AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಸಾಮಾನ್ಯವಾಗಿ ಲಿಪ್ಸ್ಟಿಕ್ ಇಷ್ಟಪಡದೇ ಇರುವ ಮಹಿಳೆಯರು ಬಹಳ ಕಡಿಮೆ. ಆದರೆ ಇಲ್ಲೊಬ್ಬಳು ಯುವತಿ ಪತಿ ತಾನು ಹೇಳಿದ ಲಿಪ್‌ಸ್ಟಿಕ್ ಬದಲಿಗೆ ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡು ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಅಕ್ಷತಾ ವರ್ಕಾಡಿ
|

Updated on: Jul 17, 2024 | 11:39 AM

Share

ಉತ್ತರ ಪ್ರದೇಶ: ಕೆಂಪು ಬದಲು, ಪತಿ ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡ ಪತ್ನಿ ಕೋರ್ಟ್​​​​ ಮೆಟ್ಟಿಲೇರಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮದುವೆಯಾದ ಕೇವಲ 6 ತಿಂಗಳಿಗೆ ಪತಿಯಿಂದ ವಿಚ್ಛೇದನಕ್ಕಾಗಿ ಪತಿ ನಿರ್ಧಾರಕ್ಕೆ ಬಂದಿದ್ದಾಳೆ. ವಿಚ್ಛೇದನಕ್ಕೆ ಕಾರಣವೆನೆಂದು ವಕೀಲರು ಕೇಳಿದಾಗ ಮಹಿಳೆ ಲಿಪ್​​​ಸ್ಟಿಕ್​​ನಿಂದಾದ ಜಗಳವನ್ನು ವಿವರಿಸಿದ್ದಾಳೆ. ಈಕೆಯ ಜಗಳದ ವಿಷಯ ಕೇಳಿ ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಶಾಕ್ ಆಗಿದ್ದಾರೆ.

ಕೌಟುಂಬಿಕ ಸಲಹಾ ಕೇಂದ್ರದ ಸಲಹೆಗಾರ ಡಾ.ಸತೀಶ್ ಖಿರ್ವಾರ್ ಹೇಳುವಂತೆ “ಆಗ್ರಾದ ಯುವತಿಯೊಬ್ಬಳು 6 ತಿಂಗಳ ಹಿಂದೆ ಮಥುರಾದ ಯುವಕನೊಂದಿಗೆ ವಿವಾಹವಾಗಿದ್ದಾಳೆ. ಗಂಡ ದಿನಗೂಲಿ ಕೆಲಸಗಾರ. 20 ದಿನಗಳ ಹಿಂದೆ ಯುವತಿ ಗಂಡನಲ್ಲಿ ಕೆಂಪು ಬಣ್ಣದ ಲಿಪ್ಸ್ಟಿಕ್ ತರಲು ಹೇಳಿದ್ದಾನೆ. ಆದರೆ ಆತ ತಿಳಿಯದೇ ಮರೂನ್​​ ಬಣ್ಣದ ಲಿಪ್ಸ್ಟಿಕ್ ತಂದಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ತಂದಿರೋ ಲಿಪ್‌ಸ್ಟಿಕ್ ಬದಲಾಯಿಸಿಕೊಂಡು ಬರುವಂತೆ ಹೇಳಿದ್ದಾಳೆ. ಆದ್ರೆ ಗಂಡ, ಬಣ್ಣದಲ್ಲಿ ಹೆಚ್ಚು ವ್ಯತ್ಯಾಸ ಇಲ್ಲ. ಅದನ್ನೇ ಬಳಸುವಂತೆ ಹೇಳಿದ್ದಕ್ಕೆ ಕೋಪಗೊಂಡ ಪತ್ನಿ ಡಿವೋರ್ಸ್​​​ ನೀಡಲು ಮುಂದಾಗಿದ್ದಾಳೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?

ದಂಪತಿಯನ್ನು ಕೂರಿಸಿ ಕೌನ್ಸೆಲಿಂಗ್ ಮಾಡಿದ್ದು, ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಇಬ್ಬರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಇಬ್ಬರೂ ಜೊತೆಯಾಗಿ ಹೋಗಿದ್ದಾರೆ ಎಂದು ಡಾ. ಖಿರ್ವಾರ್ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ