AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಸ್ತೆ ಬದಿ ಕಸ ಹಾಕುವವರಿಗೆ ವಿಶಿಷ್ಟ ಬ್ಯಾನರ್ ಹಾಕಿ ವಾರ್ನಿಂಗ್‌ ಕೊಟ್ಟ ಪೌರಕಾರ್ಮಿಕರು

ಸ್ವಚ್ಛತೆಯ ಬಗ್ಗೆ ಜಾಗೃತಿ ವಹಿಸಿ ಅಂದ್ರು ಯಾರು ಕೂಡ ಕ್ಯಾರೆ ಎನ್ನದವರೇ ಹೆಚ್ಚು. ಎಲ್ಲೆಂದರಲ್ಲಿ ಕಸ ಸುರಿದು ಹೋಗ್ತಾರೆ. ಇದೀಗ ಅಂತಹವರಿಗಾಗಿಯೇ ರಸ್ತೆ ಬದಿ ಬ್ಯಾನರ್ ಹಾಕಿ ಪೌರಕಾರ್ಮಿಕರು ಖಡಕ್ ವಾರ್ನಿಂಗ್ ನೀಡಿದ್ದಾರೆ . ವ್ಯಕ್ತಿಯೊಬ್ಬ ಈ ಬ್ಯಾನರ್ ಹಾಕಿರುವುದನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಹಂಚಿಕೊಂಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ರಸ್ತೆ ಬದಿ ಕಸ ಹಾಕುವವರಿಗೆ ವಿಶಿಷ್ಟ ಬ್ಯಾನರ್ ಹಾಕಿ ವಾರ್ನಿಂಗ್‌ ಕೊಟ್ಟ ಪೌರಕಾರ್ಮಿಕರು
ಸಾಂದರ್ಭಿಕ ಚಿತ್ರImage Credit source: Instagram/ stock.adobe.com
ಸಾಯಿನಂದಾ
|

Updated on:Aug 27, 2026 | 9:28 PM

Share

ಇತ್ತೀಚಿಗಂತೂ ರಸ್ತೆ ಬದಿಗಳಲ್ಲಿ, ಕಂಡ ಕಂಡ ಸ್ಥಳಗಳಲ್ಲಿ ಕಸ ಎಸೆದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಕಸ ಎಸೆದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ರೂ ಮಾತ್ರ ಜನ ಇದಕ್ಕೆಲ್ಲ ಕ್ಯಾರೇ ಅನ್ನುತ್ತಿಲ್ಲ. ಮಾತು ಕೇಳದ ಜನರಿಗೆ ತಕ್ಕ ಪಾಠವನ್ನು ಕಲಿಸಬೇಕೆಂದು ಹುಬ್ಬಳ್ಳಿಯ (Hubli)  ರಸ್ತೆ ಬದಿಯಲ್ಲಿ, ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ವಿಶಿಷ್ಟ ಬ್ಯಾನರ್ (unique banner) ಹಾಕಲಾಗಿದೆ. ವ್ಯಕ್ತಿಯೊಬ್ಬ ವಿಡಿಯೋ ಹಂಚಿಕೊಂಡು ಪೌರ ಕಾರ್ಮಿಕರ ಕಷ್ಟವನ್ನು ಇಲ್ಲಿ ವಿವರಿಸಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ವಿದ್ಯಾವಂತರೆನಿಸಿಕೊಂಡವರಿಗೆ ನಾಗರಿಕ ಪ್ರಜ್ಞೆಯೇ ಇಲ್ಲ ಎಂದು ಟೀಕಿಸಿದ್ದಾರೆ.

ನಾಣಿ ಬಿ ಜಿ (Nani B G) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಯುವಕನೊಬ್ಬ ಹುಬ್ಬಳ್ಳಿಯಲ್ಲಿ ನಡೆದುಕೊಂಡು ಹೋಗುವಾಗ ರಸ್ತೆ ಬದಿಯಲ್ಲಿ ಹಾಕಿದ್ದ ಬ್ಯಾನರ್ ಗಮನಿಸಿದ್ದಾನೆ. ವಿಡಿಯೋ ಮಾಡಿಕೊಂಡು ಪೌರ ಕಾರ್ಮಿಕರ ಕಷ್ಟವನ್ನು ವಿವರಿಸಿದ್ದಾನೆ.

ವೈರಲ್ ವಿಡಿಯೋ ಇಲ್ಲಿದೆ

ಈ ಬ್ಯಾನರ್‌ನಲ್ಲಿ, ಇಲ್ಲಿ ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಈ ಕಸದಂತೆ ನಿಮ್ಮ ಜೀವನವು ಆದಷ್ಟು ಬೇಗನೆ ಕೊಳೆತು ಹೋಗಲಿ ನೊಂದ ಪೌರಕಾರ್ಮಿಕರು’ ಎಂದು ಬರೆದಿರುವುದನ್ನು ಕಾಣಬಹುದು.

ಇದನ್ನೂ ಓದಿ: “22,000 ರೂ. ಖರ್ಚಾಗಿದೆ, ಕ್ಷಮಿಸಿ”: ಕದ್ದ ಚಿನ್ನ-ಹಣ ವಾಪಸ್ ತಂದು ಸಾರಿ ಪತ್ರವಿಟ್ಟ ಕಳ್ಳರು

ಈ ವಿಡಿಯೋ ಐದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಎಲ್ಲಾ ತಿಳ್ಕೊಳ್ಳಿ, ನಮ್ಮ ಹುಬ್ಬಳ್ಳಿಯನ್ನು ಸ್ವಚ್ಛವಾಗಿಡಿ ಎಂದು ಬರೆದಿದ್ದಾರೆ. ಮತ್ತೊಬ್ಬರು, ಕಸ ಹಾಕುವವರಿಗೆ ಈ ಬ್ಯಾನರ್ ಓದುವ ತಾಳ್ಮೆ ಇಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ಪೌರ ಕಾರ್ಮಿಕರನ್ನು ನೋಡುವಾಗ ತುಂಬಾ ಬೇಜಾರ್ ಆಗುತ್ತೆ, ಆದರೆ ಈ ಜನಗಳಿಗೆ ಬುದ್ಧಿನೇ ಇಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Wed, 26 August 26

Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು