AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ರಸಭರಿತ ತಾಜಾ ಕಲ್ಲಂಗಡಿ ಹಣ್ಣನ್ನು ಗುರುತಿಸೋದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್

ಮಾರುಕಟ್ಟೆಗೆ ಹೋದಾಗ ಹಣ್ಣು ಹಾಗೂ ತರಕಾರಿಗಳನ್ನು ಖರೀದಿಸುವಾಗ ನೀವು ಕೂಡ ಈ ಕೆಲವು ಟ್ರಿಕ್ಸ್‌ಗಳನ್ನು ತಿಳಿದಿರುವುದು ಬಹಳ ಮುಖ್ಯ. ಇಲ್ಲದಿದ್ದರೆ ತಾಜಾ, ರಸಭರಿತ ತರಕಾರಿ ಹಾಗೂ ಹಣ್ಣುಗಳನ್ನು ಖರೀದಿಸಲು ನಿಮಗೆ ಸಾಧ್ಯವಾಗುವುದಿಲ್ಲ. ನೀವೇನಾದ್ರೂ ಕಲ್ಲಂಗಡಿ ಹಣ್ಣು ಖರೀದಿ ಮಾಡ್ತೀರಾ ಅಂತಾದ್ರೆ ಈ ಮೂರು ಅಂಶಗಳನ್ನು ಗಮನದಲ್ಲಿಡಬೇಕು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸಿಹಿಯಾದ ಪ್ರೆಶ್ ಕಲ್ಲಂಗಡಿ ಹಣ್ಣನ್ನು ಆರಿಸೋದು ಹೇಗೆ ಎನ್ನುವ ಬಗೆಗಿನ ಟಿಪ್ಸ್ ಹಂಚಿಕೊಳ್ಳಲಾಗಿದೆ, ಈ ಕುರಿತಾದ ವಿಡಿಯೋ ಇಲ್ಲಿದೆ.

Video : ರಸಭರಿತ ತಾಜಾ ಕಲ್ಲಂಗಡಿ ಹಣ್ಣನ್ನು ಗುರುತಿಸೋದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್
ತಾಜಾ ಕಲ್ಲಂಗಡಿ ಖರೀದಿಸುವ ಟ್ರಿಕ್ಸ್Image Credit source: Twitter/ Aflo Images/Getty Images
ಸಾಯಿನಂದಾ
|

Updated on: Jul 03, 2025 | 4:49 PM

Share

ರಸಭರಿತ ಕಲ್ಲಂಗಡಿ (Watermelon) ಹಣ್ಣು ಕೊಟ್ಟರೆ ಯಾರು ತಾನೇ ಬೇಡ ಹೇಳ್ತಾರೆ. ಈ ಹಣ್ಣಿನಲ್ಲಿ ನೀರಿನಾಂಶ, ವಿಟಮಿನ್‌ ಸೇರಿದಂತೆ ಇನ್ನಿತ್ತರ ಪೋಷಕಾಂಶಗಳು ಹೇರಳವಾಗಿದೆ. ಇದರ ನಿಯಮಿತ ಸೇವನೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಆದರೆ ನೀವು ಮಾರುಕಟ್ಟೆಯಲ್ಲಿ ಕಡಿಮೆ ಹಾಗೂ ಅಗ್ಗದ ಬೆಲೆಗೆ ಕಲ್ಲಂಗಡಿ ಸಿಗುತ್ತದೆ ಎಂದಾದರೆ ಖರೀದಿ ಮಾಡೋದಕ್ಕೂ ಮುನ್ನ ಈ ವಿಷಯಗಳು ನಿಮಗೆ ತಿಳಿದಿರುವುದು ಬಹಳ. ಈ ಹಣ್ಣನ್ನು ಖರೀದಿ ಮಾಡುವ ಮುನ್ನ ಸಿಹಿಯಾಗಿದೆಯೇ ಎಂದು ತಿಳಿಯುವುದು ಬಹಳ ಮುಖ್ಯ. ಆದ್ರೆ ಈ ಕೆಲವು ಟ್ರಿಕ್ಸ್‌ಗಳು (tricks) ಈ ಹಣ್ಣನ್ನು ಖರೀದಿಸುವಾಗ ನಿಮ್ಮ ಉಪಯೋಗಕ್ಕೆ ಬರಬಹುದು. ಸೋಶಿಯಲ್‌ ಮೀಡಿಯಾದಲ್ಲಿ ಈ ಬಗೆಗಿನ ವಿಡಿಯೋವನ್ನು ಶೇರ್‌ ಮಾಡಿಕೊಳ್ಳಲಾಗಿದೆ

@gunsnrosesgirl3 ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಇದರಲ್ಲಿ ಕಲ್ಲಂಗಡಿ ಹಣ್ಣನ್ನು ಖರೀದಿ ಮಾಡುವಾಗ ಯಾವೆಲ್ಲಾ ಅಂಶಗಳನ್ನು ಗಮನಿಸಬೇಕು ಎನ್ನುವುದನ್ನು ಹೈಲೈಟ್ ಮಾಡಲಾಗಿದೆ.

ಇದನ್ನೂ ಓದಿ
Image
ಮಹಿಳೆಯರನ್ನು ಮೆಚ್ಚಿಸಲು ಈ ಪುರುಷರು ಮಾಡ್ತಾರೆ ವಿಶೇಷ ನೃತ್ಯ
Image
ಬೆಡ್‌ರೂಮಿನ ಕರ್ಟನ್ ಮೇಲೆ ಹೆಡೆಯೆತ್ತಿ ಕುಳಿತ ಬುಸ್ ನಾಗಪ್ಪ
Image
20 ವರ್ಷದ ನಂತರ ತಂದೆಯ ಧ್ವನಿ ಕೇಳಿದ ಬೆಂಗಳೂರಿನ ಯುವತಿ
Image
ಕೆಲಸ ಕಳೆದುಕೊಂಡ ಬೆಂಗಳೂರಿನ ಇಂಜಿನಿಯರ್ ಕಥೆಯಿದು
  •  ಆಕಾರ ನೋಡಿ ಖರೀದಿ ಮಾಡಿ : ಕಲ್ಲಂಗಡಿ ಹಣ್ಣು ಯಾವ ಆಕಾರದಲ್ಲಿದೆ ಎನ್ನುವುದು ಅದು ಸಿಹಿಯಾಗಿದೆ ಇಲ್ಲವೇ ಎಂದು ತಿಳಿಸುತ್ತದೆ, ಮೊಟ್ಟೆಯ ಆಕಾರದ ಕಲ್ಲಂಗಡಿಗಳು ಹೆಚ್ಚು ರಸಭರಿತವಾಗಿರುತ್ತದೆ. ಕಲ್ಲಂಗಡಿ ಹಣ್ಣು ವೃತ್ತಾಕಾರದಲ್ಲಿದ್ರೆ ಹೆಚ್ಚು ಸಿಹಿಯಾಗಿದೆ ಎಂದರ್ಥ.
  •  ಹಣ್ಣಿನ ಹೊರಭಾಗ ಗಮನಿಸಿ : ಕಲ್ಲಂಗಡಿ ಹಣ್ಣಿನ ಹೊರಭಾಗವು ಹಳದಿ ಬಣ್ಣದಲ್ಲಿದ್ದರೆ ಸಿಹಿಯಾಗಿದೆ ಎಂದರ್ಥ, ಬಿಳಿ ಬಣ್ಣದಲ್ಲಿದ್ದರೆ ಸಿಹಿಯಾಗಿಲ್ಲ ಎಂದು ಅರ್ಥಮಾಡಿಕೊಳ್ಳಿ.
  • ಹಣ್ಣಿನ ಮೇಲಿನ ಭಾಗದಲ್ಲಿರುವ ಗಾಢ ಹಸಿರು ಬಣ್ಣದ ಗೆರೆಯನ್ನು ಗಮನಿಸಿ : ಕಲ್ಲಂಗಡಿ ಹಣ್ಣಿನ ಮೇಲ್ಭಾಗದಲ್ಲಿ ಹಸಿರು ಬಣ್ಣದ ಗೆರೆಗಳಿರುತ್ತದೆ. ಈ ಗೆರೆಗಳು ಹತ್ತಿರವಾಗಿದ್ದರೆ ಸಿಹಿಯಾಗಿದೆ. ಇಲ್ಲದಿದ್ದರೆ ರುಚಿಕರ ಹಾಗೂ ಸಿಹಿಯಾಗಿಲ್ಲ ಎನ್ನುವುದನ್ನು ಸೂಚಿಸುತ್ತದೆ.

ಇದನ್ನೂ ಓದಿ : Video : ಮಕ್ಕಳಿಗೆ ಊಟ ಮಾಡಲು ತಾಯಂದಿರು ತರಬೇತಿ ನೀಡುವುದು ಹೀಗೆ, ಟೀಕೆಗೆ ಕಾರಣವಾಯ್ತು ಪೌಷ್ಟಿಕ ತಜ್ಞೆಯ ವಿಡಿಯೋ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಜೂನ್ 3 ರಂದು ಶೇರ್ ಮಾಡಲಾದ ಈ ವಿಡಿಯೋ ಈವರೆಗೆ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಬಳಕೆದಾರರೊಬ್ಬರು, ಈ ಕೆಲವು ವಿಷಯಗಳು ಆಸಕ್ತಿದಾಯಕವಾಗಿದೆ. ಈ ಮಹತ್ವದ ಮಾಹಿತಿಗಾಗಿ ಧನ್ಯವಾದಗಳು ಎಂದಿದ್ದಾರೆ. ಮತ್ತೊಬ್ಬರು, ಕಲ್ಲಂಗಡಿ ಹಣ್ಣುಗಳನ್ನು ಆಯ್ಕೆ ಮಾಡಲು ಇದೊಂದು ಉತ್ತಮ ಮಾರ್ಗ ಎಂದಿದ್ದಾರೆ. ಇನ್ನೊಬ್ಬರು, ಈ ವಿಷಯಗಳು ನನಗೆ ತಿಳಿದಿರಲಿಲ್ಲ, ಈ ಕೆಲವು ಟ್ರಿಕ್ಸ್‌ಗಳನ್ನು ಬಳಸಿ ಹಣ್ಣು ಖರೀದಿಸಿ ನೋಡಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ