AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಮಿಯಾ ರಷ್ಯಾ ಸಂಪರ್ಕ ಸೇತುವೆಯ ಮೇಲೆ ಭಾರೀ ಸ್ಫೋಟ

Russia : ಇಂದು ಬೆಳಗ್ಗೆ ಕ್ರಿಮಿಯಾ ಮತ್ತು ರಷ್ಯಾ ನಡುವಿನ ಏಕೈಕ ಸೇತುವೆ ಕಾರ್ ಬಾಂಬ್​ ಸ್ಫೋಟಕ್ಕೆ ಒಳಗಾಗಿದ್ದು, ರೈಲಿನಲ್ಲಿ ಸಾಗಿಸುತ್ತಿದ್ದ ಏಳು ತೈಲ ಟ್ಯಾಂಕರ್​ಗಳು ಬೆಂಕಿಗೆ ಆಹುತಿಯಾಗಿವೆ.

ಕ್ರಿಮಿಯಾ ರಷ್ಯಾ ಸಂಪರ್ಕ ಸೇತುವೆಯ ಮೇಲೆ ಭಾರೀ ಸ್ಫೋಟ
Huge Explosion On Only Bridge Linking Crimea To Russia
TV9 Web
| Updated By: ಶ್ರೀದೇವಿ ಕಳಸದ|

Updated on: Oct 08, 2022 | 3:11 PM

Share

Viral Video : ರಷ್ಯಾ ಮತ್ತು ಕ್ರಿಮಿಯಾ ಸಂಪರ್ಕ ಸೇತುವೆಯ ಮೇಲೆ ಇಂದು ಬೆಳಗ್ಗೆ 6.07 ಗಂಟೆಗೆ ಕಾರ್ ಬಾಂಬ್ ಸ್ಫೋಟಗೊಂಡ ಪರಿಣಾಮ ರೈಲಿನಲ್ಲಿ ಸಾಗಿಸುತ್ತಿದ್ದ ಏಳು ತೈಲ ಟ್ಯಾಂಕರ್‌ಗಳು ಬೆಂಕಿ ಹೊತ್ತಿ ಉರಿದಿವೆ. ಇದರಿಂದ ಸೇತುವೆಯು ಭಾರೀ ಪ್ರಮಾಣದ ಹಾನಿಗೆ ಒಳಗಾಗಿದೆ. ಈ ಕುಕೃತ್ಯದ  ಕುರಿತು ರಷ್ಯಾ ತಮಿಖಾ ಸಮಿತಿಯು ತನಿಖೆ ಆರಂಭಿಸಿದೆ. ರಷ್ಯಾದ ಸುದ್ದಿ ಸಂಸ್ಥೆಗಳು ಈ ರಾಷ್ಟ್ರೀಯ ವಿರೋಧಿ ಚಟುವಟಿಕೆಯ ಕುರಿತು ವರದಿ ಮಾಡಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ತಮನ್ ದ್ವೀಪಕ್ಕೆ ಹತ್ತಿರದಲ್ಲಿರುವ ಕ್ರಿಮಿಯನ್ ಸೇತುವೆಯ ಬಳಿ ಟ್ರಕ್ ಮೂಲಕ ಬಾಂಬ್ ಸ್ಫೋಟಿಸಲಾಗಿದೆ. ಈ ಪರಿಣಾಮವಾಗಿ ಏಳು ತೈಲ ಟ್ಯಾಂಕರ್​ಗಳು ಬೆಂಕಿಗೆ ಆಹುತಿಯಾಗಿವೆ. ಎರಡು ಲೇನ್‌ಗಳು ಭಾಗಶಃ ಕುಸಿದಿವೆ. 2018 ರಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉದ್ಘಾಟಿಸಿದ್ದ ಈ ಸೇತುವೆ ಇದೀಗ ಸಮುದ್ರದೊಳಗೆ ಭಾಗಶಃ ಕುಸಿದು ಬಿದ್ದಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದೃಶ್ಯದ ವಿಡಿಯೋ ವೈರಲ್ ಆಗುತ್ತಿದೆ.

ರಷ್ಯಾದ ತನಿಖಾ ಸಮಿತಿಯು ಘಟನಾ ಸ್ಥಳಕ್ಕೆ ತನಿಖಾಧಿಕಾರಿಗಳನ್ನು ಕಳುಹಿಸಲಾಗಿದೆ. ಈ ದುರ್ಘಟನೆಗೆ ಕಾರಣ ಮತ್ತು ಇದರಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತನಿಖಾಧಿಕಾರಿಗಳು ನಿರತರಾಗಿದ್ದಾರೆ.

2014ರಲ್ಲಿ ಉಕ್ರೇನಿನಿಂದ ಪ್ರಸ್ತುತ ಸೇತುವೆಯನ್ನು ಪುಟಿನ್ ರಷ್ಯಾದ ಸ್ವಾಧೀನಕ್ಕೆ ಒಳಪಡಿಸಿದ್ದರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ