AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸಿ, ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದ ಕಾರು

ಭಾರೀ ಮಳೆಯಿಂದಾಗಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ನೀರಿನಿಂದ ಆವೃತವಾಗಿತ್ತು. ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿಲ್ಲದ ಕಾರಣ, ಅವರು ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್ ಮಾಡಿದ್ದಾರೆ. ಪರಿಣಾಮ ಕಾರು ನೇರವಾಗಿ ಹಳ್ಳದೊಳಗೆ ಬಿದ್ದು ಮುಳುಗಿದೆ.

Kerala: ಗೂಗಲ್ ಮ್ಯಾಪ್  ನಂಬಿ ಕಾರು ಓಡಿಸಿ, ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದ ಕಾರು
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on:May 25, 2024 | 3:31 PM

Share

ಕೊಟ್ಟಾಯಂ, ಕೇರಳ: ಹೈದರಾಬಾದ್‌ನ ಪ್ರವಾಸಿಗರ ತಂಡವೊಂದು ಕೇರಳಕ್ಕೆ ಪ್ರವಾಸಕ್ಕೆಂದು ಕಾರಿನಲ್ಲಿ ಬಂದು, ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್ ಮಾಡಿ, ಕಾರನ್ನು ಸೀದಾ ಹಳ್ಳದೊಳಗೆ ಇಳಿಸಿದ್ದಾರೆ. ಪರಿಣಾಮ ಕಾರು ಸಂಪೂರ್ಣವಾಗಿ ಮುಳುಗಿ ಹೋಗಿದ್ದು, ಸ್ಥಳೀಯ ನಿವಾಸಿಗಳ ಸಹಾಯದಿಂದ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ತಡರಾತ್ರಿ ಮಹಿಳೆ ಸೇರಿದಂತೆ ನಾಲ್ವರ ಗುಂಪು ಅಲಪ್ಪುಳ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಪ್ರಯಾಣಿಸುತ್ತಿದ್ದ ವೇಳೆ ರಸ್ತೆಯು ಭಾರೀ ಮಳೆಯಿಂದಾಗಿ ಹೊಳೆಯಿಂದ ತುಂಬಿ ಹರಿಯುವ ನೀರಿನಿಂದ ಆವೃತವಾಗಿತ್ತು ಮತ್ತು ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿಲ್ಲದ ಕಾರಣ, ಅವರು ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್ ಮಾಡಿದ್ದಾರೆ. ಪರಿಣಾಮ ಕಾರು ನೇರವಾಗಿ ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದೆ.

ಮುಳಗುತ್ತಿದ್ದ ಪ್ರವಾಸಿಗರ ಕೂಗು ಕೇಳುತ್ತಿದ್ದಂತೆ ಸ್ಥಳೀಯರು ಧಾವಿಸಿ ರಕ್ಷಣೆ ಮಾಡಿದ್ದಾರೆ. ಕಾರು ಸಂಪೂರ್ಣವಾಗಿ ಮುಳುಗಿದ್ದು “ವಾಹನವನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಕಡುತುರುತಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಕೇರಳದಲ್ಲಿ ಇಂತಹ ಘಟನೆ ವರದಿಯಾಗುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಇಬ್ಬರು ವೈದ್ಯರು ಗೂಗಲ್ ಮ್ಯಾಪ್ ನಂಬಿ ಡ್ರೈವಿಂಗ್​ ಮಾಡಿದ ಪರಿಣಾಮ ಕಾರು ಸಮೇತ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದರು.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:29 pm, Sat, 25 May 24

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!