AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಮಿಯಾ ರಷ್ಯಾ ಸಂಪರ್ಕ ಸೇತುವೆಯ ಮೇಲೆ ಭಾರೀ ಸ್ಫೋಟ

Russia : ಇಂದು ಬೆಳಗ್ಗೆ ಕ್ರಿಮಿಯಾ ಮತ್ತು ರಷ್ಯಾ ನಡುವಿನ ಏಕೈಕ ಸೇತುವೆ ಕಾರ್ ಬಾಂಬ್​ ಸ್ಫೋಟಕ್ಕೆ ಒಳಗಾಗಿದ್ದು, ರೈಲಿನಲ್ಲಿ ಸಾಗಿಸುತ್ತಿದ್ದ ಏಳು ತೈಲ ಟ್ಯಾಂಕರ್​ಗಳು ಬೆಂಕಿಗೆ ಆಹುತಿಯಾಗಿವೆ.

ಕ್ರಿಮಿಯಾ ರಷ್ಯಾ ಸಂಪರ್ಕ ಸೇತುವೆಯ ಮೇಲೆ ಭಾರೀ ಸ್ಫೋಟ
Huge Explosion On Only Bridge Linking Crimea To Russia
TV9 Web
| Edited By: ಶ್ರೀದೇವಿ ಕಳಸದ|

Updated on: Oct 08, 2022 | 3:11 PM

Share

Viral Video : ರಷ್ಯಾ ಮತ್ತು ಕ್ರಿಮಿಯಾ ಸಂಪರ್ಕ ಸೇತುವೆಯ ಮೇಲೆ ಇಂದು ಬೆಳಗ್ಗೆ 6.07 ಗಂಟೆಗೆ ಕಾರ್ ಬಾಂಬ್ ಸ್ಫೋಟಗೊಂಡ ಪರಿಣಾಮ ರೈಲಿನಲ್ಲಿ ಸಾಗಿಸುತ್ತಿದ್ದ ಏಳು ತೈಲ ಟ್ಯಾಂಕರ್‌ಗಳು ಬೆಂಕಿ ಹೊತ್ತಿ ಉರಿದಿವೆ. ಇದರಿಂದ ಸೇತುವೆಯು ಭಾರೀ ಪ್ರಮಾಣದ ಹಾನಿಗೆ ಒಳಗಾಗಿದೆ. ಈ ಕುಕೃತ್ಯದ  ಕುರಿತು ರಷ್ಯಾ ತಮಿಖಾ ಸಮಿತಿಯು ತನಿಖೆ ಆರಂಭಿಸಿದೆ. ರಷ್ಯಾದ ಸುದ್ದಿ ಸಂಸ್ಥೆಗಳು ಈ ರಾಷ್ಟ್ರೀಯ ವಿರೋಧಿ ಚಟುವಟಿಕೆಯ ಕುರಿತು ವರದಿ ಮಾಡಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ತಮನ್ ದ್ವೀಪಕ್ಕೆ ಹತ್ತಿರದಲ್ಲಿರುವ ಕ್ರಿಮಿಯನ್ ಸೇತುವೆಯ ಬಳಿ ಟ್ರಕ್ ಮೂಲಕ ಬಾಂಬ್ ಸ್ಫೋಟಿಸಲಾಗಿದೆ. ಈ ಪರಿಣಾಮವಾಗಿ ಏಳು ತೈಲ ಟ್ಯಾಂಕರ್​ಗಳು ಬೆಂಕಿಗೆ ಆಹುತಿಯಾಗಿವೆ. ಎರಡು ಲೇನ್‌ಗಳು ಭಾಗಶಃ ಕುಸಿದಿವೆ. 2018 ರಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉದ್ಘಾಟಿಸಿದ್ದ ಈ ಸೇತುವೆ ಇದೀಗ ಸಮುದ್ರದೊಳಗೆ ಭಾಗಶಃ ಕುಸಿದು ಬಿದ್ದಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದೃಶ್ಯದ ವಿಡಿಯೋ ವೈರಲ್ ಆಗುತ್ತಿದೆ.

ರಷ್ಯಾದ ತನಿಖಾ ಸಮಿತಿಯು ಘಟನಾ ಸ್ಥಳಕ್ಕೆ ತನಿಖಾಧಿಕಾರಿಗಳನ್ನು ಕಳುಹಿಸಲಾಗಿದೆ. ಈ ದುರ್ಘಟನೆಗೆ ಕಾರಣ ಮತ್ತು ಇದರಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತನಿಖಾಧಿಕಾರಿಗಳು ನಿರತರಾಗಿದ್ದಾರೆ.

2014ರಲ್ಲಿ ಉಕ್ರೇನಿನಿಂದ ಪ್ರಸ್ತುತ ಸೇತುವೆಯನ್ನು ಪುಟಿನ್ ರಷ್ಯಾದ ಸ್ವಾಧೀನಕ್ಕೆ ಒಳಪಡಿಸಿದ್ದರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​