AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಸಾಮಾನ್ಯವಾಗಿ ಲಿಪ್ಸ್ಟಿಕ್ ಇಷ್ಟಪಡದೇ ಇರುವ ಮಹಿಳೆಯರು ಬಹಳ ಕಡಿಮೆ. ಆದರೆ ಇಲ್ಲೊಬ್ಬಳು ಯುವತಿ ಪತಿ ತಾನು ಹೇಳಿದ ಲಿಪ್‌ಸ್ಟಿಕ್ ಬದಲಿಗೆ ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡು ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಅಕ್ಷತಾ ವರ್ಕಾಡಿ
|

Updated on: Jul 17, 2024 | 11:39 AM

Share

ಉತ್ತರ ಪ್ರದೇಶ: ಕೆಂಪು ಬದಲು, ಪತಿ ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡ ಪತ್ನಿ ಕೋರ್ಟ್​​​​ ಮೆಟ್ಟಿಲೇರಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮದುವೆಯಾದ ಕೇವಲ 6 ತಿಂಗಳಿಗೆ ಪತಿಯಿಂದ ವಿಚ್ಛೇದನಕ್ಕಾಗಿ ಪತಿ ನಿರ್ಧಾರಕ್ಕೆ ಬಂದಿದ್ದಾಳೆ. ವಿಚ್ಛೇದನಕ್ಕೆ ಕಾರಣವೆನೆಂದು ವಕೀಲರು ಕೇಳಿದಾಗ ಮಹಿಳೆ ಲಿಪ್​​​ಸ್ಟಿಕ್​​ನಿಂದಾದ ಜಗಳವನ್ನು ವಿವರಿಸಿದ್ದಾಳೆ. ಈಕೆಯ ಜಗಳದ ವಿಷಯ ಕೇಳಿ ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಶಾಕ್ ಆಗಿದ್ದಾರೆ.

ಕೌಟುಂಬಿಕ ಸಲಹಾ ಕೇಂದ್ರದ ಸಲಹೆಗಾರ ಡಾ.ಸತೀಶ್ ಖಿರ್ವಾರ್ ಹೇಳುವಂತೆ “ಆಗ್ರಾದ ಯುವತಿಯೊಬ್ಬಳು 6 ತಿಂಗಳ ಹಿಂದೆ ಮಥುರಾದ ಯುವಕನೊಂದಿಗೆ ವಿವಾಹವಾಗಿದ್ದಾಳೆ. ಗಂಡ ದಿನಗೂಲಿ ಕೆಲಸಗಾರ. 20 ದಿನಗಳ ಹಿಂದೆ ಯುವತಿ ಗಂಡನಲ್ಲಿ ಕೆಂಪು ಬಣ್ಣದ ಲಿಪ್ಸ್ಟಿಕ್ ತರಲು ಹೇಳಿದ್ದಾನೆ. ಆದರೆ ಆತ ತಿಳಿಯದೇ ಮರೂನ್​​ ಬಣ್ಣದ ಲಿಪ್ಸ್ಟಿಕ್ ತಂದಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ತಂದಿರೋ ಲಿಪ್‌ಸ್ಟಿಕ್ ಬದಲಾಯಿಸಿಕೊಂಡು ಬರುವಂತೆ ಹೇಳಿದ್ದಾಳೆ. ಆದ್ರೆ ಗಂಡ, ಬಣ್ಣದಲ್ಲಿ ಹೆಚ್ಚು ವ್ಯತ್ಯಾಸ ಇಲ್ಲ. ಅದನ್ನೇ ಬಳಸುವಂತೆ ಹೇಳಿದ್ದಕ್ಕೆ ಕೋಪಗೊಂಡ ಪತ್ನಿ ಡಿವೋರ್ಸ್​​​ ನೀಡಲು ಮುಂದಾಗಿದ್ದಾಳೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?

ದಂಪತಿಯನ್ನು ಕೂರಿಸಿ ಕೌನ್ಸೆಲಿಂಗ್ ಮಾಡಿದ್ದು, ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಇಬ್ಬರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಇಬ್ಬರೂ ಜೊತೆಯಾಗಿ ಹೋಗಿದ್ದಾರೆ ಎಂದು ಡಾ. ಖಿರ್ವಾರ್ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!