AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಬಸ್ಸಿನ ಕಿಟಕಿ ಹತ್ತಿ ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆಟೋ ಚಾಲಕ

ರಸ್ತೆಯಲ್ಲಿ ವಾಹನಗಳನ್ನು ಚಲಾಯಿಸುವಾಗ ಕೆಲವೊಮ್ಮೆ ಸವಾರರ ನಡುವೆ ಜಗಳಗಳು ಏರ್ಪಡುತ್ತವೆ. ಹೌದು, ಕ್ಷುಲ್ಲಕ ಕಾರಣಗಳಿಗೆ ಸವಾರರು ಹಾಗೂ ಚಾಲಕರ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಟದವರೆಗೆ ತಲುಪುವುದಿದೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಆಟೋ ಹೋಗಲು ದಾರಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ಆರ್ ಟಿಸಿ ಬಸ್ ಚಾಲಕನ ಮೇಲೆ ಆಟೋ ಚಾಲಕನು ಹಲ್ಲೆಗೆ ಯತ್ನಿಸಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಚಲಿಸುತ್ತಿದ್ದ ಬಸ್ಸಿನ ಕಿಟಕಿ ಹತ್ತಿ ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆಟೋ ಚಾಲಕ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on: May 23, 2025 | 10:05 AM

Share

ಹೈದರಾಬಾದ್, ಮೇ 23: ಕೆಲವು ಜನರೇ ಹಾಗೆ, ಸಣ್ಣ ವಿಷಯಕ್ಕೆ ಸಿಕ್ಕರೆ ಸಾಕು ಅದನ್ನೇ ದೊಡ್ಡದು ಮಾಡಿ ಜಗಳಕ್ಕೆ ಇಳಿದು ಬಿಡುತ್ತಾರೆ. ಅದರಲ್ಲಿಯೂ ಈ ವಾಹನ ಸವಾರರು ಹಾಗೂ ಚಾಲಕರ ನಡುವೆ ಆಗಾಗ ಜಗಳಗಳು ನಡೆಯುತ್ತಲೇ ಇರುತ್ತದೆ. ಕೆಲವೊಮ್ಮೆ ನಡುರಸ್ತೆಯಲ್ಲಿ ರೌಡಿಗಳಂತೆಯೇ ವರ್ತಿಸುತ್ತಾರೆ. ಹೈದರಾಬಾದ್ ನ ಮಿಯಾಪುರ (Miyapur of Hyderabad) ದಲ್ಲಿ ಆರ್ ಟಿಸಿ ಬಸ್ ಚಾಲಕ (RTC Bus Driver) ನ ಮೇಲೆ ಆಟೋ ಚಾಲಕ (Auto driver) ನೊಬ್ಬ ಹಲ್ಲೆಗೆ ಯತ್ನಿಸಿದ್ದಾನೆ. ಆಟೋ ಹೋಗಲು ದಾರಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ಆಟೋ ಚಾಲಕನು ಕೋಪಗೊಂಡು ಹಲ್ಲೆ ಮಾಡಲು ಮುಂದಾಗಿದ್ದಾನೆ. ಆರ್‌ಟಿಸಿ ಬಸ್ ಕಾಚೆಗುಡದಿಂದ ಪತೆಂಚೇರಿಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

@greatandhranews ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಆಟೋ ಚಾಲಕನು ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನಿಸುತ್ತಿರುವುದನ್ನು ನೋಡಬಹುದು. ಆಟೋ ಹೋಗಲು ದಾರಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ಆಟೋ ಚಾಲಕನು ಕೋಪಗೊಂಡಿದ್ದು, ಚಲಿಸುತ್ತಿದ್ದ ಬಸ್ಸಿನ ಕಿಟಕಿ ಹತ್ತಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಬಹುದು. ಅದೇ ವೇಳೆ ಬಸ್ ಚಾಲಕನು ಪ್ರಯಾಣಿಕರ ಬಳಿ ವಿಡಿಯೋ ಮಾಡಿ ಎಂದಿದ್ದಾನೆ. ಇತ್ತ ಆಟೋ ಚಾಲಕನು ಗಾಡಿಯನ್ನು ಸೈಡ್ ಗೆ ಹಾಕಿ ಎನ್ನುತ್ತಾ, ಬಸ್ಸಿನೊಳಗೆ ನುಗ್ಗಿ ಚಾಲಕನ ಮೊಬೈಲ್ ಕಿತ್ತುಕೊಳ್ಳುವುದನ್ನು ಕಾಣಬಹುದು. ಆ ಬಳಿಕ ಆಟೋ ಚಾಲಕ ಹಾಗೂ ಬಸ್ ಚಾಲಕನ ನಡುವೆ ವಾಗ್ವಾದ ನಡೆದಿದೆ.

ಇದನ್ನೂ ಓದಿ
Image
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
Image
ಸೆಕೆ ಎಂದು ಎಟಿಎಂ ಎಸಿಗೆ ಬಂದು ಕುಳಿತ ಕುಟುಂಬ
Image
ಬೈಕ್ ಓಡಿಸುತ್ತಿರುವಾಗಲೇ ಹಿಂಬದಿ ಕುಳಿತ ಪತ್ನಿಯಿಂದ ಪತಿಗ ಬಿತ್ತು ಒದೆ
Image
ರಾಂಗ್ ರೂಟ್​​​ನಲ್ಲಿ ಬಂದು ಬೈಕ್​​​ಗೆ ಡಿಕ್ಕಿ ಹೊಡೆದ ಕಾರು

ಇದನ್ನೂ ಓದಿ : ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಮೇ 21 ರಂದು ಶೇರ್ ಮಾಡಲಾದ ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರು ಈ ವಿಡಿಯೋಗೆ ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು, ನಾಚಿಕೆಗೇಡು ಎಂದಿದ್ದಾರೆ. ಇನ್ನೊಬ್ಬರು, ದಯವಿಟ್ಟು ಈ ಸಮಸ್ಯೆಯನ್ನು ಗಮನಿಸಿ ಸರ್ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಬಸ್ ಚಾಲಕರು ರಸ್ತೆಯಲ್ಲಿರುವ ಇತರ ವಾಹನಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್