm, Tue, 7 September 21

ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!