ಉತ್ತರಪ್ರದೇಶದ ಶಾಲಾ ಬಸ್ಸಿನಲ್ಲಿ ಹೆಬ್ಬಾವು ಪತ್ತೆ, ವಿಡಿಯೋ ವೈರಲ್

Python in School Bus : ಉತ್ತರ ಪ್ರದೇಶದ ರಾಯಬರೇಲಿಯ ಶಾಲಾ ಬಸ್ಸಿನಲ್ಲಿ ಹೆಬ್ಬಾವೊಂದು ಕಾಣಿಸಿಕೊಂಡಿದೆ. ಅರಣ್ಯ ರಕ್ಷಣಾ ಇಲಾಖೆಯು ಅದನ್ನು ಕಾಡಿಗೆ ಸುರಕ್ಷಿತವಾಗಿ ಮರಳಿಸಿದೆ.

ಉತ್ತರಪ್ರದೇಶದ ಶಾಲಾ ಬಸ್ಸಿನಲ್ಲಿ ಹೆಬ್ಬಾವು ಪತ್ತೆ, ವಿಡಿಯೋ ವೈರಲ್
Huge Python Crawls Inside School Bus In UP Rescued By Forest Officials
Follow us
| Updated By: ಶ್ರೀದೇವಿ ಕಳಸದ

Updated on:Oct 17, 2022 | 11:36 AM

Viral Video : ಸುಮ್ಮನೆ ಕುಳಿತಿರುತ್ತೀರಿ. ಇದ್ದಕ್ಕಿದ್ದ ಹಾಗೆ ನಿಮ್ಮ ಬಳಿ ಹಲ್ಲಿಯೋ, ಜೇಡವೋ, ಜಿರಳೆಯೋ ಕಾಣಿಸಿಕೊಂಡರೆ ನಿಮಗೇನೆನ್ನಿಸುತ್ತದೆ? ಕಿರಿಕಿರಿ ಅಥವಾ ಭಯದಿಂದ ಮಾರುದ್ದ ದೂರ ಸರಿಯುತ್ತೀರಿ ತಾನೆ? ಅದೇ ಹಾವು ಕಾಣಿಸಿಕೊಂಡರೆ ಓಡಿಯೇ ಬಿಡುತ್ತೀರಿ. ದೊಡ್ಡ ಗಾತ್ರದ ಹೆಬ್ಬಾವು ಕಂಡರಂತೂ… ಹೇಳುವುದೇ ಬೇಡ. ಇದೀಗ ಉತ್ತರ ಪ್ರದೇಶದ ಲಕ್ನೋದಲ್ಲಿರುವ ಶಾಲಾ ಬಸ್ಸಿನಲ್ಲಿ ಹೆಬ್ಬಾವೊಂದು ನುಸುಳಿದ ವಿಡಿಯೋ ವೈರಲ್ ಆಗಿದೆ. ವಿಡಿಯೋ ನೋಡಿಯೇ ಆತಂಕವಾಗುತ್ತಿದೆ ಇನ್ನು…

‘ಭಾನುವಾರದಂದು ರಾಯಬರೇಲಿಯ ರಯಾನ್ ಇಂಟರ್ನ್ಯಾಷನಲ್ ಸ್ಕೂಲ್​ ಬಸ್ಸಿನಲ್ಲಿ ನಡೆದ ಘಟನೆಯಾಗಿದೆ. ಬಸ್ಸಿನಲ್ಲಿ ಈ ಹೆಬ್ಬಾವು ಕಾಣಿಸಿಕೊಂಡಾಗ ಸಹಜವಾಗಿ ಆತಂಕವಾಗಿದೆ. ಅರಣ್ಯ ಇಲಾಖೆಯ ರಕ್ಷಣಾ ತಂಡಕ್ಕೆ ಸುದ್ದಿ ಮುಟ್ಟಿಸಿದ ನಂತರ ಸುಮಾರು ಒಂದು ತಾಸಿನತನಕ ಕಾರ್ಯಾಚರಣೆ ನಡೆಸಲಾಗಿದೆ. ಅರಣ್ಯ ಸಿಬ್ಬಂದಿ ಹೆಬ್ಬಾವನ್ನು ಸುರಕ್ಷಿತವಾಗಿ ಕಾಡಿಗೆ ತಲುಪಿಸಿದೆ. ಯಾವುದೇ ರೀತಿಯ ಅವಘಡ ಸಂಭವಿಸಿಲ್ಲ’ ಎಂದಿದ್ದಾರೆ ಸಿಟಿ ಮ್ಯಾಜಿಸ್ಟ್ರೇಟ್ ಪಲ್ಲವಿ ಮಿಶ್ರಾ.

ಸದ್ಯ ಭಾನುವಾರವಾದ್ದರಿಂದ ಶಾಲೆಗೆ ರಜೆ. ಮಕ್ಕಳು ಬಸ್ಸಿನಲ್ಲಿದ್ದಾಗ ಇದು ಕಾಣಿಸಿಕೊಂಡಿದ್ದರೆ ಏನು ಗತಿ ಎಂದು ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಎಂಥಾ ದೊಡ್ಡ ಹಾವು ಇದು, ಎಷ್ಟು ಕಷ್ಟಪಟ್ಟಿರಬೇಕು ಅರಣ್ಯ ಸಿಬ್ಬಂದಿ ಇದನ್ನು ಹಿಡಿಯಲು ಎಂದಿದ್ದಾರೆ ಕೆಲವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:32 am, Mon, 17 October 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ