AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದ ಶಾಲಾ ಬಸ್ಸಿನಲ್ಲಿ ಹೆಬ್ಬಾವು ಪತ್ತೆ, ವಿಡಿಯೋ ವೈರಲ್

Python in School Bus : ಉತ್ತರ ಪ್ರದೇಶದ ರಾಯಬರೇಲಿಯ ಶಾಲಾ ಬಸ್ಸಿನಲ್ಲಿ ಹೆಬ್ಬಾವೊಂದು ಕಾಣಿಸಿಕೊಂಡಿದೆ. ಅರಣ್ಯ ರಕ್ಷಣಾ ಇಲಾಖೆಯು ಅದನ್ನು ಕಾಡಿಗೆ ಸುರಕ್ಷಿತವಾಗಿ ಮರಳಿಸಿದೆ.

ಉತ್ತರಪ್ರದೇಶದ ಶಾಲಾ ಬಸ್ಸಿನಲ್ಲಿ ಹೆಬ್ಬಾವು ಪತ್ತೆ, ವಿಡಿಯೋ ವೈರಲ್
Huge Python Crawls Inside School Bus In UP Rescued By Forest Officials
TV9 Web
| Updated By: ಶ್ರೀದೇವಿ ಕಳಸದ|

Updated on:Oct 17, 2022 | 11:36 AM

Share

Viral Video : ಸುಮ್ಮನೆ ಕುಳಿತಿರುತ್ತೀರಿ. ಇದ್ದಕ್ಕಿದ್ದ ಹಾಗೆ ನಿಮ್ಮ ಬಳಿ ಹಲ್ಲಿಯೋ, ಜೇಡವೋ, ಜಿರಳೆಯೋ ಕಾಣಿಸಿಕೊಂಡರೆ ನಿಮಗೇನೆನ್ನಿಸುತ್ತದೆ? ಕಿರಿಕಿರಿ ಅಥವಾ ಭಯದಿಂದ ಮಾರುದ್ದ ದೂರ ಸರಿಯುತ್ತೀರಿ ತಾನೆ? ಅದೇ ಹಾವು ಕಾಣಿಸಿಕೊಂಡರೆ ಓಡಿಯೇ ಬಿಡುತ್ತೀರಿ. ದೊಡ್ಡ ಗಾತ್ರದ ಹೆಬ್ಬಾವು ಕಂಡರಂತೂ… ಹೇಳುವುದೇ ಬೇಡ. ಇದೀಗ ಉತ್ತರ ಪ್ರದೇಶದ ಲಕ್ನೋದಲ್ಲಿರುವ ಶಾಲಾ ಬಸ್ಸಿನಲ್ಲಿ ಹೆಬ್ಬಾವೊಂದು ನುಸುಳಿದ ವಿಡಿಯೋ ವೈರಲ್ ಆಗಿದೆ. ವಿಡಿಯೋ ನೋಡಿಯೇ ಆತಂಕವಾಗುತ್ತಿದೆ ಇನ್ನು…

‘ಭಾನುವಾರದಂದು ರಾಯಬರೇಲಿಯ ರಯಾನ್ ಇಂಟರ್ನ್ಯಾಷನಲ್ ಸ್ಕೂಲ್​ ಬಸ್ಸಿನಲ್ಲಿ ನಡೆದ ಘಟನೆಯಾಗಿದೆ. ಬಸ್ಸಿನಲ್ಲಿ ಈ ಹೆಬ್ಬಾವು ಕಾಣಿಸಿಕೊಂಡಾಗ ಸಹಜವಾಗಿ ಆತಂಕವಾಗಿದೆ. ಅರಣ್ಯ ಇಲಾಖೆಯ ರಕ್ಷಣಾ ತಂಡಕ್ಕೆ ಸುದ್ದಿ ಮುಟ್ಟಿಸಿದ ನಂತರ ಸುಮಾರು ಒಂದು ತಾಸಿನತನಕ ಕಾರ್ಯಾಚರಣೆ ನಡೆಸಲಾಗಿದೆ. ಅರಣ್ಯ ಸಿಬ್ಬಂದಿ ಹೆಬ್ಬಾವನ್ನು ಸುರಕ್ಷಿತವಾಗಿ ಕಾಡಿಗೆ ತಲುಪಿಸಿದೆ. ಯಾವುದೇ ರೀತಿಯ ಅವಘಡ ಸಂಭವಿಸಿಲ್ಲ’ ಎಂದಿದ್ದಾರೆ ಸಿಟಿ ಮ್ಯಾಜಿಸ್ಟ್ರೇಟ್ ಪಲ್ಲವಿ ಮಿಶ್ರಾ.

ಸದ್ಯ ಭಾನುವಾರವಾದ್ದರಿಂದ ಶಾಲೆಗೆ ರಜೆ. ಮಕ್ಕಳು ಬಸ್ಸಿನಲ್ಲಿದ್ದಾಗ ಇದು ಕಾಣಿಸಿಕೊಂಡಿದ್ದರೆ ಏನು ಗತಿ ಎಂದು ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಎಂಥಾ ದೊಡ್ಡ ಹಾವು ಇದು, ಎಷ್ಟು ಕಷ್ಟಪಟ್ಟಿರಬೇಕು ಅರಣ್ಯ ಸಿಬ್ಬಂದಿ ಇದನ್ನು ಹಿಡಿಯಲು ಎಂದಿದ್ದಾರೆ ಕೆಲವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:32 am, Mon, 17 October 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ