AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಸಾಮಾನ್ಯವಾಗಿ ಲಿಪ್ಸ್ಟಿಕ್ ಇಷ್ಟಪಡದೇ ಇರುವ ಮಹಿಳೆಯರು ಬಹಳ ಕಡಿಮೆ. ಆದರೆ ಇಲ್ಲೊಬ್ಬಳು ಯುವತಿ ಪತಿ ತಾನು ಹೇಳಿದ ಲಿಪ್‌ಸ್ಟಿಕ್ ಬದಲಿಗೆ ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡು ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಅಕ್ಷತಾ ವರ್ಕಾಡಿ
|

Updated on: Jul 17, 2024 | 11:39 AM

Share

ಉತ್ತರ ಪ್ರದೇಶ: ಕೆಂಪು ಬದಲು, ಪತಿ ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡ ಪತ್ನಿ ಕೋರ್ಟ್​​​​ ಮೆಟ್ಟಿಲೇರಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮದುವೆಯಾದ ಕೇವಲ 6 ತಿಂಗಳಿಗೆ ಪತಿಯಿಂದ ವಿಚ್ಛೇದನಕ್ಕಾಗಿ ಪತಿ ನಿರ್ಧಾರಕ್ಕೆ ಬಂದಿದ್ದಾಳೆ. ವಿಚ್ಛೇದನಕ್ಕೆ ಕಾರಣವೆನೆಂದು ವಕೀಲರು ಕೇಳಿದಾಗ ಮಹಿಳೆ ಲಿಪ್​​​ಸ್ಟಿಕ್​​ನಿಂದಾದ ಜಗಳವನ್ನು ವಿವರಿಸಿದ್ದಾಳೆ. ಈಕೆಯ ಜಗಳದ ವಿಷಯ ಕೇಳಿ ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಶಾಕ್ ಆಗಿದ್ದಾರೆ.

ಕೌಟುಂಬಿಕ ಸಲಹಾ ಕೇಂದ್ರದ ಸಲಹೆಗಾರ ಡಾ.ಸತೀಶ್ ಖಿರ್ವಾರ್ ಹೇಳುವಂತೆ “ಆಗ್ರಾದ ಯುವತಿಯೊಬ್ಬಳು 6 ತಿಂಗಳ ಹಿಂದೆ ಮಥುರಾದ ಯುವಕನೊಂದಿಗೆ ವಿವಾಹವಾಗಿದ್ದಾಳೆ. ಗಂಡ ದಿನಗೂಲಿ ಕೆಲಸಗಾರ. 20 ದಿನಗಳ ಹಿಂದೆ ಯುವತಿ ಗಂಡನಲ್ಲಿ ಕೆಂಪು ಬಣ್ಣದ ಲಿಪ್ಸ್ಟಿಕ್ ತರಲು ಹೇಳಿದ್ದಾನೆ. ಆದರೆ ಆತ ತಿಳಿಯದೇ ಮರೂನ್​​ ಬಣ್ಣದ ಲಿಪ್ಸ್ಟಿಕ್ ತಂದಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ತಂದಿರೋ ಲಿಪ್‌ಸ್ಟಿಕ್ ಬದಲಾಯಿಸಿಕೊಂಡು ಬರುವಂತೆ ಹೇಳಿದ್ದಾಳೆ. ಆದ್ರೆ ಗಂಡ, ಬಣ್ಣದಲ್ಲಿ ಹೆಚ್ಚು ವ್ಯತ್ಯಾಸ ಇಲ್ಲ. ಅದನ್ನೇ ಬಳಸುವಂತೆ ಹೇಳಿದ್ದಕ್ಕೆ ಕೋಪಗೊಂಡ ಪತ್ನಿ ಡಿವೋರ್ಸ್​​​ ನೀಡಲು ಮುಂದಾಗಿದ್ದಾಳೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?

ದಂಪತಿಯನ್ನು ಕೂರಿಸಿ ಕೌನ್ಸೆಲಿಂಗ್ ಮಾಡಿದ್ದು, ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಇಬ್ಬರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಇಬ್ಬರೂ ಜೊತೆಯಾಗಿ ಹೋಗಿದ್ದಾರೆ ಎಂದು ಡಾ. ಖಿರ್ವಾರ್ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್