AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸಿ, ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದ ಕಾರು

ಭಾರೀ ಮಳೆಯಿಂದಾಗಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ನೀರಿನಿಂದ ಆವೃತವಾಗಿತ್ತು. ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿಲ್ಲದ ಕಾರಣ, ಅವರು ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್ ಮಾಡಿದ್ದಾರೆ. ಪರಿಣಾಮ ಕಾರು ನೇರವಾಗಿ ಹಳ್ಳದೊಳಗೆ ಬಿದ್ದು ಮುಳುಗಿದೆ.

Kerala: ಗೂಗಲ್ ಮ್ಯಾಪ್  ನಂಬಿ ಕಾರು ಓಡಿಸಿ, ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದ ಕಾರು
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on:May 25, 2024 | 3:31 PM

Share

ಕೊಟ್ಟಾಯಂ, ಕೇರಳ: ಹೈದರಾಬಾದ್‌ನ ಪ್ರವಾಸಿಗರ ತಂಡವೊಂದು ಕೇರಳಕ್ಕೆ ಪ್ರವಾಸಕ್ಕೆಂದು ಕಾರಿನಲ್ಲಿ ಬಂದು, ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್ ಮಾಡಿ, ಕಾರನ್ನು ಸೀದಾ ಹಳ್ಳದೊಳಗೆ ಇಳಿಸಿದ್ದಾರೆ. ಪರಿಣಾಮ ಕಾರು ಸಂಪೂರ್ಣವಾಗಿ ಮುಳುಗಿ ಹೋಗಿದ್ದು, ಸ್ಥಳೀಯ ನಿವಾಸಿಗಳ ಸಹಾಯದಿಂದ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ತಡರಾತ್ರಿ ಮಹಿಳೆ ಸೇರಿದಂತೆ ನಾಲ್ವರ ಗುಂಪು ಅಲಪ್ಪುಳ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಪ್ರಯಾಣಿಸುತ್ತಿದ್ದ ವೇಳೆ ರಸ್ತೆಯು ಭಾರೀ ಮಳೆಯಿಂದಾಗಿ ಹೊಳೆಯಿಂದ ತುಂಬಿ ಹರಿಯುವ ನೀರಿನಿಂದ ಆವೃತವಾಗಿತ್ತು ಮತ್ತು ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿಲ್ಲದ ಕಾರಣ, ಅವರು ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್ ಮಾಡಿದ್ದಾರೆ. ಪರಿಣಾಮ ಕಾರು ನೇರವಾಗಿ ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದೆ.

ಮುಳಗುತ್ತಿದ್ದ ಪ್ರವಾಸಿಗರ ಕೂಗು ಕೇಳುತ್ತಿದ್ದಂತೆ ಸ್ಥಳೀಯರು ಧಾವಿಸಿ ರಕ್ಷಣೆ ಮಾಡಿದ್ದಾರೆ. ಕಾರು ಸಂಪೂರ್ಣವಾಗಿ ಮುಳುಗಿದ್ದು “ವಾಹನವನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಕಡುತುರುತಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಕೇರಳದಲ್ಲಿ ಇಂತಹ ಘಟನೆ ವರದಿಯಾಗುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಇಬ್ಬರು ವೈದ್ಯರು ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್​ ಮಾಡಿದ ಪರಿಣಾಮ ಕಾರು ಸಮೇತ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದರು.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:29 pm, Sat, 25 May 24

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್