AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ರಯಾಣದ ವೇಳೆ ಪತ್ನಿಯ ಮುಖಕ್ಕೆ ಸೂರ್ಯನ ಕಿರಣ ಸೋಕದಂತೆ ಪರದೆ ಹಿಡಿದು ಕುಳಿತ ಪತಿ

ಮಗುವಿನಂತೆ ನೋಡಿಕೊಳ್ಳುವ ಗಂಡ ಸಿಕ್ಕರೆ ಹೆಣ್ಣಿಗೆ ಅದಕ್ಕಿಂತ ಅದೃಷ್ಟ ಏನಿದೆ. ಇದಕ್ಕೆ ಸಾಕ್ಷಿಯಂತಿದೆ ಈ ದೃಶ್ಯ. ಬಸ್ಸಿನಲ್ಲಿ ಕಿಟಕಿ ಪಕ್ಕದಲ್ಲಿ ಕುಳಿತು ನಿದ್ರಿಸುತ್ತಿರುವ ಪತ್ನಿಗೆ ಸೂರ್ಯನ ಬೆಳಕು ಸೋಕದಂತೆ ಪತಿ ನೋಡಿಕೊಂಡಿದ್ದಾನೆ. ಪ್ರಯಾಣಿಕನೊಬ್ಬ ಈ ದೃಶ್ಯವನ್ನು ಸೆರೆ ಹಿಡಿದಿದ್ದು, ಈ ಪೋಸ್ಟ್ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಪ್ರಯಾಣದ ವೇಳೆ ಪತ್ನಿಯ ಮುಖಕ್ಕೆ ಸೂರ್ಯನ ಕಿರಣ ಸೋಕದಂತೆ ಪರದೆ ಹಿಡಿದು ಕುಳಿತ ಪತಿ
ವೈರಲ್‌ ಪೋಸ್ಟ್‌ Image Credit source: Reddit
ಸಾಯಿನಂದಾ
|

Updated on:Nov 30, 2025 | 11:47 AM

Share

ಗಂಡನು (Husband) ಮಡದಿಯ ನೋವು ನಲಿವಿನಲ್ಲಿ ಜೊತೆಯಾಗಬೇಕು. ಕಷ್ಟದ ಸಂದರ್ಭದಲ್ಲಿ ಆಕೆಯ ಕಣ್ಣಲ್ಲಿ ನೀರು ಬರದಂತೆ ನೋಡಿಕೊಳ್ಳಬೇಕು. ಪ್ರತಿಯೊಬ್ಬ ಹೆಣ್ಣು ಕೂಡ ಪತಿಯಾದವನು ತನ್ನ ಬಗ್ಗೆ ಪ್ರೀತಿ, ಕಾಳಜಿ ವಹಿಸಬೇಕು ಎಂದು ಬಯಸುತ್ತಾಳೆ. ಈ ವ್ಯಕ್ತಿಗೆ ತನ್ನ ಪತ್ನಿ ಮೇಲೆ ಎಷ್ಟು ಕಾಳಜಿ ಇದೆ ಎನ್ನುವುದನ್ನು ಈ ಫೋಟೋವೇ ಹೇಳುತ್ತಿದೆ. ಹೌದು, ಬಸ್ಸಿನಲ್ಲಿ ಕಿಟಕಿ ಪಕ್ಕದಲ್ಲಿ ಮಲಗಿರುವ ಹೆಂಡ್ತಿಯ ಮುಖಕ್ಕೆ ಸೂರ್ಯನ ಕಿರಣ ಬೀಳದಂತೆ ತಡೆಯಲು ಪರದೆಗಳನ್ನು ಎಳೆದು ಹಿಡಿದು ವ್ಯಕ್ತಿಯೊಬ್ಬ ಕುಳಿತಿದ್ದಾನೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಪತ್ನಿಯ ಮೇಲೆ ಈ ವ್ಯಕ್ತಿಗಿರುವ ಅತೀವ ಪ್ರೀತಿ ಕಂಡು ಬೆರಗಾಗಿದ್ದಾರೆ.

r/Twentiesindia ಹೆಸರಿನ ರೆಡ್ಡಿಟ್ ಖಾತೆಯಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಹಂಚಿಕೊಂಡಿದ್ದು, ಬಸ್ಸಿನಲ್ಲಿ ಪ್ರಯಾಣಿಸುವ ವೇಳೆ ಸೆರೆ ಹಿಡಿದ ಫೋಟೋವನ್ನು ಅಪ್ಲೋಡ್ ಮಾಡಲಾಗಿದೆ. ಈ ಪೋಸ್ಟ್‌ಗೆ ಪ್ರಯತ್ನಗಳು ನಿಜವಾಗಿಯೂ ಭಾರತೀಯ ಪುರುಷರಿಗೆ ತಮಾಷೆಯೇ? ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಜನದಟ್ಟಣೆಯಿಂದ ತುಂಬಿದ್ದ ಬಸ್ಸಿನಲ್ಲಿ ಒಬ್ಬ ವ್ಯಕ್ತಿ ನಿದ್ರಿಸುತ್ತಿರುವ ಹೆಂಡತಿಯ ಮುಖದ ಮೇಲೆ  ಸೂರ್ಯನ ಬೆಳಕು ಬೀಳದಂತೆ 40 ನಿಮಿಷಗಳ ಕಾಲ ಕಿಟಕಿ ಪರದೆಗಳನ್ನು ಹಿಡಿದಿದ್ದ ಎಂದು ಬರೆದುಕೊಂಡಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

Efforts really a joke for Indian Men? byu/GiggityGlenn69 inTwentiesIndia

ಇದನ್ನೂ ಓದಿ:ರಾಜಸ್ಥಾನದಲ್ಲಿ ನಡೆಯುತ್ತಿದೆ ಇಂಡೋ-ಅಮೆರಿಕನ್ ಉದ್ಯಮಿಗಳ ಅದ್ದೂರಿ ವಿವಾಹ, ಟ್ರಂಪ್​​​​​​ ಮಗ ಸೇರಿದಂತೆ 40 ದೇಶಗಳ ವಿಐಪಿಗಳು ಭಾಗಿ

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಒಬ್ಬ ಬಳಕೆದಾರ ದೂರಾಗುವ ದಂಪತಿಗಳ ನಡುವೆ ಕಷ್ಟ ಸುಖದಲ್ಲಿ ಜತೆಯಾಗಿ ನಿಲ್ಲುವ ಇಂತಹ ದಂಪತಿಯನ್ನು ನೋಡಿದಾಗ ಖುಷಿಯಾಗುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಇದಕ್ಕಿಂತ ಹೆಣ್ಣಿಗೆ ಇನ್ನೇನು ಬೇಕು ಎಂದರೆ, ಮತ್ತೊಬ್ಬರು ಶುದ್ಧ ಪ್ರೀತಿಯನ್ನು ಸಾರ್ವಜನಿಕವಾಗಿ ನೋಡುವುದು ಅಪರೂಪ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:47 am, Sun, 30 November 25

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್