AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕ್ರಿಕೆಟ್ ಆಡುತ್ತಿರುವಾಗಲೇ ಬಂದ ಜವರಾಯ, ಆಟದ ಮೈದಾನದಲ್ಲೇ ಕುಸಿದು ಬಿದ್ದ ವಿದ್ಯಾರ್ಥಿ

ಸಾವು ಹೇಗೆ ಬರುತ್ತದೆ ಎಂದು ಊಹೆ ಮಾಡಲು ಸಾಧ್ಯವಿಲ್ಲ. ನಮ್ಮ ಜೊತೆಗೆ ಇದ್ದ ವ್ಯಕ್ತಿಯೂ ಇನ್ನು ಐದು ನಿಮಿಷದಲ್ಲಿ ನಂತರ ನಮ್ಮ ಜೊತೆಗೆ ಇರುತ್ತಾನೆ ಎಂದು ಹೇಳುವುದು ಕಷ್ಟ. ಈಗಂತೂ ಎಲ್ಲಿ ನೋಡಿದರಲ್ಲಿಯೂ ಸಾವಿನ ಸುದ್ದಿಯೇ ಕೇಳುವಂತಾಗಿಬಿಟ್ಟಿದೆ. ಇದೀಗ ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯಾರ್ಥಿಯೂ ಹೃದಯಾಘಾತಗೊಳಗಾಗಿ ಆಟದ ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಪಂದ್ಯಾಟದ ವೇಳೆ ಆಟದ ಮೈದಾನದಲ್ಲೇ ಕುಸಿದು ಬೀಳುವ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Viral: ಕ್ರಿಕೆಟ್ ಆಡುತ್ತಿರುವಾಗಲೇ ಬಂದ ಜವರಾಯ, ಆಟದ ಮೈದಾನದಲ್ಲೇ ಕುಸಿದು ಬಿದ್ದ ವಿದ್ಯಾರ್ಥಿ
ವೈರಲ್​​ ವಿಡಿಯೋ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 05, 2025 | 3:47 PM

ಹೈದರಾಬಾದ್, ಏಪ್ರಿಲ್ 5 : ಹುಟ್ಟು ಸಾವು ಸಹಜ. ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯೂ ಸಾಯಲೇಬೇಕು. ಆದರೆ ಇತ್ತೀಚೆಗಿನ ದಿನಗಳಲ್ಲಿ ಸಾವು ಯಾವಾಗ, ಹೇಗೆ ಬರುತ್ತದೆ ಹೇಳುವುದು ಕಷ್ಟವಾಗಿದೆ. ಅದರಲ್ಲಿ ಈ ಹೃದಯಾಘಾತ (heart attack) ದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಆದರೆ ಇದೀಗ ಬಿ.ಟೆಕ್ (B.Tech) ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬನು ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾನೆ ಹೌದು, ವಿದ್ಯಾರ್ಥಿನಿ ವಿನಯ್ (vinay) ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೂ ಹೈದರಾಬಾದ್ (hyderbad) ನ ಮೆಡ್ಚಲ್ ಜಿಲ್ಲೆ(Medchal District) ಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧ ಪಟ್ಟ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಹೌದು, ಖಮ್ಮಂ ಜಿಲ್ಲೆಯ ವಿನಯ್ ಮೆಡ್ಚಲ್ ಜಿಲ್ಲೆಯ ಕಂಡ್ಲಕೋಯದಲ್ಲಿರುವ ಸಿಎಂಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಇದೇ ಏಪ್ರಿಲ್ 4 ರಂದು ಸಿಎಂಆರ್ ಕಾಲೇಜಿನಲ್ಲಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಯೋಜಿಸಲಾಗಿತ್ತು. ಶುಕ್ರವಾರ ಸಂಜೆಯ ವೇಳೆ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಕಾಲೇಜು ಮೈದಾನಕ್ಕೆ ತೆರಳಿದ್ದು, ಆಟದ ಮೈದಾನದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವಿನಯ್ ಇದ್ದಕ್ಕಿದ್ದಂತೆ ಎದೆನೋವಿನಿಂದ ಕುಸಿದು ಬಿದ್ದಿದ್ದಾನೆ.

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ ( ಈ ವಿಡಿಯೋ ಎಕ್ಸ್​​ ಖಾತೆಯಿಂದ ಹಂಚಿಕೊಳ್ಳಲಾಗಿದೆ)

ಆ ತಕ್ಷಣವೇ ವಿದ್ಯಾರ್ಥಿಗೆ ಸಿಪಿಆರ್ ಮಾಡಲಾಗಿದ್ದು, ಬಳಿಕ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆಯಲ್ಲಿ ಪರೀಕ್ಷಿಸಿದ ವೈದ್ಯರು ಅವನು ಆಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ತಮ್ಮ ಕಣ್ಣೇದುರು ಪ್ರಾಣ ಕಳೆದುಕೊಂಡ ಸ್ನೇಹಿತನನ್ನು ನೆನೆದು ಸಹಪಾಠಿಗಳು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: ಇವನಿಗೆಷ್ಟು ಧೈರ್ಯ ನೋಡಿ, ಸಿಂಹದ ಬಾಲ ಹಿಡಿದು ಎಳೆದಾಡುತ್ತಿರುವ ಬಾಲಕ, ವಿಡಿಯೋ ವೈರಲ್

ಈ ವಿಡಿಯವನ್ನು telugu scribe ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳು ಮೈದಾನದಲ್ಲಿ ಕ್ರಿಕೆಟ್ ಆಟ ಆಡುವುದನ್ನು ನೋಡಬಹುದು. ಈ ವೇಳೆಯಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವಿದ್ಯಾರ್ಥಿ ಕುಸಿದು ಬಿದ್ದಿದ್ದಾನೆ. ಮೈದಾನದಲ್ಲೇ ಇದ್ದ ವಿದ್ಯಾರ್ಥಿಗಳು ಓಡೋಡಿ ಬಂದಿದ್ದು ಸಿಪಿಆರ್ ಮಾಡಿದ್ದಾರೆ. ಈ ವಿಡಿಯೋ ಮೂವತ್ತೊಂಬತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳು ಪಡೆದುಕೊಂಡು ಕಾಮೆಂಟ್ ಗಳು ಹರಿದು ಬಂದಿದೆ. ಬಳಕೆದಾರರೊಬ್ಬರು, ‘ಈ ಸಾವು ನ್ಯಾಯವೇ’ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರರು, ‘ಇಂತಹ ಹೃದಯಾಘಾತ ಪ್ರಕರಣಗಳು ನಿಜಕ್ಕೂ ಭಯಾನಕವಾಗಿದೆ’ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

(ಇಲ್ಲಿ ನೀಡಲಾಗಿರುವ ವಿಡಿಯೋ ಹಾಗೂ ನಮ್ಮ ಸುದ್ದಿ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ, ಇದನ್ನು ಸುದ್ದಿಗಾಗಿ ಮಾತ್ರ ಬಳಸಲಾಗಿದೆ.)

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ