AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ‘ಮುದ್ದಿನ ವಿದ್ಯೆ’ ಬಲ್ಲವರೇ ಬಲ್ಲರು; ನೋಡಿ ಈ ವೈರಲ್ ವಿಡಿಯೋ

Injection : ಮಕ್ಕಳ ಡಾಕ್ಟರ್​ ಬರೀ ಡಾಕ್ಟರ್​ ಅಲ್ಲ. ಮಾಯಾವಿಯೂ ಎನ್ನಿಸಿಕೊಳ್ಳಬೇಕು! ಇದು ಒಂದು ರೀತಿಯ ಪ್ರೀತಿಯ ಕೌಶಲ. ಮಕ್ಕಳ ಬಗ್ಗೆ ಸಿಕ್ಕಾಪಟ್ಟೆ ಸಹಾನುಭೂತಿ ಮಮತೆ ಇದ್ದವರಿಗಷ್ಟೇ ಇದು ಸಾಧಿಸುವುದು.

ಈ ‘ಮುದ್ದಿನ ವಿದ್ಯೆ’ ಬಲ್ಲವರೇ ಬಲ್ಲರು; ನೋಡಿ ಈ ವೈರಲ್ ವಿಡಿಯೋ
ಮಗುವಿಗೆ ಇಂಜೆಕ್ಷನ್ ಕೊಡುತ್ತಿರುವ ಡಾಕ್ಟರ್
TV9 Web
| Updated By: ಶ್ರೀದೇವಿ ಕಳಸದ|

Updated on:Dec 05, 2022 | 6:35 PM

Share

Viral Video : ನಿಮ್ಮ ಬಾಲ್ಯ ನೆನಪಿಸಿಕೊಳ್ಳಿ. ಒಂದು ಇಂಜೆಕ್ಷನ್​ ತೆಗೆದುಕೊಳ್ಳಬೇಕೆಂದರೆ ನಿಮ್ಮ ಅಪ್ಪ ಅಮ್ಮ ಅದೆಷ್ಟು ಸರ್ಕಸ್ ಮಾಡಬೇಕಾಗುತ್ತಿತ್ತು. ದೊಡ್ಡವರಾದ ಮೇಲೆ ಕೂಡ ಅನೇಕರು ಇಂಜೆಕ್ಷನ್​ ಎಂದರೆ ಹೆದರುತ್ತಾರೆ. ಇನ್ನು ಪುಟ್ಟ ಮಕ್ಕಳನ್ನು ಹೇಗೆ ಸಂಭಾಳಿಸುವುದು? ಸಾಮಾನ್ಯವಾಗಿ ಮಕ್ಕಳ ಡಾಕ್ಟರ್ ಅನ್ನು ನೀವು ಗಮನಿಸಿರುತ್ತೀರಿ. ಮಗುವಿನ ಗಮನ ಬೇರೆಡೆ ಸೆಳೆದು ಪಟ್ಟನೆ ಇಂಜೆಕ್ಷನ್​ ಚುಚ್ಚಿ ಉಕ್ಕುವ ಕಣ್ಣೀರನ್ನು ಹಾಗೇ ಇಂಗಿಸಿಬಿಡುವುದು. ಈಗ ವೈರಲ್ ಆಗಿರುವ ಈ ವಿಡಿಯೋ ಅಂಥದ್ದೇ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by DrSayed Mujahid Husain (@dr_hifive)

ಮಕ್ಕಳ ವೈದ್ಯ ಡಾ ಸೈಯದ್ ಮುಜಾಹಿದ್ ಹುಸೇನ್ ಎನ್ನುವವರು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಆರು ತಿಂಗಳ ಮಗು ಮಾತ್ರ ಅದ್ಭುತ, ನಾವು ದೊಡ್ಡವರು ಅಂಜುಬುರುಕರು’ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ.  ಈ ತನಕ ಸುಮಾರು 9.8 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಅನೇಕರು ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ.

ಡಾಕ್ಟರ್ ಆಗಬೇಕೆಂದುಕೊಂಡಿರುವ ನನ್ನ ಅಂಕಲ್​ ಮಗಳಿಗೆ ಈ ವಿಡಿಯೋ ತೋರಿಸಿದ್ದೇನೆ. ಈ ವಿಡಿಯೋ ನೋಡಿ ಆಕೆ ಬಹಳ ಸ್ಫೂರ್ತಿಗೊಂಡಿದ್ದಾರೆ. ನಿಮ್ಮಂತೆಯೇ ಆಗಲು ಆಕೆ ಇಚ್ಛಿಸಿದ್ದಾರೆ ಎಂದಿದ್ದಾರೆ ಒಬ್ಬರು. ನಿಮ್ಮ ಈ ಅದ್ಭುತ ಕೆಲಸಕ್ಕೆ ಧನ್ಯವಾದ ಸರ್ ಎಂದಿದ್ದಾರೆ ಇನ್ನೊಬ್ಬರು. ದೊಡ್ಡವರಿಗೂ ಹೀಗೆಯೇ ಇಂಜೆಕ್ಷನ್ ಮಾಡುವ ಹಾಗಿದ್ದರೆ… ಎಂದಿದ್ಧಾರೆ ಮತ್ತೊಬ್ಬರು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:34 pm, Mon, 5 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?