AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಸಾಮಾನ್ಯವಾಗಿ ಲಿಪ್ಸ್ಟಿಕ್ ಇಷ್ಟಪಡದೇ ಇರುವ ಮಹಿಳೆಯರು ಬಹಳ ಕಡಿಮೆ. ಆದರೆ ಇಲ್ಲೊಬ್ಬಳು ಯುವತಿ ಪತಿ ತಾನು ಹೇಳಿದ ಲಿಪ್‌ಸ್ಟಿಕ್ ಬದಲಿಗೆ ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡು ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಬೇರೆ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ
ಅಕ್ಷತಾ ವರ್ಕಾಡಿ
|

Updated on: Jul 17, 2024 | 11:39 AM

Share

ಉತ್ತರ ಪ್ರದೇಶ: ಕೆಂಪು ಬದಲು, ಪತಿ ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡ ಪತ್ನಿ ಕೋರ್ಟ್​​​​ ಮೆಟ್ಟಿಲೇರಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮದುವೆಯಾದ ಕೇವಲ 6 ತಿಂಗಳಿಗೆ ಪತಿಯಿಂದ ವಿಚ್ಛೇದನಕ್ಕಾಗಿ ಪತಿ ನಿರ್ಧಾರಕ್ಕೆ ಬಂದಿದ್ದಾಳೆ. ವಿಚ್ಛೇದನಕ್ಕೆ ಕಾರಣವೆನೆಂದು ವಕೀಲರು ಕೇಳಿದಾಗ ಮಹಿಳೆ ಲಿಪ್​​​ಸ್ಟಿಕ್​​ನಿಂದಾದ ಜಗಳವನ್ನು ವಿವರಿಸಿದ್ದಾಳೆ. ಈಕೆಯ ಜಗಳದ ವಿಷಯ ಕೇಳಿ ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಶಾಕ್ ಆಗಿದ್ದಾರೆ.

ಕೌಟುಂಬಿಕ ಸಲಹಾ ಕೇಂದ್ರದ ಸಲಹೆಗಾರ ಡಾ.ಸತೀಶ್ ಖಿರ್ವಾರ್ ಹೇಳುವಂತೆ “ಆಗ್ರಾದ ಯುವತಿಯೊಬ್ಬಳು 6 ತಿಂಗಳ ಹಿಂದೆ ಮಥುರಾದ ಯುವಕನೊಂದಿಗೆ ವಿವಾಹವಾಗಿದ್ದಾಳೆ. ಗಂಡ ದಿನಗೂಲಿ ಕೆಲಸಗಾರ. 20 ದಿನಗಳ ಹಿಂದೆ ಯುವತಿ ಗಂಡನಲ್ಲಿ ಕೆಂಪು ಬಣ್ಣದ ಲಿಪ್ಸ್ಟಿಕ್ ತರಲು ಹೇಳಿದ್ದಾನೆ. ಆದರೆ ಆತ ತಿಳಿಯದೇ ಮರೂನ್​​ ಬಣ್ಣದ ಲಿಪ್ಸ್ಟಿಕ್ ತಂದಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ತಂದಿರೋ ಲಿಪ್‌ಸ್ಟಿಕ್ ಬದಲಾಯಿಸಿಕೊಂಡು ಬರುವಂತೆ ಹೇಳಿದ್ದಾಳೆ. ಆದ್ರೆ ಗಂಡ, ಬಣ್ಣದಲ್ಲಿ ಹೆಚ್ಚು ವ್ಯತ್ಯಾಸ ಇಲ್ಲ. ಅದನ್ನೇ ಬಳಸುವಂತೆ ಹೇಳಿದ್ದಕ್ಕೆ ಕೋಪಗೊಂಡ ಪತ್ನಿ ಡಿವೋರ್ಸ್​​​ ನೀಡಲು ಮುಂದಾಗಿದ್ದಾಳೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಾಯ್ಲೆಟ್‌ಗೆ ಬಳಸುವ ಹವಾಯಿ ಚಪ್ಪಲಿಯ ಬೆಲೆ ಬರೋಬ್ಬರಿ 1 ಲಕ್ಷ ರೂ, ಎಲ್ಲಿ ಗೊತ್ತಾ?

ದಂಪತಿಯನ್ನು ಕೂರಿಸಿ ಕೌನ್ಸೆಲಿಂಗ್ ಮಾಡಿದ್ದು, ಕುಟುಂಬ ಸಲಹಾ ಕೇಂದ್ರದ ಸಿಬ್ಬಂದಿ ಇಬ್ಬರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಇಬ್ಬರೂ ಜೊತೆಯಾಗಿ ಹೋಗಿದ್ದಾರೆ ಎಂದು ಡಾ. ಖಿರ್ವಾರ್ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?